ಪೊಲೀಸ್‌-ಸಾರ್ವಜನಿಕರ ರಕ್ಷಕ “ಬಾಡಿ ಕೆಮರಾ’ !

ವಾಹನ ತಪಾಸಣೆ ವೇಳೆ ಬಳಕೆ; ದುರ್ವರ್ತನೆ ತೋರಿದರೆ ಆಪತ್ತು

Team Udayavani, Oct 5, 2021, 5:18 AM IST

ಪೊಲೀಸ್‌-ಸಾರ್ವಜನಿಕರ ರಕ್ಷಕ “ಬಾಡಿ ಕೆಮರಾ’ !

ಮಹಾನಗರ: ವಾಹನ ತಪಾಸಣೆ ವೇಳೆ ಪೊಲೀಸರು ಮತ್ತು ಸಾರ್ವಜನಿಕರಿಗೆ “ರಕ್ಷಣೆ’ ಒದಗಿಸಬಲ್ಲ “ಬಾಡಿ ಕೆಮರಾ’ ಗಳನ್ನು ಈಗ ಹೆಚ್ಚಾಗಿ ಬಳಸಲು ಮಂಗಳೂರು ಸಂಚಾರ ವಿಭಾಗದ ಪೊಲೀಸರು ಮುಂದಾಗಿದ್ದಾರೆ.

ವಾಹನಗಳ ತಪಾಸಣೆ ವೇಳೆ ಸಾರ್ವ ಜನಿಕರು ಆಕ್ರೋಶಭರಿತರಾಗಿ ವರ್ತಿಸುವುದು, ಪೊಲೀಸರು ದರ್ಪದಿಂದ, ಒರಟಾಗಿ ನಡೆದುಕೊಳ್ಳುವುದು, ಮಾತಿನ ಚಕಮಕಿ, ಸಂಘರ್ಷದ ವಾತಾವರಣ ಉಂಟಾಗುವುದು ಮೊದಲಾದವುಗಳನ್ನು ತಪ್ಪಿಸಲು “ಬಾಡಿ ಕೆಮರಾ’ ನೆರವಿಗೆ ಬರುತ್ತಿದೆ. ಸದ್ಯ ಮಂಗಳೂರು ಪೊಲೀಸರ ಬಳಿ ಕೆಲವೇ ಸಂಖ್ಯೆಯ ಬಾಡಿ ಕೆಮರಾಗಳಿದ್ದು ಇನ್ನಷ್ಟು ಬಾಡಿ ಕೆಮರಾಗಳಿಗೆ ಬೇಡಿಕೆ ಇದೆ.

ಕಾರ್ಯನಿರ್ವಹಣೆ ಹೇಗೆ?
“ಬಾಡಿ ಕೆಮರಾ’ಗಳು ಧ್ವನಿ ಮತ್ತು ದೃಶ್ಯ ಎರಡನ್ನೂ ಚಿತ್ರೀಕರಿಸಿಕೊಳ್ಳುತ್ತವೆ. ಅದನ್ನು ಅಗತ್ಯ ಬಿದ್ದಾಗ ಪರಿಶೀಲಿಸಬಹುದಾಗಿದೆ. ಸಾರ್ವಜನಿಕರು ಅಥವಾ ಕರ್ತವ್ಯದಲ್ಲಿರುವ ಪೊಲೀಸರು ದುರ್ವರ್ತನೆ ತೋರಿದರೆ ಅದು “ಬಾಡಿ ಕೆಮರಾ’ದಲ್ಲಿ ದಾಖಲಾಗುವುದರಿಂದ ತಪ್ಪು ಮಾಡಿದವರು ಅವರ ತಪ್ಪನ್ನು ಅಲ್ಲಗಳೆಯಲು ಅವಕಾಶ ಇರುವುದಿಲ್ಲ. ಈಗಾಗಲೇ ಸಂಚಾರಿ ಪೊಲೀಸರಿಗೂ ಸಂಯಮದ ವರ್ತನೆಗೆ ಸೂಚನೆ ನೀಡಲಾಗಿದೆ. ಸಾರ್ವಜನಿಕರೂ ಸಹಕರಿ ಸುತ್ತಿದ್ದಾರೆ. ಆದರೆ ಕೆಲವೊಮ್ಮೆ ಅನಪೇಕ್ಷಿತ ಘಟನೆಗಳು ನಡೆಯುವ ಸಾಧ್ಯತೆಗಳು ಇರುವುದರಿಂದ “ಬಾಡಿ ಕೆಮರಾ’ಗಳನ್ನು ಬಳಸುವುದು ಸೂಕ್ತವಾಗಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:RSS ವಿರುದ್ಧ ಹೇಳಿಕೆ : ಜಾವೇದ್ ಅಖ್ತರ್ ವಿರುದ್ಧ ಎಫ್‍ಐಆರ್

