ಬೋಗಾಯನ ಕೆರೆ: ಅಭಿವೃದ್ಧಿ ಕಾಮಗಾರಿ ಆರಂಭ , ಐತಿಹಾಸಿಕ ಕೆರೆಗೆ ಸಿಗಲಿದೆ ಕಾಯಕಲ್ಪ


Team Udayavani, Feb 24, 2022, 12:32 PM IST

ಬೋಗಾಯನ ಕೆರೆ: ಅಭಿವೃದ್ಧಿ ಕಾಮಗಾರಿ ಆರಂಭ , ಐತಿಹಾಸಿಕ ಕೆರೆಗೆ ಸಿಗಲಿದೆ ಕಾಯಕಲ್ಪ

ಸುಬ್ರಹ್ಮಣ್ಯ: ಸಂಸದ ನಳಿನ್‌ ಕುಮಾರ್‌ ಕಟೀಲ್‌ ಆಯ್ಕೆ ಮಾಡಿಕೊಂಡಿರುವ ಸಂಸದರ ಆದರ್ಶ ಗ್ರಾಮ ಕಡಬ ತಾಲೂಕಿನ ಬಳ್ಪ ಗ್ರಾಮದ ಐತಿಹಾಸಿಕ ಬೋಗಾಯನ ಕೆರೆ ಅಭಿವೃದ್ಧಿ ಕೆಲಸ ಕಾಮಗಾರಿ ಆರಂಭಗೊಂಡಿದ್ದು, ಕೆರೆಯ ಶುಚಿತ್ವ ಕಾರ್ಯ ನಡೆಯುತ್ತಿದೆ.

ಸಣ್ಣ ನೀರಾವರಿ ಇಲಾಖೆಯಿಂದ ಮಂಜೂರಾದ 2 ಕೋಟಿ ರೂ. ಅನು ದಾನದಲ್ಲಿ ಬೋಗಾಯನ ಕೆರೆ ಅಭಿವೃದ್ಧಿ ನಡೆಯುತ್ತಿದ್ದು, ಇತ್ತೀಚೆಗೆ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಸಚಿವ ಎಸ್‌.ಅಂಗಾರ ಉಪಸ್ಥಿತಿಯಲ್ಲಿ ಕಾಮಗಾರಿಗೆ ಚಾಲನೆ ನೀಡಿದ್ದರು. ಕೆರೆ ಅಭಿವೃದ್ಧಿಗೊಂಡಲ್ಲಿ ಅಂತರ್ಜಲ ವೃದ್ಧಿಗೂ ಸಹಕಾರಿಯಾಗಲಿದೆ. ಕುಡಿಯುವ ನೀರಿಗೂ, ಕೃಷಿಗೂ ಬಳಸ ಬಹುದಾಗಿದೆ. ಒಟ್ಟಿನಲ್ಲಿ ಕೆರೆ ಅಭಿವೃದ್ಧಿ ಗ್ರಾಮದ ಜನತೆಗೆ ವಿವಿಧ ಬಗೆಯಲ್ಲಿ ಉಪಯೋಗವಾಗಲಿದೆ.

ಹಲವು ವರ್ಷಗಳ ಬೇಡಿಕೆ
ಬೋಗಾಯನ ಕೆರೆಗೆ ಕಾಯಕಲ್ಪ ನೀಡದ ಕಾರಣ ಹೂಳು ತುಂಬಿ, ನೀರು ಕಲುಷಿತ ಹಂತದಲ್ಲಿತ್ತು. ಜತೆಗೆ ಬೇಸಗೆಯಲ್ಲಿ ಕೆರೆಯಲ್ಲಿ ನೀರು ಬತ್ತಿ ಹೋಗುತ್ತಿತ್ತು. ನಳಿನ್‌ ಕುಮಾರ್‌ ಕಟೀಲ್‌ ಬಳ್ಪವನ್ನು ಆದರ್ಶ ಗ್ರಾಮವನ್ನಾಗಿ ಆಯ್ಕೆ ಮಾಡಿಕೊಂಡ ಸಂದರ್ಭದಲ್ಲಿ ಕೆರೆಯ ಅಭಿವೃದ್ಧಿ ಬೇಡಿಕೆ ಈಡೇರುವ ಮುನ್ನಲೆಗೆ ಬಂದಿತ್ತು. ಸಂಸದರು ಕೂಡ ಕೆರೆ ಅಭಿವೃದ್ಧಿಗೆ ಪೂರಕವಾಗಿ ಸ್ಪಂದಿಸಿದ್ದರು.

