ಭಾರತಕ್ಕೆ ನಾಳೆ ಅಮೆರಿಕದ ವಿದೇಶಾಂಗ ಸಚಿವ ಆ್ಯಂಟನಿ ಬ್ಲಿಂಕೆನ್ ಆಗಮನ
Team Udayavani, Jul 26, 2021, 7:10 AM IST
ಹೊಸದಿಲ್ಲಿ/ಕಾಬೂಲ್: ಅಫ್ಘಾನಿಸ್ಥಾನದಲ್ಲಿ ತಾಲಿಬಾನ್ ಉಗ್ರರ ಕೈ ಮೇಲಾಗುತ್ತಿರುವಂತೆಯೇ, ಅಮೆರಿಕದ ವಿದೇಶಾಂಗ ಸಚಿವ ಆ್ಯಂಟನಿ ಬ್ಲಿಂಕೆನ್ ಜು.27ರಿಂದ 2 ದಿನಗಳ ಕಾಲ ಭಾರತ ಪ್ರವಾಸ ಕೈಗೊಳ್ಳಲಿ ದ್ದಾರೆ.
ಪ್ರಧಾನಿ ಮೋದಿ, ವಿದೇಶಾಂಗ ಸಚಿವ ಎಸ್.ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೊವಾಲ್ರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.
ಪಾಕಿಸ್ತಾನ ಉಗ್ರರ ಸ್ವರ್ಗವಾಗುತ್ತಿರುವುದು, ಅಫ್ಘಾನಿಸ್ಥಾನದಲ್ಲಿ ಅಮೆರಿಕ ಮತ್ತು ನ್ಯಾಟೋ ಪಡೆಗಳು ವಾಪಸಾಗುತ್ತಿರು ವಂತೆಯೇ ತಾಲಿಬಾನ್ ಉಗ್ರರ ಬಲವರ್ಧನೆ, ಮುಂದಿನ ಹಂತದ ಎರಡೂ ದೇಶಗಳ ನಡುವಿನ ರಕ್ಷಣೆ ಮತ್ತು ವಿದೇಶಾಂಗ ಸಚಿವರ 2 ಪ್ಲಸ್ 2 ಸಭೆ, ಅದಕ್ಕಿಂತ ಮೊದಲು ರಕ್ಷಣೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಸಂಬಂಧಿಸಿದ ಪರಿಣತಿಗಳ ವಿನಿಮಯ ಸೇರಿದಂತೆ ಹಲವು ಪ್ರಮುಖ ವಿಚಾರಗಳ ಬಗ್ಗೆ ಬ್ಲಿಂಕೆನ್ ಕೇಂದ್ರ ಸರಕಾರದ ಪ್ರಮುಖರ ಜತೆಗೆ ಮಾತುಕತೆ ನಡೆಸಲಿದ್ದಾರೆ.
ಅಮೆರಿಕ, ಆಸ್ಟ್ರೇಲಿಯ, ಭಾರತ, ಜಪಾನ್ ಲಸಿಕೆ ಪೂರೈಕೆ ನಿಟ್ಟಿನಲ್ಲಿ ಸಹಕಾರ ನೀಡಿಕೆ, ಭಾರತದಲ್ಲಿ ಉತ್ಪಾದನೆಯಾ ಗುವ ಲಸಿಕೆಗಳನ್ನು ವಿತರಣೆ, ಅಲ್ಲ ದೆ ಬಂಡವಾಳ ಹೂಡಿಕೆ, ಆರೋಗ್ಯ, ಶಿಕ್ಷಣ, ಡಿಜಿಟಲ್ ಕ್ಷೇತ್ರದಲ್ಲಿ ಸಹಕಾರದ ಬಗ್ಗೆಯೂ ಚರ್ಚೆಯಾಗಲಿದೆ.
22 ಸಾವಿರ ಕುಟುಂಬ ಪಲಾಯನ
ಅಫ್ಘಾನಿಸ್ಥಾನದಲ್ಲಿ ತಾಲಿಬಾನ್ನ ಕೇಂದ್ರ ಸ್ಥಾನ ಕಂದಹಾರ್ನಿಂದ 22 ಸಾವಿರ ಕುಟುಂ ಬಗಳು ಮನೆಯನ್ನೇ ಬಿಟ್ಟು ಒಡಿದ್ದಾರೆ. ಈ ಬಗ್ಗೆ ಎಎಫ್ಪಿ ಸುದ್ದಿಸಂಸ್ಥೆ ಜತೆಗೆ ಮಾತನಾ ಡಿದ ನಿರ್ವಸಿತರ ವಿಭಾಗದ ಮುಖ್ಯಸ್ಥ ಮೊಹಮ್ಮದ್ ದರ್ಯಾಬ್ ಮಾತನಾಡಿ ತಿಂಗಳಿಂದ ನಡೆಯುತ್ತಿರುವ ಸಂಘರ್ಷ ದಿಂದಾಗಿ 22 ಸಾವಿರ ಕುಟುಂಬಗಳು ಪಲಾಯನ ಮಾಡಿವೆ ಎಂದಿದ್ದಾರೆ. ಕಂದಹಾರ್ ನಗರದ ಹೊರಭಾಗದಲ್ಲಿ ರವಿವಾರವೂ ಕದನ ಮುಂದುವರಿದಿದೆ. ಇದೇ ವೇಳೆ, ಕಂದಹಾರ್ನಲ್ಲಿ 2 ವಾರದ ಅವಧಿಯಲ್ಲಿ ಪತ್ರಕರ್ತರು ಸೇರಿದಂತೆ 33 ಮಂದಿಯನ್ನು ಉಗ್ರರು ಕೊಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