ರಕ್ತ ಮಾದರಿ ವರದಿ ನೆಗೆಟಿವ್‌: ಆತಂಕ ದೂರ


Team Udayavani, Feb 3, 2020, 3:06 AM IST

rakta-madari

ಬೆಂಗಳೂರು: ಪುಣೆಯ ರಾಷ್ಟ್ರೀಯ ರೋಗಸೂಕ್ಷ್ಮಾಣು ಅಧ್ಯಯನ ಸಂಸ್ಥೆಯಿಂದ (ಎನ್‌ಐವಿ) ಕರೋನಾ ವೈರಸ್‌ ಶಂಕಿತರ ರಕ್ತ ಮಾದರಿ ಪರೀಕ್ಷಾ ವರದಿಗಳು ನೆಗೆಟಿವ್‌ ಎಂದು ಬರುತ್ತಿದ್ದು, ಆತಂಕ ಪಡುವ ಅಗತ್ಯ ಇಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಆರೋಗ್ಯ ಇಲಾಖೆಯು ಚೀನಾದಿಂದ ಬಂದಿದ್ದ ವರನ್ನು ವಿಮಾನ ನಿಲ್ದಾಣದಲ್ಲಿಯೇ ಪರೀಕ್ಷೆಗೆ ಒಳಪಡಿ ಸುವ ಜತೆಗೆ ಅನಾರೋಗ್ಯ ಕಂಡು ಬಂದರೆ ಆಸ್ಪತ್ರೆಯಲ್ಲಿ ದಾಖಲಿಸಿ ನಿಗಾವಹಿಸುತ್ತಿತ್ತು. ನಗರದ ರಾಜೀವ್‌ ಗಾಂಧಿ ಎದೆ ರೋಗಗಳ ಆಸ್ಪತ್ರೆ ಸೇರಿ ಖಾಸಗಿ ಆಸ್ಪತ್ರೆಯಲ್ಲೂ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿತ್ತು.

ಈ ಪೈಕಿ ಜ.21 ರಿಂದ ಇಲ್ಲಿಯವರೆಗೆ 84 ಶಂಕಿತರನ್ನು ಆರೋಗ್ಯ ಇಲಾಖೆ ಗುರುತಿಸಿ ಪುಣೆಯ ರಾಷ್ಟ್ರೀಯ ರೋಗಸೂಕ್ಷ್ಮಾಣು ಅಧ್ಯಯನ ಸಂಸ್ಥೆಗೆ (ಎನ್‌ಐವಿ) ಕಳುಹಿಸಿತ್ತು. ಅವರಲ್ಲಿ 28 ಮಂದಿಯ ರಕ್ತ ಮಾದರಿ ವರದಿ ನೆಗೆಟಿವ್‌ ಎಂಬುದು ದೃಢವಾಗಿದೆ. ಇನ್ನು ಶನಿವಾರ ಹಾಗೂ ಭಾನುವಾರ ಆಸ್ಪತ್ರೆಗೆ ಬಂದು ರಕ್ತ ಮಾದರಿ ನೀಡಿರುವ 43 ಮಂದಿಯ ವರದಿ ಬರಬೇಕಿದೆ ಎಂದು ವೈದ್ಯರು ಹೇಳಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ರಾಜೀವ್‌ ಗಾಂಧಿ ಎದೆ ರೋಗಗಳ ಆಸ್ಪತ್ರೆಯ ನಿರ್ದೇಶಕ ಡಾ.ನಾಗರಾಜ್‌ ಅವರು, ಎಲ್ಲಾ ಶಂಕಿತರ ವರದಿಯೂ ನೆಗೆಟಿವ್‌ ಎಂದು ಬರುತ್ತಿದ್ದು, ಸಾರ್ವಜನಿಕರು ಆತಂಕ ಪಡುವ ಅಗತ್ಯ ಇಲ್ಲ. ವುಹಾನ್‌ ನಗರದಿಂದ ಬಂದವರನ್ನು ಮಾತ್ರ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಬೇಕು ಎಂದು ಕೇಂದ್ರ ಆರೋಗ್ಯ ಇಲಾಖೆ ಸೂಚನೆ ನೀಡಿದ್ದರಿಂದ ಎಲ್ಲರನ್ನೂ ಮನೆಗೆ ಕಳುಹಿಸಲಾಗಿದೆ. ಸದ್ಯ ಆಸ್ಪತ್ರೆಯಲ್ಲಿ ಯಾವುದೇ ಶಂಕಿತರು ಚಿಕಿತ್ಸೆ ಪಡೆಯುತ್ತಿಲ್ಲ. ಮನೆಯಲ್ಲಿಯೇ ಆರೋಗ್ಯ ಇಲಾಖೆ ನಿಗಾವಹಿಸಿದೆ ಎಂದರು.

