ಬೂಸ್ಟರ್ ಡೋಸ್ ಪಡೆದ ಡಾ| ಹೆಗ್ಗಡೆ
Team Udayavani, Jan 24, 2022, 5:20 AM IST
ಬೆಳ್ತಂಗಡಿ: ಕೋವಿಡ್ ಮೂರನೇ ಅಲೆಯ ಹಿನ್ನೆಲೆಯಲ್ಲಿ ಸರಕಾರ ಆರೋಗ್ಯ ಸುರಕ್ಷೆಗಾಗಿ ತಂದಿರುವ ಕೋವಿಡ್ ಬೂಸ್ಟರ್ ಲಸಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ರವಿವಾರ ಪಡೆದುಕೊಂಡರು.
ಎಲ್ಲೆಡೆ ಜ್ವರ, ಕೆಮ್ಮು ಮತ್ತಿತರ ರೋಗ ಲಕ್ಷಣಗಳು ಕಾಣಿಸಿಕೊಳ್ಳುತ್ತಿವೆ. ಸರಕಾರದ ಮಾರ್ಗಸೂಚಿಯಂತೆ ಸಾರ್ವಜನಿಕ ಪ್ರದೇಶದಲ್ಲಿ ಮಾಸ್ಕ್ ಧರಿಸಿ ಸೋಂಕಿನಿಂದ ರಕ್ಷಣೆ ಪಡೆಯಬೇಕಿದೆ.
ಆರೋಗ್ಯವೇ ಭಾಗ್ಯ ಎಂಬ ನೆಲೆಯಲ್ಲಿ ನಮ್ಮನ್ನು ನಾವು ರಕ್ಷಣೆ ಮಾಡಿಕೊಳ್ಳುವ ಸಲುವಾಗಿ ನಾನು ಬೂಸ್ಟರ್ ಪಡೆದುಕೊಂಡಿದ್ದೇನೆ. ಅರ್ಹರಾದ ಎಲ್ಲರೂ ಬೂಸ್ಟರ್ ಲಸಿಕೆ ಪಡೆದುಕೊಳ್ಳಿ ಎಂದು ಡಾ| ಹೆಗ್ಗಡೆಯವರು ಸಲಹೆ ನೀಡಿದ್ದಾರೆ.
ತಾಲೂಕು ಆರೋಗ್ಯಾಧಿಕಾರಿ ಡಾ| ಕಲಾಮಧು ಉಪಸ್ಥಿತರಿದ್ದರು.
ಇದನ್ನೂ ಓದಿ:ಕೋವಿಡ್ ಪರೀಕ್ಷೆ ಹೆಚ್ಚಳದಿಂದ ಸೋಂಕು ನಿಯಂತ್ರಣ: ಸಚಿವ ಡಾ.ಕೆ. ಸುಧಾಕರ್