ಕುಮಟಳ್ಳಿ ವಿರುದ್ಧ ಸಿಡಿದೆದ್ದ ಬಿಜೆಪಿ ಕಾರ್ಯಕರ್ತರು


Team Udayavani, Nov 18, 2019, 3:07 AM IST

kumatalli

ಅಥಣಿ: ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ಉಪಮುಖ್ಯ ಮಂತ್ರಿ ಲಕ್ಷ್ಮಣ ಸವದಿಗೆ ಟಿಕೆಟ್‌ ಸಿಗಲಿಲ್ಲ ಎಂಬ ಕಾರಣಕ್ಕೆ ಅವರ ಬೆಂಬಲಿಗರು ಹಾಗೂ ಬಿಜೆಪಿ ಕಾರ್ಯಕರ್ತರು ಈಗಿರುವ ಬಿಜೆಪಿ ಅಭ್ಯರ್ಥಿ ಕುಮಟಳ್ಳಿ ಅವರನ್ನು ಬೆಂಬಲಿಸದಿರಲು ನಿರ್ಧರಿಸಿದ್ದಾರೆ.

ಡಿಸಿಎಂ ಲಕ್ಷ್ಮಣ ಸವದಿ ಬೆಂಗಳೂರಿನಿಂದ ಅಥಣಿಗೆ ಬಂದಿಳಿಯುತ್ತಿದ್ದಂತೆ ಭಾನುವಾರ ಅವರ ನಿವಾಸ ಎದುರು ಜಮಾಯಿಸಿದ ಬೆಂಬಲಿಗರು ಟಿಕೆಟ್‌ಗಾಗಿ ಪಟ್ಟು ಹಿಡಿದು ಕುಳಿತರು. ಈ ವೇಳೆ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್‌ ಕೂಡ ಸವದಿ ನಿವಾಸದೊಳಗೆ ಇದ್ದರು. ಕುಮಟಳ್ಳಿಗೆ ಟಿಕೆಟ್‌ ನೀಡಿದ್ದನ್ನು ವಾಪಸ್‌ ಪಡೆಯಬೇಕು. ಇಲ್ಲದಿದ್ದರೆ ನಾವು ಬೆಂಬಲಿಸುವುದಿಲ್ಲ ಎಂದು ಬೆಂಬಲಿಗರು ಘೋಷಣೆ ಕೂಗಿದರು.

ಶೆಟ್ಟರ್‌ ಹಾಗೂ ಸವದಿ ಕಾರ್ಯಕರ್ತರ ಮನವೊಲಿಸಿಲು ಯತ್ನಿಸಿದರೂ ಪ್ರಯೋ ಜನವಾಗಲಿಲ್ಲ. ಅನೇಕ ವರ್ಷಗಳಿಂದ ಬಿಜೆಪಿಗೆ ಭದ್ರ ಬುನಾದಿ ಹಾಕಿರುವ ಕ್ಷೇತ್ರದಲ್ಲಿ ಸವದಿಗೆ ಟಿಕೆಟ್‌ ನೀಡದಿರುವುದು ಬೇಸರ ತಂದಿದೆ. ಬಿಜೆಪಿ ಬೆಳೆಸಿದ ಶ್ರೇಯಸ್ಸು ಸವದಿ ಅವರಿಗೆ ಸಲ್ಲುತ್ತದೆ. ಈಗ ಬಂದವರಿಗೆ ಟಿಕೆಟ್‌ ಕೊಟ್ಟಿದ್ದು ತಪ್ಪು. ಮೋದಿ ಹಾಗೂ ಯಡಿಯೂರಪ್ಪ ವಿರುದ್ಧ ಕೀಳಾಗಿ ಮಾತನಾಡಿರುವ ಮಹೇಶ ಕುಮಟಳ್ಳಿ ಈಗ ಬಿಜೆಪಿಗೆ ಬಂದು ಫೋಸ್‌ ಕೊಡುತ್ತಿದ್ದಾರೆ.

ಯಾವುದೇ ಕಾರಣಕ್ಕೂ ಮೂಲ ಬಿಜೆಪಿ ಕಾರ್ಯಕರ್ತರು ಹಾಗೂ ಸವದಿ ಬೆಂಬಲಿಗರು ಇದನ್ನು ಒಪ್ಪುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸವದಿ ಹಾಗೂ ಶೆಟ್ಟರ್‌ ಅವರನ್ನು ಹೊರಗೆ ಬಿಡದೆ ಮನೆ ಎದುರೇ ನಿಲ್ಲಿಸಿದರು. ಶೆಟ್ಟರ್‌ ಅವರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾರ್ಯಕರ್ತರನ್ನು ಸವದಿ ಮನವೊಲಿಸಿ ಗೇಟ್‌ ಹೊರಗೆ ಶೆಟ್ಟರ್‌ ಅವರನ್ನು ಬಿಟ್ಟು ಕಾರಿನಲ್ಲಿ ಕಳುಹಿಸಿದರು.

ಸವದಿ ಅವರನ್ನು ಹೊರಗೆ ಬಿಡದಿದ್ದಾಗ ಕಾರ್ಯಕರ್ತರ ಕೈ ಮುಗಿದ ಸವದಿ, “ಬಿಡ್ರಪ್ಪಾ ಸಾಕು. ಪಕ್ಷದ ನಿರ್ಧಾರಕ್ಕೆ ತಲೆ ಬಾಗಬೇಕು’ ಎಂದು ಹೇಳಿ ಹೊರ ನಡೆದರು. ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಜನರು ನಿವಾಸದ ಎದುರು ಲಕ್ಷ್ಮಣ ಸವದಿ ಪರ ಘೋಷಣೆ ಕೂಗಿದರು. ಈ ವೇಳೆ ಬಿಜೆಪಿ ಅಭ್ಯರ್ಥಿ ಮಹೇಶ ಕುಮಟಳ್ಳಿ, ಶಾಸಕರಾದ ಪಿ.ರಾಜೀವ್‌, ದುರ್ಯೋಧನ ಐಹೊಳೆ ಸೇರಿ ಅನೇಕರು ಇದ್ದರು.

ಕುಮಟಳ್ಳಿಗೆ ಅಶ್ಲೀಲವಾಗಿ ನಿಂದನೆ: ಪ್ರತಿಭಟನೆ ವೇಳೆ ಕಿಡಿಗೇಡಿಗಳು ಕುಮಟಳ್ಳಿ ಅವರಿಗೆ ಅಶ್ಲೀಲವಾಗಿ ನಿಂದನೆ ಮಾಡಿದ್ದರಿಂದ ಕುಮಟಳ್ಳಿ ಕೆಲ ಸಮಯ ಮುಜಗರಕ್ಕೆ ಒಳಗಾಗುವ ಪರಿಸ್ಥಿತಿ ಎದುರಾಯಿತು.

ಟಾಪ್ ನ್ಯೂಸ್

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

gold 2

Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.