ಕಪ್ಪು ಶಿಲೀಂಧ್ರ ಚಿಕಿತ್ಸೆಗೆ ಕೇಂದ್ರದಿಂದ 19,420 ವಯಲ್ಸ್ ಎಂಫೋಟೆರಿಸಿನ್-ಬಿ ಹಂಚಿಕೆ :DVS
ಮೇ ಒಳಗೆ 3.63 ಲಕ್ಷ ವಯಲ್ಸ್ ಆಮದಿಗೆ ಕ್ರಮ
Team Udayavani, May 24, 2021, 10:44 PM IST
ನವದೆಹಲಿ : ಕಪ್ಪುಶಿಲೀಂಧ್ರ ರೋಗದ ಚಿಕಿತ್ಸೆಗಾಗಿ ಕೇಂದ್ರ ಸರ್ಕಾರವು ಇಂದು ರಾಜ್ಯಗಳಿಗೆ 19,420 ಸೀಸೆ (ವಯಲ್ಸ್) ಲಿಪೋಸೊಮಾಲ್ ಎಂಫೋಟೆರಿಸಿನ್-ಬಿ ಚುಚ್ಚುಮದ್ದನ್ನು ಹಂಚಿಕೆ ಮಾಡಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ. ವಿ.ಸದಾನಂದ ಗೌಡ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು ಕರ್ನಾಟಕಕ್ಕೆ 1030 ವಯಲ್ಸ್ ಒದಗಿಸಲಾಗಿದೆ, ಮೊನ್ನೆ 1270 ವಯಲ್ಸ್ ಹಾಗೂ ಅದಕ್ಕೂ ಮುನ್ನ ಮೂರು ಕಂತುಗಳಲ್ಲಿ 1660 ವಯಲ್ಸ್ ಒದಗಿಸಲಾಗಿತ್ತು ಎಂದರು.
ದೇಶದಲ್ಲಿಯೇ ತ್ವರಿತವಾಗಿ ಲಿಪೋಸೊಮಾಲ್ ಎಂಫೋಟೆರಿಸಿನ್-ಬಿ ಉತ್ಪಾದನೆ ಹೆಚ್ಚಿಸಲು ತುರ್ತು ಕ್ರಮ ಕೈಗೊಳ್ಳಲಾಗಿದೆ. ಇದುವರೆಗೆ ದೇಶದ ಐದು ಫಾರ್ಮಾ ಕಂಪನಿಗಳು ಇದರ ಉತ್ಪಾದನೆ ಮಾಡುತ್ತಿದ್ದು ಈಗ ಹೊಸದಾಗಿ ಮತ್ತೆ ಐದು ಕಂಪನಿಗಳಿಗೆ ಲೈಸನ್ಸ್ ನೀಡಲಾಗಿದೆ. ಈ ಸ್ವದೇಶಿ ಕಂಪನಿಗಳು ಮೇ ತಿಂಗಳಲ್ಲಿ 1.63 ಲಕ್ಷ ಸೀಸೆ ಹಾಗೂ ಜೂನ್ ತಿಂಗಳಲ್ಲಿ 2.55 ಸೀಸೆ ಲಿಪೋಸೊಮಾಲ್ ಎಂಫೋಟೆರಿಸಿನ್ ಬಿ ಉತ್ಪಾದನೆ ಮಾಡಲಿವೆ ಎಂದರು.
ಇದನ್ನೂ ಓದಿ :ಕಟ್ಟಡ ಕಾರ್ಮಿಕರಿಗೆ ಕೋವಿಡ್ ಪರೀಕ್ಷೆ ಹೆಚ್ಚಿಸಲು ಸಚಿವ ಅರವಿಂದ ಲಿಂಬಾವಳಿ ಸೂಚನೆ
ಹಾಗೆಯೇ ಮೈಲಾನ್ ಕಂಪನಿ ಮೂಲಕ ಮೇ ತಿಂಗಳ ಒಳಗಾಗಿ 3.63 ಲಕ್ಷ ವಯಲ್ಸ್ ಲಿಪೋಸೊಮಾಲ್ ಎಂಫೋಟೆರಿಸಿನ್-ಬಿ ಆಮದು ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ. ಇದರಲ್ಲಿ ಸ್ವಲ್ಪಭಾಗ ಈಗಾಗಲೇ ಭಾರತ ತಲುಪಿದೆ. ಯೋಜಸಿದಂತೆ ಸಾಗಣೆಯಲ್ಲಿ ಏನೂ ವ್ಯತ್ಯಾಸವಾಗದಿದ್ದರೆ ಉಳಿದ ಬಹುತೇಕ ಭಾಗ ವಾರದೊಳಗೆ ಭಾರತ ತಲುಪುವುದೆಂದು ನಿರೀಕ್ಷಿಸಲಾಗಿದೆ ಎಂದು ಸಚಿವರು ಹೇಳಿದರು.
ಇನ್ನು, ಜೂನ್ ತಿಂಗಳಲ್ಲಿ 3.15 ಲಕ್ಷ ವಯಲ್ಸ್ ಆಮದು ಮಾಡಿಕೊಳ್ಳಲಾಗುತ್ತಿದೆ. ಇದರ ಜೊತೆಗೆ 2.55 ಲಕ್ಷ ವಯಲ್ಸ್ ಸ್ವದೇಶಿ ಉತ್ಪಾದನೆ ಸೇರಿ ಜೂನ್ ತಿಂಗಳಲ್ಲಿ 5.7 ಲಕ್ಷ ವಯಲ್ಸ್ ಲಿಪೋಸೊಮಾಲ್ ಎಂಫೋಟೆರಿಸಿನ್-ಬಿ ಲಭ್ಯವಿರಲಿವೆ. ಅಗತ್ಯವಾದರೆ ಇನ್ನೂ ಹೆಚ್ಚು ಆಮದು ಮಾಡಿಕೊಳ್ಳುತ್ತೇವೆ. ಸ್ವದೇಶಿ ಉತ್ಪಾದನೆಯೂ ಹೆಚ್ಚಾಗುತ್ತಿದ್ದು ಇದರ ಹಂಚಿಕೆ ನಿರಂತರವಾಗಿ ನಡೆಯಲಿದೆ. ಕಪ್ಪುಶಿಲೀಂದ್ರ ಹಳೆ ಕಾಯಿಲೆಯಾಗಿದ್ದು ಇದಕ್ಕೆ ಸಾಕಷ್ಟು ಪರ್ಯಾಯ ಔಷಧಗಳು ಲಭ್ಯವಿವೆ. ಹಾಗಾಗಿ ಇದಕ್ಕೆ ಔಷಧ ಕೊರತೆಯಾಗಬಹುದು ಎಂದು ಗಾಬರಿಗೊಳಗಾಗಬೇಡಿ ಎಂದು ಸಚಿವರು ಸಾರ್ವಜನಿಕರಲ್ಲಿ ವಿನಂತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