ಜ್ಞಾನ ದೇಗುಲಕ್ಕಿಲ್ಲದ ಭಾಗ್ಯ

 ಲಾಕ್‌ಡೌನ್‌ ಸಡಿಲಿಕೆ ಬಳಿಕವೂ ತೆರೆಯದ ಗ್ರಂಥಾಲಯಗಳು

Team Udayavani, Jun 11, 2020, 5:55 AM IST

ಜ್ಞಾನ ದೇಗುಲಕ್ಕಿಲ್ಲದ ಭಾಗ್ಯ

ಉಡುಪಿ: ಜಿಲ್ಲೆಯಲ್ಲಿ ಲಾಕ್‌ಡೌನ್‌ ಸಡಿಲಗೊಂಡು ದೇಗುಲಗಳು ಸಹಿತ ಬಹುತೇಕ ಕ್ಷೇತ್ರಗಳು ತೆರೆದುಕೊಂಡಿವೆ. ಆದರೆ ಓದುಗರ ಜ್ಞಾನ ಹೆಚ್ಚಿಸುವ ಸಾರ್ವಜನಿಕ ಗ್ರಂಥಾಲಯಗಳು ಮಾತ್ರ ಇನ್ನೂ ಸಾರ್ವಜನಿಕರಿಗೆ ಬಾಗಿಲು ತೆರೆದುಕೊಂಡಿಲ್ಲ.

ಸರಕಾರದ
ಆದೇಶ ಬಂದಿಲ್ಲ
ಗ್ರಂಥಾಲಯಗಳನ್ನು ತೆರೆದು ಸಾರ್ವಜನಿಕರ ಬಳಕೆಗೆ ನೀಡುವಂತೆ ಸರಕಾರದಿಂದ ಇದುವರೆಗೆ ಯಾವುದೇ ಆದೇಶಗಳು ಗ್ರಂಥಾಲಯ ವಿಭಾಗಕ್ಕೆ ಬಂದಿಲ್ಲ. ಹೀಗಾಗಿ ಸರಕಾರದ ಆದೇಶ ಬಾರದೆ ಗ್ರಂಥಾಲಯಗಳನ್ನು ಸಾರ್ವಜನಿಕರ ಬಳಕೆಗೆ ನೀಡುತ್ತಿಲ್ಲ. ಗ್ರಂಥಾಲಯಗಳನ್ನು ತೆರೆಯಲು ಅವಕಾಶ ನೀಡುವಂತೆ ಗ್ರಂಥಾಲಯ ಇಲಾಖೆಯಿಂದ ಸರಕಾರಕ್ಕೆ ಪ್ರಸ್ತಾವನೆ ಹೋಗಿದ್ದು, ಅನುಮತಿಗಾಗಿ ಕಾಯುತ್ತಿರುವುದಾಗಿ ಗ್ರಂಥಾಲಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಾ.22ರಿಂದ
ಸಾರ್ವಜನಿಕ ಸೇವೆ ರದ್ದು
ಸಾರ್ವಜನಿಕ ಗ್ರಂಥಾಲಯಗಳಲ್ಲಿ ಕೋವಿಡ್-19  ವೈರಸ್‌ ಒಬ್ಬರಿಂದ ಒಬ್ಬರಿಗೆ ಹರಡುವ ಸಾಧ್ಯತೆಗಳು ಹೆಚ್ಚಿರು ವುದರಿಂದ ಸರಕಾರ ರಾಜ್ಯದ ಎಲ್ಲ ಗ್ರಂಥಾ ಲಯಗಳನ್ನು ಮುಚ್ಚಲು ಮಾ.22ರಂದು ಆದೇಶ ನೀಡಿತ್ತು. ಜತೆಗೆ ಸಾರ್ವಜನಿಕ ಗ್ರಂಥಾಲಯಗಳಲ್ಲಿ ಪುಸ್ತಕಗಳ ಎರ ವಲು ಮತ್ತು ಹಿಂಪಡೆಯುವುದು, ಗ್ರಂಥಾಲಯಗಳ ಒಳಗೆ ಕುಳಿತು ಓದುವುದು ಸೇರಿದಂತೆ ಇತರ ಸೇವೆಗಳಿಗೆ ನಿರ್ಬಂಧ ಹೇರಲಾಗಿತ್ತು.

