BJP: ಲೋಕಸಭೆ ಚುನಾವಣೆಗೆ ಬಿಜೆಪಿ ಅಚ್ಚರಿ ಅಭ್ಯರ್ಥಿಗಳು?

ಬೊಮ್ಮಾಯಿ, ಲಿಂಬಾವಳಿ, ಜನಾರ್ದನ ರೆಡ್ಡಿ, ರಾಮುಲು, ಯತ್ನಾಳ್‌ ಸ್ಪರ್ಧೆ?

Team Udayavani, Jan 28, 2024, 1:15 AM IST

BJP FLAG 1

ಬೆಂಗಳೂರು: ರಾಜ್ಯ ರಾಜಕಾರಣ ದಲ್ಲಿ ಸಕ್ರಿಯರಾಗಿರುವ ಕೆಲವು ಹಿರಿಯ ನಾಯಕರನ್ನು ಲೋಕಸಭಾ ಚುನಾವಣೆಯ ಅಖಾಡಕ್ಕೆ ಇಳಿಸಲು ಬಿಜೆಪಿ ನಾಯಕರು ಲೆಕ್ಕ ಹಾಕುತ್ತಿದ್ದು, ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷದ ಸಂಸ್ಥಾಪಕ ಜನಾರ್ದನ ರೆಡ್ಡಿಯವರನ್ನು ಮರಳಿ ಪಕ್ಷಕ್ಕೆ ಕರೆತಂದು ಕೊಪ್ಪಳ ಕ್ಷೇತ್ರದಿಂದ ಅಭ್ಯರ್ಥಿ ಯಾಗಿಸಲು ಪ್ರಯತ್ನ ಪ್ರಾರಂಭವಾಗಿದೆ.

“ಘರ್‌ ವಾಪ್ಸಿ’ ಅಭಿಯಾನದ ಭಾಗವಾಗಿ ರೆಡ್ಡಿಯವರನ್ನು ವಾಪಸು ಕರೆತರುವ ಪ್ರಯತ್ನ ನಡೆಯುತ್ತಿದೆ. ಜತೆಗೆ ಮಾಜಿ ಸಚಿವರಾದ ಬಿ.ಶ್ರೀರಾಮುಲು ಹಾಗೂ ಅರವಿಂದ ಲಿಂಬಾವಳಿಯವರಿಗೂ ಸ್ಪರ್ಧಿಸಬೇಕೆಂಬ ಸಂದೇಶವನ್ನು ನೀಡಿದ್ದು, ಇನ್ನೂ ಕೆಲವು ಅಚ್ಚರಿಯ ಹೆಸರುಗಳನ್ನು ಅಭ್ಯರ್ಥಿ ಯಾದಿ ಯಲ್ಲಿ ಬಿಜೆಪಿ ಇರಿಸಿಕೊಂಡಿದೆ.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಈ ಬಾರಿ ಬಿಜೆಪಿ ಸಂಸದರಿಗೆ ಆಡಳಿತ ವಿರೋಧಿ ಅಲೆ ಕಾಣಿಸಿಕೊಂಡಿದೆ. ಕೊಪ್ಪಳ ಸಂಸದ ಸಂಗಣ್ಣ ಕರಡಿ ವಿರುದ್ಧ ಪಕ್ಷದ ಮೇಲ್ಮಟ್ಟದ ನಾಯಕರು ಮುನಿಸಿಕೊಂಡಿದ್ದರೆ ಸ್ಥಳೀಯವಾಗಿ ಕಾರ್ಯ ಕರ್ತರ ವಿರೋಧವಿದೆ. ಇಲ್ಲಿ ಸದ್ಯ ಕಾಂಗ್ರೆಸ್‌ ಪರ ವಾತಾವರಣ ಇದ್ದು, ಸಂಗಣ್ಣ ಸ್ಪರ್ಧಿಸಿದರೆ ಗೆಲುವು ಕಷ್ಟ ಎಂಬ ಅಭಿಪ್ರಾಯ ಆಂತರಿಕ ಸಮೀಕ್ಷೆಯಿಂದಲೂ ಬೆಳಕಿಗೆ ಬಂದಿದೆ. ಹೀಗಾಗಿ ರೆಡ್ಡಿಯವರನ್ನು ವಾಪಸು ಕರೆ ತರುವ ಲೆಕ್ಕಾಚಾರ ಸದ್ದಿಲ್ಲದೆ ನಡೆಯುತ್ತಿದೆ.
ಈ ಹೊಣೆಯನ್ನು ರೆಡ್ಡಿ ಆಪ್ತ ಬಿ. ಶ್ರೀರಾಮುಲು ಅವರಿಗೆ ನೀಡಲಾಗಿದೆ ಎನ್ನಲಾಗಿದೆ.

