ಎಚ್ಚೆತ್ತುಕೊಂಡ ಬಿಜೆಪಿ; ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದು

ಸ್ಥಳೀಯ ಸಮಸ್ಯೆಗಳ ನಿವಾರಣೆಗೆ 2 ಜಿಲ್ಲೆಗೊಬ್ಬರಂತೆ ನಾಯಕರ ನೇಮಕಕ್ಕೆ ಚಿಂತನೆ

Team Udayavani, Feb 21, 2023, 5:10 AM IST

ಎಚ್ಚೆತ್ತುಕೊಂಡ ಬಿಜೆಪಿ; ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದು

ಬೆಂಗಳೂರು: ಮಾಜಿ ಶಾಸಕರಾದ ವೀರಭದ್ರಪ್ಪ ಹಾಲಹರವಿ, ಕಿರಣ್‌ಕುಮಾರ್‌ ಹಾಗೂ ಚಿಕ್ಕಮಗಳೂರಿನ ತಮ್ಮಯ್ಯ ಸೇರಿ ಹಲವರು ಬಿಜೆಪಿ ತೊರೆದು ಕಾಂಗ್ರೆಸ್‌, ಜೆಡಿಎಸ್‌ ಸೇರ್ಪಡೆಯಾಗುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ರಾಜ್ಯ ಬಿಜೆಪಿ ನಾಯಕರು ಈಗ “ಡ್ಯಾಮೇಜ್‌ ಕಂಟ್ರೋಲ್‌’ಗೆ ಮುಂದಾಗಿದ್ದಾರೆ.

ಚುನಾವಣೆ ಹತ್ತಿರವಾಗುತ್ತಿದ್ದಂತೆ ಮಾಜಿ ಶಾಸಕರು ಹಾಗೂ ಸ್ಥಳೀಯವಾಗಿ ಪ್ರಭಾವವುಳ್ಳ ಮುಖಂಡರು ಪಕ್ಷ ತೊರೆಯಲು ಮುಂದಾಗಿರುವುದು ಚುನಾವಣಾ ಫ‌ಲಿತಾಂಶದ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂಬ ಆತಂಕದಲ್ಲಿರುವ ರಾಜ್ಯ ಬಿಜೆಪಿ ನಾಯಕರು ಈಗ ಭವಿಷ್ಯದಲ್ಲಿ ಆಗುವ ಮತ್ತಷ್ಟು ಹಾನಿ ತಡೆಗೆ ಕಾರ್ಯೋನ್ಮುಖರಾಗಿದ್ದಾರೆ. ಯಾವುದೇ ಕಾರಣದಿಂದಲೂ ಸ್ಥಳೀಯ ಪ್ರಭಾವಿ ಮುಖಂಡರನ್ನು ಈ ಹೊತ್ತಿನಲ್ಲಿ ಕಳೆದುಕೊಳ್ಳಬಾರದು ಎಂಬುದು ಪಕ್ಷದ ನಾಯಕರ ಒಮ್ಮತದ ಅಭಿಪ್ರಾಯವಾಗಿದೆ.

ಹೀಗಾಗಿ ಸ್ಥಳೀಯ ಶಾಸಕರು ಹಾಗೂ ಸಚಿವರೊಂದಿಗೆ ಭಿನ್ನಾಭಿಪ್ರಾಯ ಹೊಂದಿರುವ ಮುಖಂಡರನ್ನು ಸ್ಥಳೀಯವಾಗಿ ಸಮಾಧಾನಪಡಿಸಿ ಉಳಿಸಿಕೊಳ್ಳುವ ಪ್ರಯತ್ನಗಳು ಆರಂಭವಾಗಿವೆ. ಪ್ರಮುಖ ಮುಖಂಡರು ಸ್ಥಳೀಯವಾಗಿ ಜಾತಿ ಇಲ್ಲವೇ ಮತ್ತೊಂದು ಕಾರಣಕ್ಕೆ ತಮ್ಮದೇ ಪ್ರಭಾವ ಹೊಂದಿರುವುದರಿಂದ ಅಂತಹವರು ಪಕ್ಷ ತ್ಯಜಿಸಿದರೆ ಸುಲಭವಾಗಿ ಗೆಲ್ಲುವ ಕ್ಷೇತ್ರಗಳಲ್ಲಿ ಕಷ್ಟಪಡಬೇಕಾಗುತ್ತದೆ ಇಲ್ಲವೇ ಕಳೆದುಕೊಳ್ಳಬೇಕಾಗುತ್ತದೆ. ಹೀಗಾಗಿ ಅಂತಹವರನ್ನು ಉಳಿಸಿಕೊಳ್ಳಲು ಎರಡೆರಡು ಜಿಲ್ಲೆಗಳಿಗೆ ಒಬ್ಬರಂತೆ ಸಚಿವರು ಇಲ್ಲವೇ ಪ್ರಮುಖ ನಾಯಕರನ್ನು ನಿಯೋಜಿಸುವ ಸಾಧ್ಯತೆಗಳಿವೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಹಾಲಿ ಶಾಸಕರ ಪೈಕಿ ಯಾರೊಬ್ಬರೂ ಪಕ್ಷ ಬಿಡುವುದಿಲ್ಲವೆಂದು ಭಾವಿಸಿರುವ ಬಿಜೆಪಿ ನಾಯಕರಿಗೆ ಎಲ್ಲೋ ಒಂದು ಕಡೆ ಕೆಲವರ ಬಗ್ಗೆ ಅನುಮಾನವೂ ಇದೆ. ಅವರು ಸ್ಥಳೀಯವಾಗಿ ನಡೆದುಕೊಳ್ಳುತ್ತಿರುವ ರೀತಿ ಹಾಗೂ ಪ್ರತಿಪಕ್ಷಗಳೊಂದಿಗೆ ಸಂಬಂಧ ಹಾಗೂ ಸಂಪರ್ಕ ಇದಕ್ಕೆ ಸಾಕ್ಷಿಯಾಗಿದೆ. ಅಂತಹವರನ್ನು ಕರೆಸಿ ಪಕ್ಷದಲ್ಲಿ ಉಳಿಸಿಕೊಳ್ಳಬೇಕು, ಕೆಲವರಿಗೆ ಕೆಲವು ಕಾರಣಗಳಿಂದಲೇ ಟಿಕೆಟ್‌ ತಪ್ಪಿದರೂ ಅವರು ಪಕ್ಷ ಬಿಡದಂತೆ ಉಳಿಸಿಕೊಳ್ಳಬೇಕೆಂಬ ಎಚ್ಚರಿಕೆಯ ಹೆಜ್ಜೆಇಡಲು ನಿರ್ಧರಿಸಿದ್ದಾರೆ.

 

ಟಾಪ್ ನ್ಯೂಸ್

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

14-uv-fusion

UV Fusion: ಮುದ ನೀಡಿದ ಕೌದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

rangasthala kannada movie

Kannada Cinema; ರಂಗಮಂಟಪ ಸುತ್ತ ‘ರಂಗಸ್ಥಳ’; ಹೊಸ ಚಿತ್ರದ ಟೈಟಲ್‌ ಲಾಂಚ್‌

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.