ಬಿಜೆಪಿ ತಾಯಿಯ ಸಮಾನ, ರೇಣುಕಾಚಾರ್ಯ ಎಂದೂ ಪಕ್ಷ ವಿರೋಧಿ ಚಟುವಟಿಕೆ ಮಾಡಲ್ಲ
Team Udayavani, Jun 17, 2021, 4:43 PM IST
ಬೆಂಗಳೂರು: ರೇಣುಕಾಚಾರ್ಯ ಎಂದೂ ಪಕ್ಷ ವಿರೋಧಿ ಚಟುವಟಿಕೆ ಮಾಡುವುದಿಲ್ಲ. ಬಿಜೆಪಿ ತಾಯಿಯ ಸಮಾನ. ನಾನು ಸಭೆ ಮಾಡಿಲ್ಲ, ಶಾಸಕರನ್ನು ತಿಂಡಿಗೆ ಕರೆದಿದ್ದೆ ಅಷ್ಟೇ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ಅರುಣ್ ಸಿಂಗ್ ಭೇಟಿಯ ಬಳಿಕ ಮಾತನಾಡಿದ ಅವರು, ನಮ್ಮ ಉಸ್ತುವಾರಿ ಅರುಣ್ ಸಿಂಗ್ ಭೇಟಿ ಮಾಡಿದ್ದೇವೆ. ಎಲ್ಲವೂ ಮನವರಿಕೆ ಮಾಡಿದ್ದೇವೆ. ಕೋವಿಡ್ ಸಂಧರ್ಭದಲ್ಲಿ ಕೆಲಸದ ಬಗ್ಗೆ ಹೇಳಿದ್ದೇವೆ. ಇದರ ಬಗ್ಗೆಅರುಣ್ ಸಿಂಗ್ ಅವರಿಗೂ ಗೊತ್ತಿದೆ. ಕೆಲವು ಆಂತರಿಕ ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಎಲ್ಲವನ್ನೂ ಹೇಳಲು ಆಗುವುದಿಲ್ಲ ಎಂದು ಹೇಳಿದರು.
ಶಾಸಕರ ಸಭೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಶಾಸಕರು ಉಪಹಾರಕ್ಕಾಗಿ ಸೇರುತ್ತಿರುತ್ತೇವೆ. ಇವತ್ತು ಸೇರಿದ್ದರಲ್ಲಿ ವಿಶೇಷ ಏನು ಇಲ್ಲ. ಪಕ್ಷದ ಸಂಘಟನೆ ವಿರುದ್ಧ ಸಭೆ ಮಾಡಿಲ್ಲ ಎಂದರು.
ಇದನ್ನೂ ಓದಿ:ಯಾರೋ ಒಂದಿರಿಬ್ಬರು ಬಿಟ್ಟರೆ, ಬೇರೆ ಯಾರು ಕೂಡ ಸಿಎಂ ವಿರುದ್ಧ ಮಾತಾಡ್ತಿಲ್ಲ: ರೇಣುಕಾಚಾರ್ಯ
ಅರವಿಂದ ಬೆಲ್ಲದ ಪೋನ್ ಟ್ಯಾಪ್ ವಿಚಾರವಾಗಿ ಮಾತನಾಡಿದ ಅವರು, ಪೋನ್ ಟ್ಯಾಪ್ ಬಗ್ಗೆ ನನಗೆ ಗೊತ್ತಿಲ್ಲ. ಅವರು ಕೀಳು ಮಟ್ಟದ ಪ್ರಚಾರ ಮಾಡುತ್ತಿದ್ದರೆ. ಸೂಟ್ ಹೊಲಿಸಿಕೊಂಡು ಸಿಎಂ ಆಗುವ ಕನಸು ಕಾಣುತ್ತಿದ್ದಾರೆ ಎಂದು ರೇಣುಕಾಚಾರ್ಯ ಕಿಡಿಕಾರಿದರು.
ಇದನ್ನೂ ಓದಿ: ಜೈಲಿನಲ್ಲಿರುವ ವಂಚಕ ಯುವರಾಜ ಸ್ವಾಮಿಯಿಂದ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಗೆ ದೂರವಾಣಿ ಕರೆ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್