ಇದನ್ನೂ ಓದಿ :ರಷ್ಯಾದ 5 ವಿಮಾನಗಳು, ಹೆಲಿಕ್ಯಾಪ್ಟರ್ ಹೊಡೆದುರುಳಿಸಿದ ಉಕ್ರೇನ್

ಕಾಮಗಾರಿ ಆರಂಭ
ಈಗಾಗಲೇ ಜೆಸಿಬಿ ಯಂತ್ರದ ಸಹಾಯದಿಂದ ಕೆರೆಯ ಮೇಲಿನ ಹಾಗೂ ಕೆರೆಯ ಬದಿಯ ಕಸ, ಕಡ್ಡಿ, ಹೂಳು, ಮಣ್ಣು ತೆರವು ಕಾರ್ಯ ಭರದಿಂದ ನಡೆಯುತ್ತಿದೆ. ಮೊದಲಿಗೆ ಕೆರೆಗೆ ಹೊರ ಭಾಗದಿಂದ ನೀರು ಹರಿದು ಬಾರದಂತೆ ತಡೆಯೊಡ್ಡಲು, ಕಲುಷಿತ ನೀರು, ಕಸ-ಕಡ್ಡಿ ಬಾರದಂತೆ ತಡೆಯಲು ತಡೆಗೋಡೆ ನಿರ್ಮಾಣ ಕಾರ್ಯ ನಡೆಯಲಿದೆ. ಬಳಿಕ ಕೆರೆಯ ಹೂಳು ತೆರವುಗೊಳಿಸಿ ಸ್ವತ್ಛಗೊಳಿಸುವ ಕಾಮಗಾರಿ ನಡೆಸಲಾಗುತ್ತದೆ. ನಾಗರಾಜ್‌ ನಾಯಕ್‌ ಕಾಮಗಾರಿ ನಿರ್ವಹಿಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಐತಿಹಾಸಿಕ ಕೆರೆ
ಕದಂಬರ ತುಂಡರಸ ಬೋಗರಾಯ ವರ್ಮ ಕಡಬ ಪ್ರದೇಶವನ್ನು ಆಳುತ್ತಿದ್ದ ಕಾಲದಲ್ಲಿ ಕಡಬ, ಬಳ್ಪದಲ್ಲಿ 2 ಕೆರೆ ನಿರ್ಮಿಸ ಲಾಗಿತ್ತು ಎಂದು ಇತಿಹಾಸ ಹೇಳುತ್ತದೆ. ಬಳ್ಪದ ಕೆರೆಯನ್ನು ಬೋಗರಾಯವರ್ಮ ನಿರ್ಮಿಸಿದ ಕಾರಣ ಬೋಗಾಯನ ಕೆರೆ ಎಂದು ಪ್ರಸಿದ್ಧಿ ಪಡೆದಿದೆ ಎನ್ನುತ್ತಾರೆ ಹಿರಿಯರು.

ಪ್ರವಾಸಿ ತಾಣವಾಗಿಸುವ ಯೋಜನೆ
ಪ್ರಶಾಂತ ತಾಣದಲ್ಲಿರುವ ಐತಿಹಾಸಿಕ ಬೋಗಾಯನ ಕೆರೆ ವಿಶಾಲ ಪ್ರದೇಶದಲ್ಲಿದ್ದು, ಪ್ರವಾಸಿಗರನ್ನು ಆಕರ್ಷಿಸಲಿದೆ. ಇದೇ ಹಿನ್ನೆಲೆಯಲ್ಲಿ ಇಲ್ಲಿ ಪ್ರವಾಸಿ ತಾಣವಾಗಿಯೂ ಅಭಿವೃದ್ಧಿ ಮಾಡಲು ಯೋಜನೆಗೆ ಚಿಂತಿಸಲಾಗಿದೆ. ಕೆರೆಯ ಬದಿಯಲ್ಲಿ ಉದ್ಯಾನವನ, ಪ್ರವಾಸಿಗರಿಗೆ ಕುಳಿತುಕೊಳ್ಳಲು, ಕೆರೆ ವೀಕ್ಷಣೆಗೆ, ಬೋಟಿಂಗ್‌ಗೆ ವ್ಯವಸ್ಥೆ ಕಲ್ಪಿಸುವ ಯೋಜನೆ ರೂಪಿಸುವ ಬಗ್ಗೆ ಚಿಂತನೆ ನಡೆದಿದೆ. ಮೊದಲ ಹಂತದಲ್ಲಿ ಇಲ್ಲವೇ ಎರಡನೇ ಹಂತದಲ್ಲಿ ಈ ಕಾರ್ಯ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.