ಭಯದಿಂದ ಬರುತ್ತಿರುವವರು ಹೆಚ್ಚು: ಇತ್ತೀಚೆಗೆ ಚೀನಾ ಪ್ರವಾಸ ಹೋಗಿ ಬಂದ ಅನೇಕರು ಯಾವುದೇ ಅನಾರೋಗ್ಯ ಕಾಣಿಸಿಕೊಳ್ಳದಿದ್ದರೂ ಆಸ್ಪತ್ರೆಗೆ ಬಂದು ರಕ್ತ ಪರೀಕ್ಷೆ ಮಾಡಿಸುತ್ತಿದ್ದಾರೆ. ಪ್ರವಾಸ ಹೋಗಿಬಂದ ಅನೇಕರಿಗೆ ನಮಗೂ ಕೊರೊನಾ ಇರಬಹುದೇ ಎಂಬ ಭಯ ಹೆಚ್ಚಾಗಿದೆ. ಹೀಗಾಗಿ, ಆಸ್ಪತ್ರೆಗೆ ಬಂದು ರಕ್ತಪರೀಕ್ಷೆ ಮಾಡಿಸಿ ನಿರಾಳರಾಗುತ್ತಿದ್ದಾರೆ. ಶನಿವಾರ 34, ಭಾನುವಾರ 9 ಮಂದಿ ಇತ್ತೀಚಿಗೆ ಚೀನಾ ಪ್ರವಾಸ ಮುಗಿಸಿಬಂದವರು ಅನಾರೋಗ್ಯ ಇಲ್ಲದಿದ್ದರೂ ರಕ್ತ ಪರೀಕ್ಷೆಗೆ ನೀಡಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ವದಂತಿ ಸುಳ್ಳು: ಈ ನಡುವೆ, ಬೆಂಗಳೂರಿನ ವಿಲ್ಸನ್‌ ಗಾರ್ಡನ್‌ ಸುತ್ತಮುತ್ತಲಿನ 19 ಮಂದಿಗೆ ಸೋಂಕು ತಗುಲಿದೆ ಎಂಬ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ, ಆತಂಕಕ್ಕೆ ಎಡೆ ಮಾಡಿಕೊಟ್ಟಿತ್ತು. ಇದು ಸತ್ಯಕ್ಕೆ ದೂರ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದರು.

ನೆರೆಯವರ ದೂರಿನಿಂದ ಎಚ್ಚೆತ್ತು ಆರೋಗ್ಯ ತಪಾಸಣೆ: ಈ ಮಧ್ಯೆ, ನಗರದ ಬೇಗೂರು ಬಳಿಯ ಕುಟುಂಬವೊಂದರ 5 ಮಂದಿ ಇತ್ತೀಚೆಗೆ ಚೀನಾ ಪ್ರವಾಸಕ್ಕೆ ಹೋಗಿ ಬಂದಿದ್ದರು. ಈ ಕುರಿತು ಮಾಹಿತಿ ಇದ್ದ ನೆರೆಯವರು ಅವರಿಗೂ ಸೋಂಕು ತಗುಲಿರಬಹುದು ಎಂದು ಆರೋಗ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಆರೋಗ್ಯ ಇಲಾಖೆ ಸಿಬ್ಬಂದಿ ಸಲಹೆ ಮೇರೆಗೆ ಆ ಕುಟುಂಬ ಸದಸ್ಯರು ಆಸ್ಪತ್ರೆಗೆ ಬಂದು ಆರೋಗ್ಯ ತಪಾಸಣೆ ಮಾಡಿಸಿದ್ದಾರೆ. ಕೊರೊನಾ ಸೋಂಕಿನ ಲಕ್ಷಣ ಕಂಡು ಬಂದಿಲ್ಲ. ಮುಂಜಾಗ್ರತಾ ಕ್ರಮವಾಗಿ ವೈದ್ಯರು ರಕ್ತ ಪರೀಕ್ಷೆಗೆ ಮಾಡಿದ್ದು, ವರದಿ ಬರಬೇಕಿದೆ.

ಇಂದಿನಿಂದ ಬೆಂಗಳೂರಲ್ಲೇ ಕೊರೊನಾ ಪರೀಕ್ಷೆ: ಇದುವರೆಗೂ ಕೊರೊನಾ ಶಂಕಿತರ ರಕ್ತ ಪರೀಕ್ಷೆಗೆ ಪುಣೆ ಎನ್‌ಐವಿಗೆ ಕಳಿಸಬೇಕಿತ್ತು. ಇವತ್ತಿನಿಂದ ಬೆಂಗಳೂರಲ್ಲೇ ಕೊರೊನಾ ಪರೀಕ್ಷೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಗತ್ಯ ಕ್ರಮ ಕೈಗೊಂಡಿದೆ. ರಾಜೀವ್‌ ಗಾಂಧಿ ಆಸ್ಪತ್ರೆಯ ಎನ್‌ಐವಿ ಕೇಂದ್ರ ಹಾಗೂ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರಕ್ತದ ಮಾದರಿಗಳ ಪರೀಕ್ಷೆಗೆ ವೈದ್ಯಕೀಯ ಪ್ರಯೋಗಾಲಯಗಳನ್ನು ನವೀಕರಿಸಲಾಗಿದೆ. ಪರೀಕ್ಷೆ ಸಂಬಂಧ ಸಿಬ್ಬಂದಿಗೆ ಅಗತ್ಯ ತರಬೇತಿ ನೀಡಲಾಗಿದೆ. ಸೋಮವಾರದಿಂದ ಪರೀಕ್ಷೆಗಳನ್ನು ಪ್ರಾರಂಭಿಸಲಾಗುತ್ತದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.