ರಾಜ್ಯದ 7,000 ಗ್ರಂಥಾಲಯಗಳು ಬಂದ್‌
ಜಿಲ್ಲಾ ಕೇಂದ್ರ ಗ್ರಂಥಾಲಯ, ನಗರ ಕೇಂದ್ರ ಗ್ರಂಥಾಲಯ, ತಾಲೂಕು ಕೇಂದ್ರ ಗ್ರಂಥಾಲಯ, ಗ್ರಾ.ಪಂ ಮಟ್ಟದ ಗ್ರಂಥಾಲಯಗಳು ಸೇರಿ ಉಡುಪಿ ಜಿಲ್ಲೆಯಲ್ಲಿ ಒಟ್ಟು 155 ಗ್ರಂಥಾಲಯಗಳಿವೆ. ಜಿಲ್ಲೆಯಲ್ಲಿರುವ ತಾಲೂಕುಗಳ ಗ್ರಾ.ಪಂ ವ್ಯಾಪ್ತಿಗೆ ಒಂದರಂತೆ 147 ಗ್ರಂಥಾಲಯಗಳಿವೆ. ಜಿಲ್ಲಾ ಗ್ರಂಥಾಲಯ-1, ತಾಲೂಕು ಮಟ್ಟದ ಗ್ರಂಥಾಲಯ-3, ಹಿರಿಯಡ್ಕ ಸೇವಾ ಕೇಂದ್ರ ಗ್ರಂಥಾಲಯ, ಬ್ರಹ್ಮಗಿರಿಯ ಮಕ್ಕಳ ಸಮುದಾಯ ಕೇಂದ್ರ, ಜಿಲ್ಲಾ ಕಾರಾಗೃಹ ಸೇವಾ ಕೇಂದ್ರ, ನಗರಸಭೆಯ 35 ವಾರ್ಡ್‌ ವ್ಯಾಪ್ತಿಯಲ್ಲಿ 9 ಗ್ರಂಥಾ ಲಯಗಳು ಕಾರ್ಯಾಚರಿಸುತ್ತಿವೆ. ರಾಜ್ಯದಲ್ಲಿ ಸುಮಾರು 7,000 ಗ್ರಂಥಾಲಯಗಳಿವೆ.

ಇ-ಗ್ರಂಥಾಲಯ ಬಳಕೆ
ಲಾಕ್‌ಡೌನ್‌ ಅವಧಿಯಲ್ಲಿ ಇ- ಗ್ರಂಥಾಲಯ ಓದುಗರ ವರದಾನ ವಾಗಿದ್ದು, 2 ತಿಂಗಳಲ್ಲಿ 1.67 ಲಕ್ಷ ಜನರು ಇ-ಗ್ರಂಥಾಲಯದಲ್ಲಿ ನೋಂದಣಿ ಮಾಡಿಕೊಂಡು ವಿವಿಧ ಪುಸ್ತಕಗಳನ್ನು ಓದಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 1,139 ಮಂದಿ ಪ್ರಯೋಜನ ಪಡೆದು ಕೊಂಡಿದ್ದಾರೆ.

ಗ್ರಂಥಾಲಯ ತೆರವಿಗೆ ಆಗ್ರಹ
ಲಾಕ್‌ಡೌನ್‌ ಸಡಿಲದಿಂದ ಎಫ್ಡಿಎ,ಎಸ್‌ಡಿಎ, ಕೆ-ಸೆಟ್‌, ಕೆಎಎಸ್‌, ಪೊಲೀಸ್‌, ಅಬಕಾರಿ, ರೈಲ್ವೆ ಇನ್ನಿತರ ಹುದ್ದೆಗಳಿಗೆ ಪರೀಕ್ಷೆಗಳನ್ನು ನಡೆಸಲು ಸರಕಾರ ಮುಂದಾಗಿದೆ.

