ಉಳ್ಳವರಿಗೆ ಮಾತ್ರ ವೈದ್ಯಸೇವೆ ಆತಂಕಕಾರಿ: ಪ್ರೊ| ನಂದೂರಿ

ಬಿಎಲ್‌ಡಿಇ ಡೀಮ್ಡ್ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವ

Team Udayavani, Aug 27, 2020, 3:16 PM IST

ಉಳ್ಳವರಿಗೆ ಮಾತ್ರ ವೈದ್ಯಸೇವೆ ಆತಂಕಕಾರಿ: ಪ್ರೊ| ನಂದೂರಿ

ವಿಜಯಪುರ: ಪ್ರಸಕ್ತ ಸಂದರ್ಭದಲ್ಲಿ ವೈದ್ಯಕೀಯ ಚಿಕಿತ್ಸೆ ದುಬಾರಿ ಆಗಿರುವುದು ಕಳವಳಕಾರಿ ಸಂಗತಿ. ಹೀಗಾಗಿ ಸರ್ವರಿಗೂ ಆರೋಗ್ಯ ಸೇವೆ ಸುಲಭ ರೀತಿಯಲ್ಲಿ ಸಿಗುವಂತೆ ನೋಡಿಕೊಳ್ಳುವುದು ಯುವ ವೈದ್ಯರ ಹೊಣೆಯಾಗಿದೆ ಎಂದು ಅಮೆರಿಕ ಚಿಕ್ಯಾಗೋ ವಿವಿ ವಿಜ್ಞಾನಿ ಪ್ರೊ| ನಂದೂರಿ ಪ್ರಭಾಕರ ಅಭಿಪ್ರಾಯಪಟ್ಟರು.

ಬುಧವಾರ ಬಿಎಲ್‌ಡಿಇ ವಿಶ್ವ ವಿದ್ಯಾಲಯದ ಗ್ರಂಥಾಲಯ ಸಭಾಂಗಣದಲ್ಲಿ ಜರುಗಿದ ಬಿಎಲ್‌ ಡಿಇ ಡೀಮ್ಡ್ ವಿಶ್ವವಿದ್ಯಾಲಯ 8ನೇ ಘಟಿಕೋತ್ಸವದಲ್ಲಿ ಭಾಷಣ ಮಾಡಿದ ಅವರು, ಶಿಕ್ಷಣ ಶಾಲೆ-ಕಾಲೇಜಿನಲ್ಲಿ ಕಲಿತರೆ ಮುಗಿಯವುದಿಲ್ಲ. ಕಲಿಕೆ ನಿರಂತರತೆ ಹೊಂದಿರಬೇಕು. ಅದರಲ್ಲೂ ವಿಜ್ಞಾನದ ಶಿಕ್ಷಣಕ್ಕೆ ಯಾವುದೇ ಪ್ರಾಂತ್ಯ, ದೇಶ, ಗಡಿ ರೇಖೆಗಳಿಲ್ಲ. ಅದು ಎಲ್ಲೆಡೆ ವ್ಯಾಪಿಸಿದ್ದು ಎಲ್ಲರೂ ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಸೂಪರ್‌ ಸ್ಪೇಷಾಲಿಟಿ ವಿಭಾಗ ಇನ್ನೂ ದುಬಾರಿಯಾಗಿದೆ. ಇದರಿಂದ ಹಣ ಇದ್ದ ಶ್ರೀಮಂತರಿಗೆ ಮಾತ್ರ ಭವಿಷ್ಯದಲ್ಲಿ ಆರೊಗ್ಯ ಸೇವೆ, ಚಿಕಿತ್ಸೆ. ಹಣ ಇಲ್ಲದ ಬಡವರಿಗೆ ವೈದ್ಯಕೀಯ ಸೇವೆ ಅಸಾಧ್ಯ ಎಂಬ ಸ್ಥಿತಿ ನಿರ್ಮಾಣವಾಗಿದೆ. ಇದೀಗ ಪದವಿ ಮುಗಿಸಿ, ವೈದ್ಯಕೀಯ ಸೇವೆಗೆ ಸಜ್ಜಾಗಿರುವ ಯುವ ವೈದ್ಯರು ಈ ದಿಶೆಯಲ್ಲಿ ಚಿಂತನೆ ಮಾಡಬೇಕು ಎಂದರು.

ಸಾರ್ವಜನಿಕ ಸೇವೆ, ಉದ್ದಿಮೆಗಳನ್ನು ಸ್ಥಾಪಿಸಿ, ಉತ್ಕೃಷ್ಠ ಸೇವೆ ಸಲ್ಲಿಸುತ್ತಿರುವ ಆಂಧ್ರಪದೇಶ ಬಿಜೆಪಿ ರಾಜ್ಯಸಭಾ ಸದಸ್ಯ ಸಿ.ಎಂ. ರಮೇಶ ಅವರಿಗೆ ಗೌರವ ಡಾಕ್ಟರೇಟ್‌ ಪ್ರದಾನ ಮಾಡಲಾಯಿತು. ವಿವಿ ಹಿರಿಯ ಸಂಶೋಧಕರಾದ ಡಾ| ಲತಾ ಮಳ್ಳೂರು, ಕಿರಿಯ ಸಂಶೋಧಕರಾದ ಡಾ| ಅರುಣಾ ಬಿರಾದಾರ ಅವರನ್ನು ಗೌರವಿಸಲಾಯಿತು.

