ಕಾಗೇರಿ ನಾಮಪತ್ರಕ್ಕೆ ವರಿಷ್ಠರ ತಾಕೀತು

ಸಚಿವರ ಪಟ್ಟಿ ಸಹ ವರಿಷ್ಠರ 'ಕಣ್ಗಾವಲಿ'ನಲ್ಲೇ ಅಂತಿಮವಾಗುವ ಸಾಧ್ಯತೆ

Team Udayavani, Jul 31, 2019, 5:30 AM IST

30

ಬೆಂಗಳೂರು: ವಿಧಾನಸಭಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ಕೆ.ಜಿ.ಬೋಪಯ್ಯ ಅವರ ಹೆಸರೇ ಅಂತಿಮಗೊಂಡಿತ್ತಾದರೂ ಕೊನೆಯ ಕ್ಷಣದಲ್ಲಿ ಅಚ್ಚರಿ ಎಂಬಂತೆ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ನಾಮಪತ್ರ ಸಲ್ಲಿಸಿದ್ದು, ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ.

ಈ ಬಾರಿ ಬಿಜೆಪಿ ಸರ್ಕಾರ ರಚನೆಯಾಗುತ್ತಿದ್ದಂತೆ ವರಿಷ್ಠರು ರಾಜ್ಯ ಬಿಜೆಪಿ ನಾಯಕರ ಚಟುವಟಿಕೆ, ಕಾರ್ಯ ವೈಖರಿಯ ಮೇಲೆ ನಿಗಾ ವಹಿಸಿದಂತಿದ್ದು, ವರಿಷ್ಠರ ಸೂಚನೆಯೆಂತೆಯೇ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸಭಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಮೂಲಗಳು ಹೇಳಿವೆ. ಸರ್ಕಾರ ರಚನೆ ಹಾಗೂ ಸ್ಪೀಕರ್‌ ಸ್ಥಾನದ ಅಭ್ಯರ್ಥಿ ಆಯ್ಕೆ ಸಂದರ್ಭದಲ್ಲಿ ವರಿಷ್ಠರ ನಡೆ ಕುತೂಹಲ ಮೂಡಿಸಿದೆ. ಮುಂದಿನ ವಾರ ಅಂತಿಮವಾಗಲಿದೆ ಎನ್ನಲಾಗಿರುವ 20 ಸಚಿವರ ಪಟ್ಟಿಯೂ ವರಿಷ್ಠರ ‘ಕಣ್ಗಾವಲಿ’ನಲ್ಲೇ ಅಂತಿಮವಾಗುವ ಸಾಧ್ಯತೆ ಇದ್ದು, ಲಾಬಿಯಲ್ಲಿ ನಿರತರಾಗಿರುವ ಸಚಿವಾಕಾಂಕ್ಷಿಗಳಲ್ಲಿ ತಳಮಳ ಸೃಷ್ಟಿಸಿದಂತಿದೆ.

ವಿಧಾನಸಭೆಯಲ್ಲಿ ಯಡಿಯೂರಪ್ಪ ಅವರು ಸೋಮವಾರ ವಿಶ್ವಾಸ ಮತ ಸಾಬೀತುಪಡಿಸುತ್ತಿದ್ದಂತೆ ವಿಧಾನಸಭಾಧ್ಯಕ್ಷ ಸ್ಥಾನಕ್ಕೆ ಕೆ.ಆರ್‌.ರಮೇಶ್‌ ಕುಮಾರ್‌ ರಾಜೀನಾಮೆ ನೀಡಿದ್ದರು. ಆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಸ್ಪೀಕರ್‌ ಸ್ಥಾನಕ್ಕೆ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಶುರುವಾಯಿತು. ಮಾಜಿ ಸ್ಪೀಕರ್‌ಗಳಾದ ಕೆ.ಜಿ.ಬೋಪಯ್ಯ, ಜಗದೀಶ್‌ ಶೆಟ್ಟರ್‌, ಮಾಜಿ ಸಚಿವರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ಎಸ್‌.ಸುರೇಶ್‌ ಕುಮಾರ್‌ ಅವರ ಪೈಕಿ ಒಬ್ಬರನ್ನು ಆಯ್ಕೆ ಮಾಡಲು ಹಿರಿಯ ನಾಯಕರು ಚರ್ಚೆ ನಡೆಸಿದರು.