ಹಲವು ಘಟನೆಗಳು
ಈಗಾಗಲೇ ನಗರದಲ್ಲಿ ಟೋಯಿಂಗ್‌ ಸಂದರ್ಭ ಪೊಲೀಸರ ಜತೆ ಮಾತಿನ ಚಕಮಕಿಯ ಘಟನೆಗಳು ನಡೆದಿದ್ದವು. ಅಲ್ಲದೆ ಕಳೆದ ತಿಂಗಳು ಸಿಗ್ನಲ್‌ ಜಂಪ್‌ ಮಾಡಿದ ಓರ್ವನನ್ನು ಪೊಲೀಸರು ವಿಚಾರಿಸಿದಾಗ ಆತ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ದೂರು ದಾಖಲಾಗಿತ್ತು. ಕಳೆದ ವಾರ ಹೆಲ್ಮೆಟ್‌ ಹಾಕದೆ ಸಂಚಾರ ನಿಯಮ ಉಲ್ಲಂಘಿಸಿ ಸಂಚರಿಸುತ್ತಿದ್ದ ಬೈಕ್‌ ಸವಾರರನ್ನು ತಡೆದು ನಿಲ್ಲಿಸಿದ ಗೃಹರಕ್ಷಕ ಮಹಿಳಾ ಸಿಬಂದಿಯನ್ನು ನಿಂದಿಸಲಾಗಿತ್ತು. ಹಲವೆಡೆ ಪೊಲೀಸರು ಸಂಯಮ ಕಳೆದುಕೊಂಡು ವರ್ತಿಸಿದ್ದಾರೆ ಎಂಬ ದೂರುಗಳು ಕೇಳಿಬಂದಿದ್ದವು.

ತುಂಬಾ ಉಪಯೋಗ
ಕೆಲವು ಪಾಯಿಂಟ್‌ಗಳಲ್ಲಿ ಒಬ್ಬೊಬ್ಬರೇ ಕೆಲಸ ಮಾಡುವಾಗ ಮೊಬೈಲ್‌ನಿಂದ ರೆಕಾರ್ಡ್‌ ಮಾಡಿಕೊಳ್ಳುವುದು ಸಾಧ್ಯವಾಗುವುದಿಲ್ಲ. ಇಂತಹ ಸಂದರ್ಭ ನಮಗೆ ಬಾಡಿ ಕೆಮರಾ ತುಂಬಾ ಉಪಯೋಗಕ್ಕೆ ಬರುತ್ತದೆ. ಕರ್ತವ್ಯಕ್ಕೆ ಅಡ್ಡಿ ಪಡಿಸುವವರ ದೃಶ್ಯ ದಾಖಲಾಗುವುದರಿಂದ ನಮಗೆ ಸಾಕ್ಷಿ ದೊರೆಯುತ್ತದೆ ಎನ್ನುತ್ತಾರೆ ಸಂಚಾರಿ ಪೊಲೀಸ್‌ ಸಿಬಂದಿ.

ಠಾಣೆಗೆ 2-4 ಕೆಮರಾ
ಸಂಚಾರ ವಿಭಾಗದ ಪ್ರತಿ ಪೊಲೀಸ್‌ ಠಾಣೆಗೆ 2ರಿಂದ 4 ಬಾಡಿ ಕೆಮರಾ ನೀಡಲಾಗಿದೆ. ಈಗ ಪ್ರಮುಖ ಸ್ಥಳಗಳಲ್ಲಿ ಮಾತ್ರ ಇವುಗಳನ್ನು ಬಳಸಲಾಗುತ್ತಿದೆ. ವಾಹನಗಳ ಸಂಖ್ಯೆ, ತಪಾಸಣೆ ಹೆಚ್ಚುತ್ತಿರುವುದರಿಂದ ಬಾಡಿ ಕೆಮರಾಗಳ ಸಂಖ್ಯೆಯನ್ನು ಹೆಚ್ಚಿಸಬೇಕು ಎಂಬುದು ಪೊಲೀಸ್‌ ಸಿಬಂದಿಯ ಬೇಡಿಕೆ.

ಕರ್ತವ್ಯ ನಿರ್ವಹಣೆಗೆ ಪೂರಕ
ಬಾಡಿ ಕೆಮರಾಗಳ ಅಗತ್ಯದ ಬಗ್ಗೆ ಸರಕಾರ, ನ್ಯಾಯಾಲಯಗಳು ಕೂಡ ಹೇಳಿವೆ. ಮಂಗಳೂರಿನಲ್ಲಿ ಸದ್ಯ ಕಡಿಮೆ ಸಂಖ್ಯೆಯಲ್ಲಿ ಬಾಡಿ ಕೆಮರಾ ಬಳಕೆ ಮಾಡಲಾಗುತ್ತಿದೆ. ಬೇಡಿಕೆ ಹೆಚ್ಚಿದ್ದು ಇದನ್ನು ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು. ಇಂತಹ ಕೆಮರಾಗಳು ಕರ್ತವ್ಯ ನಿರತ ಪೊಲೀಸರ ಸುರಕ್ಷತೆ ದೃಷ್ಟಿಯಿಂದಲೂ ಪೂರಕವಾಗಿವೆ.
 -ಎಂ.ಎ. ನಟರಾಜ್‌,
ಎಸಿಪಿ, ಸಂಚಾರಿ ಉಪವಿಭಾಗ, ಮಂಗಳೂರು

ಟಾಪ್ ನ್ಯೂಸ್

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.