ವಿಶೇಷವೆಂದರೆ ಖುದ್ದು ಶ್ರೀರಾಮುಲು ಅವರಿಗೂ ಸ್ಪರ್ಧಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೂಚಿಸಿದ್ದಾರೆ ಎನ್ನಲಾಗಿದ್ದು, ಅವರು ಬಳ್ಳಾರಿಯಿಂದ ಕಣಕ್ಕೆ ಇಳಿಯುವುದು ಬಹುತೇಕ ಅಂತಿಮ ಗೊಂಡಿದೆ.

ವಿಜಯಪುರಕ್ಕೆ ಲಿಂಬಾವಳಿ?
ಅಚ್ಚರಿಯ ಹೆಸರುಗಳ ಪೈಕಿ ಮಾಜಿ ಸಚಿವ ಅರವಿಂದ ಲಿಂಬಾವಳಿ ಸೇರಿದ್ದು, ವಿಜಯಪುರ ಮೀಸಲು ಕ್ಷೇತ್ರದಿಂದ ಸ್ಪರ್ಧಿಸುವಂತೆ ಸಲಹೆ ನೀಡಲಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅವರಿಗೆ ಟಿಕೆಟ್‌ ನಿರಾಕರಿಸಿರುವ ಬಗ್ಗೆ ಪಕ್ಷದಲ್ಲಿ ಇಂದಿಗೂ ಅಸಮಾಧಾನವಿದ್ದು, ರಮೇಶ್‌ ಜಿಗಜಿಣಗಿ ಬದಲು ಲಿಂಬಾವಳಿ ಅಭ್ಯರ್ಥಿಯಾಗಲಿದ್ದಾರೆ ಎನ್ನುತ್ತವೆ ಬಿಜೆಪಿಯ ಉನ್ನತ ಮೂಲಗಳು.
ಅದೇ ರೀತಿ ಕೇಂದ್ರದ ಮಾಜಿ ಸಚಿವ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರಿಗೆ ಬಾಗಲಕೋಟೆಯಿಂದ ಸ್ಪರ್ಧಿಸಲು ವರಿಷ್ಠರಿಂದ ಸೂಚನೆ ಇದೆ ಎನ್ನಲಾಗಿದೆ. ಹಾಲಿ ಸಂಸದರಾದ ಗದ್ದಿಗೌಡರ್‌ ಹಾಗೂ ರಮೇಶ್‌ ಜಿಗಜಿಣಗಿಯವರಿಗೆ ವಯಸ್ಸಿನ ಕಾರಣಕ್ಕಾಗಿ ಟಿಕೆಟ್‌ ಸಿಗದು ಎನ್ನಲಾಗುತ್ತಿದೆ. ಜತೆಗೆ ಹಾವೇರಿ ಕ್ಷೇತ್ರದಿಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಣಕ್ಕೆ ಇಳಿಯುವ ಸಾಧ್ಯತೆ ದಟ್ಟವಾಗಿದೆ.

ಮೈತ್ರಿ ಧರ್ಮಕ್ಕೆ ಸಂಸದ ಮುನಿಸ್ವಾಮಿ ತ್ಯಾಗ?
ಬಿಜೆಪಿ-ಜೆಡಿಎಸ್‌ ಮೈತ್ರಿಯ ಫ‌ಲವಾಗಿ ಕೋಲಾರ ಸಂಸದ ಮುನಿಸ್ವಾಮಿ ಅವಕಾಶ ಕಳೆದುಕೊಳ್ಳುವ ಸಾಧ್ಯತೆ ಇದೆ. ಕೋಲಾರ ಕ್ಷೇತ್ರವನ್ನು ಜೆಡಿಎಸ್‌ ನಾಯಕರು ಈಗಾಗಲೇ ಕೇಳಿದ್ದು, ಮಂಡ್ಯ, ಹಾಸನ ಹಾಗೂ ಕೋಲಾರ ಕ್ಷೇತ್ರಗಳನ್ನು ಮಾತ್ರ ಜೆಡಿಎಸ್‌ಗೆ ಬಿಟ್ಟುಕೊಡಲು ಬಿಜೆಪಿ ನಿರ್ಧರಿಸಿದೆ. ಹೀಗಾಗಿ ಮುನಿಸ್ವಾಮಿಗೆ ಈ ಬಾರಿ ಅವಕಾಶ ಸಿಗದು ಎನ್ನಲಾಗುತ್ತಿದೆ. ಅದೇ ರೀತಿ ಮಂಡ್ಯದಿಂದ ಮಾಜಿ ಸಿಎಂ ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕಾರ್ಯಕಾರಿಣಿಗೆ ಗೈರಾದವರು