ವರಿಷ್ಠರ ಸೂಚನೆಯಂತೆ ಬದಲಾವಣೆ: ಅಂತಿಮವಾಗಿ ಕೆ.ಜಿ.ಬೋಪಯ್ಯ ಅವರನ್ನೇ ಸ್ಪೀಕರ್‌ ಸ್ಥಾನಕ್ಕೆ ಕಣಕ್ಕಿಳಿಸಲು ನಿರ್ಧಾರವಾಗಿತ್ತು. ಅದರಂತೆ ಮಂಗಳವಾರ ಬೆಳಗ್ಗೆ ಕೆ.ಜಿ.ಬೋಪಯ್ಯ ಅವರೇ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಹಿರಿಯ ನಾಯಕರೂ ತಿಳಿಸಿದ್ದರು. ಆದರೆ, ರಾತ್ರೋರಾತ್ರಿ ಸ್ಪೀಕರ್‌ ಅಭ್ಯರ್ಥಿ ಬದಲಾವಣೆಯಾಗಿರುವುದು ಅಚ್ಚರಿ ಮೂಡಿಸಿದೆ.

ಸ್ಪೀಕರ್‌ ಸ್ಥಾನದ ಅಭ್ಯರ್ಥಿ ಬಗ್ಗೆ ರಾಜ್ಯ ನಾಯಕರು ವರಿಷ್ಠರಿಗೆ ಸೋಮವಾರ ಮಾಹಿತಿ ರವಾನಿಸಿದ್ದರು. ಆದರೆ, ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೆ.ಜಿ.ಬೋಪಯ್ಯ ಅವರು ಸ್ಪೀಕರ್‌ ಆಗಿದ್ದಾಗ ಶಾಸಕರನ್ನು ಅನರ್ಹಗೊಳಿಸಿ ಸುಪ್ರೀಂ ಕೋರ್ಟ್‌ ನಿಂದ ಛೀಮಾರಿ ಹಾಕಿಸಿಕೊಂಡಿದ್ದರು. ಇದೀಗ ಮಾಜಿ ಸ್ಪೀಕರ್‌ ಕೆ.ಆರ್‌.ರಮೇಶ್‌ ಕುಮಾರ್‌ ಅವರು 17 ಶಾಸಕರನ್ನು ಅನರ್ಹಗೊಳಿಸಿದ್ದು, ಆ ಸಂಬಂಧ ಕಾನೂನು ಹೋರಾಟಕ್ಕೆ ಅನರ್ಹ ಶಾಸಕರು ಸಜ್ಜಾಗಿದ್ದಾರೆ. ಈ ಸಂದರ್ಭದಲ್ಲಿ ಬೋಪಯ್ಯ ಅವರನ್ನು ಸ್ಪೀಕರ್‌ ಆಗಿ ಆಯ್ಕೆ ಮಾಡುವುದು ಸೂಕ್ತವಲ್ಲ ಎಂಬ ಭಾವನೆ ವರಿಷ್ಠರಲ್ಲಿ ಮೂಡಿದಂತಿದೆ. ಬಳಿಕ ವರಿಷ್ಠರ ಸೂಚನೆಯಂತೆ ರಾಜ್ಯ ನಾಯಕರು ವಿಶ್ವೇಶ್ವರ ಹೆಗಡೆ ಕಾಗೇರಿ, ಎಸ್‌.ಸುರೇಶ್‌ ಕುಮಾರ್‌ ಅವರ ಹೆಸರನ್ನು ರವಾನಿಸಿದರು. ಅಂತಿಮವಾಗಿ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಹೆಸರು ಅಂತಿಮಗೊಂಡಿದೆ ಎಂದು ಮೂಲಗಳು ಹೇಳಿವೆ.

