ಜೆಹಾದಿಗಳಿಂದ ಬೆದರಿಕೆ ಕರೆ: ಶೋಭಾ
Team Udayavani, May 5, 2020, 9:48 PM IST
ಉಡುಪಿ: ಜೆಹಾದಿಗಳು ನಿರಂತರವಾಗಿ ಬೆದರಿಕೆ ಕರೆಗಳನ್ನು ಒಡ್ಡುತ್ತಿದ್ದಾರೆಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.
ಮಸ್ಕತ್ನಲ್ಲಿ ಹಿಂದೂ ಒಬ್ಬನಿಗೆ ಜೆಹಾದಿಗಳು ಕಪಾಳ ಮೋಕ್ಷ ಮಾಡಿದಾಗ ನಾನು ಗಂಭೀರವಾಗಿ ಪರಿಗಣಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದೆ. ಅನಂತರ ದುಬಾೖ, ಮಸ್ಕತ್ ಹೀಗೆ ಮಧ್ಯಪ್ರಾಚ್ಯ ರಾಷ್ಟ್ರಗಳಿಂದ ನೂರಾರು ದೂರವಾಣಿ ಕರೆಗಳು ಬರುತ್ತಿವೆ. ಇವುಗಳಲ್ಲಿ ಬೆದರಿಕೆ, ಅಶ್ಲೀಲ ಕರೆಗಳಿವೆ.
ನಾನು ಕೋವಿಡ್-19 ಸಂತ್ರಸ್ತರಿಗಾಗಿ ನಿರಂತರ ಶ್ರಮಿಸುತ್ತಿರುವಾಗ ಸೋಮವಾರ ಬೆಳ್ಳಂಬೆಳಗ್ಗೆ ಇಂತಹುದೇ ಒಂದು ಕರೆ ಬಂತು. “ನನಗೆ ಗೊತ್ತಿಲ್ಲಪ್ಪಾ’ ಎಂದೆ. ಇದನ್ನೇ ವೈರಲ್ ಮಾಡುತ್ತಿದ್ದಾರೆ.
ಎರಡು ಮೂರು ವರ್ಷಗಳಿಂದ ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಕೆಟ್ಟದಾಗಿ ಮಾತನಾಡಿದ ಕರೆಗಳ ಬಗ್ಗೆ ದಿಲ್ಲಿ ಪೊಲೀಸರಿಗೆ ದೂರು ನೀಡಿದ್ದೇನೆಂದು ಸಂಸದೆ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