ಬಸನಗೌಡ ಯತ್ನಾಳ್‌, ವಿ. ಸೋಮಣ್ಣ, ರಮೇಶ್‌ ಜಾರಕಿಹೊಳಿ, ಶಿವರಾಮ್‌ ಹೆಬ್ಟಾರ್‌ ಹಾಗೂ ಎಸ್‌.ಟಿ. ಸೋಮಶೇಖರ್‌ ಕಾರ್ಯ ಕಾರಿಣಿಯಿಂದ ದೂರ ಉಳಿದಿದ್ದರು. ಸೋಮಶೇಖರ್‌ ಅವರು ಸಿಎಂ ಕಾರಿನಲ್ಲಿ ಕಾಣಿಸಿಕೊಂಡಿದ್ದು ಬಿಜೆಪಿಗರನ್ನು ಕೆರಳಿಸಿದೆ. ಈ ಸಂಬಂಧ ಪ್ರತಿಕ್ರಿಯೆ ನೀಡಿದ ವಿಪಕ್ಷ ನಾಯಕ ಆರ್‌. ಅಶೋಕ್‌, ಕಾರಣಾಂತರಗಳಿಂದ ಕೆಲವರು ಬಂದಿಲ್ಲ. ಗೈರಾದವರ ಜತೆ ರಾಜ್ಯಾಧ್ಯಕ್ಷರು ಮಾತನಾಡುತ್ತಾರೆ ಎಂದರು.

ಫೆಬ್ರವರಿಯಲ್ಲಿ ಶಾ, ನಡ್ಡಾ , ರಾಜನಾಥ್‌ ಸಿಂಗ್‌ ರಾಜ್ಯ ಪ್ರವಾಸ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯ ನಾಯಕರು ಹಾಗೂ ಕಾರ್ಯಕರ್ತರನ್ನು ಸಜ್ಜುಗೊಳಿಸಲು ಕೇಂದ್ರ ನಾಯಕರಾದ ಅಮಿತ್‌ ಶಾ, ಜೆ.ಪಿ. ನಡ್ಡಾ ಹಾಗೂ ರಾಜನಾಥ್‌ ಸಿಂಗ್‌ ಫೆಬ್ರವರಿಯಲ್ಲಿ ರಾಜ್ಯದಲ್ಲಿ ಪ್ರವಾಸ ಕೈಗೊಳ್ಳುವರು.

ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಹಿರಿಯ ನಾಯ ಕರು ಈ ವಿಷಯ ತಿಳಿಸಿದ್ದು, ಚುನಾವಣೆಯ ವರೆಗೆ ಕಾರ್ಯಕರ್ತರು ನಡೆಸ ಬೇಕಾದ ಕಾರ್ಯಗಳ ಬಗ್ಗೆ ವಿವರಿಸಲಾಗಿದೆ. 28ಕ್ಕೆ 28 ಕ್ಷೇತ್ರಗಳಲ್ಲೂ ಗೆಲ್ಲಬೇಕೆಂಬ ಕೇಂದ್ರ ನಾಯಕರ ಸಂದೇಶವನ್ನು ಕೇಂದ್ರ ಸಚಿವ ಭೂಪೇಂದ್ರ ಯಾದವ್‌ ರಾಜ್ಯ ಘಟಕಕ್ಕೆ ತಿಳಿಸಿದ್ದಾರೆ. ರಾಜ್ಯದ ಕ್ಷೇತ್ರಗಳನ್ನು 8 ಕ್ಲಸ್ಟರ್‌ಗಳಾಗಿ ವಿಂಗಡಿಸಲಾಗಿದೆ. ಪ್ರತೀ ಕ್ಲಸ್ಟರ್‌ನಲ್ಲಿ ನಡ್ಡಾ, ರಾಜನಾಥ್‌ ಸಿಂಗ್‌ ಹಾಗೂ ಶಾ ಪ್ರವಾಸ ನಡೆಸಿದ ಬಳಿಕ ಟಿಕೆಟ್‌ ಹಂಚಿಕೆ ಬಗ್ಗೆ ಚಿಂತನೆ ನಡೆಯಲಿದೆ.

ಎರಡು ನಿರ್ಣಯ: ಖಂಡನೆ, ಅಭಿನಂದನೆ

ಬಾಲರಾಮನ ಪ್ರಾಣಪ್ರತಿಷ್ಠಾಪನೆಯನ್ನು ಯಶಸ್ವಿಯಾಗಿ ನೆರವೇರಿಸಿದ ಪ್ರಧಾನಿ ಮೋದಿ ಅವರಿಗೆ ಅಭಿನಂದನೆ ಸಲ್ಲಿಸುವ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ.

ಯಾವ ಕ್ಷಣದಲ್ಲಿ ಬೇಕಾದರೂ ಲೋಕಸಭೆ ಚುನಾವಣೆ ಘೋಷಣೆ ಆಗಬಹುದು. ಎದುರಾಳಿಗಳನ್ನು ಹಗುರವಾಗಿ ಪರಿಗಣಿಸಬೇಡಿ. ಮೈಮರೆಯದೆ
ಕೆಲಸ ಮಾಡಿ.

- ಬಿ.ವೈ. ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.