ಸಂಪುಟ ರಚನೆ ವಿಳಂಬ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾದರೂ ವರಿಷ್ಠರ ಒಪ್ಪಿಗೆ ಪಡೆದೇ ಸಂಪುಟ ರಚನೆಯಾಗಬೇಕಿದೆ. ಸಂಸತ್‌ ಅಧಿವೇಶನವು ಆ.7ರವರೆಗೆ ಮುಂದುವರಿಯಲಿದ್ದು, ಕೇಂದ್ರ ಸಚಿವರೆಲ್ಲಾ ಕಲಾಪದಲ್ಲಿ ನಿರತರಾಗಿರುವ ಹಿನ್ನೆಲೆಯಲ್ಲಿ ಸಂಪುಟ ರಚನೆ ಇನ್ನೂ ಒಂದು ವಾರ ಕಾಲ ವಿಳಂಬವಾಗುವ ಸಾಧ್ಯತೆ ಇದೆ.

ಆ. 5, 6ರಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿಯಾಗಿ ಸಚಿವರ ಪಟ್ಟಿಗೆ ಅಂಗೀಕಾರ ಪಡೆಯಬೇಕಿದೆ. ಈಗಾಗಲೇ ಸರ್ಕಾರ ರಚನೆ ಸಂದರ್ಭ ಹಾಗೂ ಸ್ಪೀಕರ್‌ ಅಭ್ಯರ್ಥಿ ಬದಲಾವಣೆಯಲ್ಲಿ ವರಿಷ್ಠರ ನಡೆ ರಾಜ್ಯ ಬಿಜೆಪಿ ನಾಯಕರ ಲೆಕ್ಕಾಚಾರವನ್ನು ತಲೆಕೆಳಗಾಗುವಂತೆ ಮಾಡಿದೆ. 29 ಮಾಜಿ ಸಚಿವರು ಸದ್ಯ ಶಾಸಕರಾಗಿದ್ದು, ಮೂರಕ್ಕಿಂತ ಹೆಚ್ಚು ಬಾರಿ ಶಾಸಕರಾಗಿ ಆಯ್ಕೆಯಾದವರ ಸಂಖ್ಯೆ 50ಕ್ಕಿಂತಲೂ ಹೆಚ್ಚು ಇದೆ. ಈ ಪೈಕಿ ಬಹುತೇಕರು ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ.

ಆದರೆ ಬದಲಾದ ರಾಜಕೀಯ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಿದ್ದು, ಪಕ್ಷದ ವರ್ಚಸ್ಸು ವೃದ್ಧಿಸುವ ನಿಟ್ಟಿನಲ್ಲಿ ದಕ್ಷ ಆಡಳಿತ ನೀಡಬೇಕಿದೆ. ಆ ಹಿನ್ನೆಲೆಯಲ್ಲಿ ವರಿಷ್ಠರು ಸಂಪುಟ ಸಚಿವರ ಆಯ್ಕೆಯತ್ತಲೂ ಗಮನ ಹರಿಸಬಹುದು. ಆಗ ಕಳಂಕದ ಹಿನ್ನೆಲೆ, ಭ್ರಷ್ಟಾಚಾರ ಸೇರಿದಂತೆ ನಾನಾ ಆರೋಪ ಹೊತ್ತವರಿಗೂ ಅವಕಾಶ ಕೈತಪ್ಪಿದರೆ ಅಚ್ಚರಿಯಿಲ್ಲ ಎನ್ನಲಾಗಿದೆ.

– ಎಂ. ಕೀರ್ತಿಪ್ರಸಾದ್‌

ಟಾಪ್ ನ್ಯೂಸ್

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.