ಈಗಾಗಲೇ ಲಾಕ್‌ಡೌನ್‌ ಸಡಿಲ
ಗೊಂಡ ಹಿನ್ನೆಲೆಯಲ್ಲಿ ಗ್ರಂಥಾಲಯ ಗಳನ್ನು ಆರಂಭಿಸಲು ಪರೀಕ್ಷಾರ್ಥಿಗಳು ಆಗ್ರಹಿಸಿದ್ದಾರೆ. ಪುಸ್ತಕ ಓದುಗರು ಕೂಡ ಗ್ರಂಥಾಲಯ ತೆರವಿಗೆ ಆಗ್ರಹಿಸಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾ ರಾಗಲು ಅಭ್ಯರ್ಥಿಗಳಿಗೆ ಸಾರ್ವಜನಿಕ ಗ್ರಂಥಾಲಯದ ಅತಿ ಅಗತ್ಯ ಇರುವು ದರಿಂದ ಇನ್ನಾದರೂ ಅಧಿಕಾರಿಗಳು ಇದರತ್ತ ಗಮನಹರಿಸಬೇಕಾಗಿದೆ.

ಸಾರ್ವ ಜನಿಕರಿಗೆ ಅವಕಾಶವಿಲ್ಲ
ಸರಕಾರದ ಆದೇಶಕ್ಕಾಗಿ ಗ್ರಂಥಾಲಯಗಳು ಕಾಯುತ್ತಿವೆ. ಜಿಲ್ಲೆಯ ವಿವಿಧ ಕಡೆಗಳಲ್ಲಿನ ಗ್ರಂಥಾಲಯಗಳ ಬಾಗಿಲುಗಳನ್ನು ಆಯಾ ಗ್ರಂಥಾಲಯ ಮೇಲ್ವಿಚಾರಕರು ತೆರೆಯುತ್ತಿದ್ದಾರೆ. ಸ್ಟಾಫ್ ವೆರಿಪಿಕೇಶನ್‌, ಇತ್ಯಾದಿ ಚಟುವಟಿಕೆಗಳನ್ನು ಸಿಬಂದಿಗಳು, ಅಧಿಕಾರಿಗಳು ನಡೆಸುತ್ತಿದ್ದಾರೆ. ಆದರೆ ಸಾರ್ವಜನಿಕರಿಗೆ ಯಾವುದೇ ಸೇವೆಗಳಿಗೆ ಅವಕಾಶವಿಲ್ಲ .ಕೆಲವೊಂದು ಕಡೆಗಳ ಗ್ರಂಥಾಲಯ ಗಳು ಬಾಗಿಲು ತೆರೆಯುತ್ತಲೇ ಇಲ್ಲ

ಪ್ರಸ್ತಾವನೆ ಸಲ್ಲಿಕೆ
ಲಾಕ್‌ಡೌನ್‌ ಸಡಿಲಗೊಂಡ ಹಿನ್ನೆಲೆಯಲ್ಲಿ ಗ್ರಂಥಾಲಯಗಳ ಬಾಗಿಲು ತೆರೆಯಲು ಅವಕಾಶ ನೀಡುವಂತೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಒಪ್ಪಿಗೆ ಸೂಚಿತ ಅನಂತರವೇ ಗ್ರಂಥಾಲಯ ತೆರೆಯಲಾಗುವುದು.
-ನಳಿನಿ ಜಿ.ಐ.,
ಮುಖ್ಯ ಗ್ರಂಥಾಲಯ ಅಧಿಕಾರಿ
ಜಿಲ್ಲಾ ಕೇಂದ್ರ ಗ್ರಂಥಾಲಯ ಉಡುಪಿ

ಟಾಪ್ ನ್ಯೂಸ್

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-thekkatte

ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

10-thekkatte

ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.