ಸ್ನಾತಕೋತ್ತರ ವಿಭಾಗದಲ್ಲಿ ನಮ್ರತಾ ನಾಯರ 2 ಚಿನ್ನದ ಪದಕ, ಅನುಷಾ ರೆಡ್ಡಿ, ನಯನ ಕೃಷ್ಣನಾಥ, ಯಶೋಧ ಡಿ.ಎಚ್‌ ತಲಾ 1 ಚಿನ್ನದ ಪದಕ ಪಡೆದರು. ಪದವಿ ವಿಭಾಗದಲ್ಲಿ ಐಶ್ವರ್ಯಾ ಹೊನವಾಡ, ಮುದಿತ್‌ ಶರ್ಮಾ, ಸ್ವಾತಿ ಕುಮಾರಿ, ಸಹನಾ ಚೌಕಿಮಠ ವಿವಿಧ ವಿಷಯಗಳನ್ನು ತಲಾ 1 ಚಿನ್ನದ ಪದಕ ಪಡೆದರು.

ನಡೆದ ಘಟಿಕೋತ್ಸವದಲ್ಲಿ ಆನ್‌ಲೈನ್‌ ಮೂಲಕ ಎಂಬಿಬಿಎಸ್‌ 127 ಪದವಿ ವಿಧ್ಯಾರ್ಥಿಗಳು, 61 ಸ್ನಾತಕೋತ್ತರ, 11 ಸ್ನಾತಕೋತ್ತರ ಡಿಪ್ಲೋಮಾ, 2 ಎಫ್‌ ಇಎಸ್‌ಎಸ್‌, 12 ಪಿಎಚ್‌ಡಿ, 13 ಎಂಐಟಿ ಸೇರಿದಂತೆ 226 ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರಗಳನ್ನು ಬಿಎಲ್‌ಡಿಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಡಾ| ಎಂ.ಬಿ. ಪಾಟೀಲ ವಿತರಿಸಿದರು. ಉಪ ಕುಲಪತಿ ಡಾ| ಎಂ.ಎಸ್‌. ಬಿರಾದಾರ, ಆಡಳಿತ ಮಂಡಳಿ ಸದಸ್ಯರಾದ ಡಾ| ಸಿ.ಕೆ. ಕೊಕಾಟೆ, ಡಾ| ಆರ್‌.ಎಸ್‌. ಮುಧೋಳ, ಡಾ| ಕುಶಾಲ ದಾಸ್‌, ಡಾ| ಅರವಿಂದ ಪಾಟೀಲ ಉಪಸ್ಥಿತಿಯಲ್ಲಿ ನಡೆದ ಘಟಿಕೋತ್ಸವದಲ್ಲಿ ಕೋವಿಡ್ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ, ಬೋರ್ಡ್‌ ಆಫ್‌ ಸ್ಟಡೀಸ್‌ ಸದಸ್ಯರು ಮಾತ್ರ ಹಾಜರಿದ್ದರು.

ಉಜ್ಮಾಬಾನುಗೆ 8 ಚಿನ್ನದ ಪದಕ
ವಿಜಯಪುರ: ನಗರದ ಬಿಎಲ್‌ಡಿಇ ಡೀಮ್ಡ್ ವಿಶ್ವವಿದ್ಯಾಲಯ 8ನೇ ಘಟಿಕೋತ್ಸವದಲ್ಲಿ ನಗರದ ಪ್ರತಿಭಾವಂತೆ ಉಜ್ಮಾಬಾನು ಮುಜಾವರ 8 ಚಿನ್ನದ ಪದಕಗಳನ್ನು ಪಡೆಯುವ ಮೂಲಕ ವಿಶೇಷ ಸಾಧನೆ ಮೆರೆದಿದ್ದಾರೆ. ನಗರದ ಬಡಿಕಮಾನ್‌ ಪ್ರದೇಶದ ಸಿವಿಲ್‌ ಗುತ್ತಿಗೆದಾರ ಅಬ್ದುಲ್‌ ಜಬ್ಟಾರ್‌ ಇವರ ಪುತ್ರಿ ಉಜ್ಮಾಬಾನು ಎಂಬಿಬಿಎಸ್‌ ಪದವಿಯಲ್ಲಿ ಅತಿ ಹೆಚ್ಚು ಅಂಕ ಪಡೆದು 8 ಚಿನ್ನದ ಪದಕಗಳ ವಿಜೇತೆ ಎನಿಸಿದ್ದಾಳೆ. ಫಾರ್ಮಾಕಾಲಾಜಿ, ಗೈನಾಕಾಲಾಜಿ, ಪಿಡಿಯಾಟ್ರಿಕ್ಸ್‌, ಪೆಥಾಲಾಜಿ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಪಡೆದ ಸಾಧನೆ ಮೂಲಕ ಚಿನ್ನದ ಹುಡುಗಿ ಘಟಿಕೋತ್ಸವದ ಆಕರ್ಷಣೆಯ ಕೇಂದ್ರ ಬಿಂದುವಾದರು. ತಾಳಿಕೋಟೆ ತಾಲೂಕಿನ ಪೀರಾಪುರ ಗ್ರಾಮದ ಕಾಶೀನಾಥ ಸಂಗನಗೌಡ ಬಿರಾದಾರ ಅತ್ಯುತ್ತಮ ವಿದ್ಯಾರ್ಥಿ ಎಂದು 3 ಚಿನ್ನದ ಪದಕ ಪಡೆದು ಗಮನ ಸೆಳೆದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.