ಪವರ್ ಸ್ಟಾರ್ ಅಭಿಮಾನಿಗಳಿಗೆ ನಿರಾಸೆ ಮಾಡಿದ “ಯುವರತ್ನ’
Team Udayavani, Jun 25, 2020, 7:45 AM IST
ಈಗಾಗಲೇ ಲಾಕ್ಡೌನ್ನಿಂದಾಗಿ ಸ್ಥಗಿತಗೊಂಡಿದ್ದ ಸಿನಿಮಾಗಳ ಚಿತ್ರೀಕರಣಕ್ಕೆ ಸರ್ಕಾರ ಅನುಮತಿ ನೀಡಿದೆ. ಆದರೆ ಚಿತ್ರದ ಕಲಾವಿದರು, ತಂತ್ರಜ್ಞರು ಬೇರೆ ರಾಜ್ಯಗಳಲ್ಲಿ ಸಿಲುಕಿಕೊಂಡಿದ್ದರಿಂದ ಸಿನಿಮಾ ಕೆಲಸಗಳು ನಿಧಾನವಾಗಿ ಸಾಗುತ್ತಿವೆ. ಈ ನಡುವೆ ಸ್ಯಾಂಡಲ್ವುಡ್ನದ ಬಹು ನಿರೀಕ್ಷಿತ “ಯುವರತ್ನ’ ಚಿತ್ರ ತಂಡದಿಂದ ಸುದ್ದಿಯೊಂದು ಹೊರ ಬಂದಿದ್ದು, ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಭಿಮಾನಿಗಳಿಗೆ ಬೇಸರ ತರಿಸಿದೆ.
ಹೌದು! “ಯುವರತ್ನ’ ಚಿತ್ರದ ನಿರ್ದೇಶಕ ಸಂತೋಷ್ ಆನಂದ್ರಾಮ್ ಈ ಬಗ್ಗೆ ಟ್ವೀಟ್ ಮಾಡಿದ್ದು, ಚೆನ್ನೈ, ಹೈದರಾಬಾದ್ ಹಾಗೂ ಮುಂಬೈನಲ್ಲಿ ಕೆಲಸಗಳು ನೆಡೆಯುತ್ತಿಲ್ಲ. ಚೆನ್ನೈ ಮತ್ತು ಮುಂಬೈ ಲಾಕ್ಡೌನ್ ನಲ್ಲಿವೆ. ಪರಿಸ್ಥಿತಿ ಹದವಾಗುವವರೆಗೂ ಯುವರತ್ನ ಹಾಡುಗಳು ಬರುವುದು ಕಷ್ಟ. ಸಂಗೀತ ನಿರ್ದೇಶಕ ತಮನ್ ಅವರು ಚೆನ್ನೈನ ಲಾಕ್ಡೌನ್ ನಲ್ಲಿ ಸಿಲುಕಿದ್ದಾರೆ. ಹಾಗಾಗಿ ಅಭಿಮಾನಿಗಳು ದಯವಿಟ್ಟು ಸಹಕರಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ.
ಚೆನ್ನೈ, ಹೈದರಾಬಾದ್ ಹಾಗು ಮುಂಬೈ ನಲ್ಲಿ ಕೆಲಸಗಳು ನೆಡೆಯುತ್ತಿಲ್ಲ !ಚೆನ್ನೈ ,ಮುಂಬೈ ಲೊಕ್ಡೌನ್ ನಲ್ಲಿವೆ..ಪರಿಸ್ಥಿತಿ ಹದವಾಗುವ ವರೆಗೂ ಯುವರತ್ನ ಹಾಡುಗಳು ಬರುವುದು ಕಷ್ಟ.. @MusicThaman ಅವರು ಚೆನ್ನೈ ಅಲ್ಲಿ ಲೊಕ್ಡೌನ್ ನಲ್ಲಿದ್ದಾರೆ ದಯವಿಟ್ಟು ಸಹಕರಿಸಿ…..? #YuvarathnaaSongs
— Santhosh Ananddram (@SanthoshAnand15) June 23, 2020
ಇನ್ನು ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ನಟಿಸುತ್ತಿರುವ “ಯುವರತ್ನ’ ಸಿನಿಮಾ ದೊಡ್ಡ ನಿರೀಕ್ಷೆಯನ್ನು ಹುಟ್ಟುಹಾಕಿದೆ. ಅಲ್ಲದೇ “ರಾಜಕುಮಾರ’ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಸಂತೋಷ್ ಆನಂದ್ ರಾಮ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಸಿನಿಮಾದಲ್ಲಿ ಪುನೀತ್ ರಾಜ್ಕುಮಾರ್ಗೆ ಜೋಡಿಯಾಗಿ ಸಯೇಷ ಸೈಗಲ್ ಕಾಣಿಸಿಕೊಂಡಿದ್ದು, ಜೊತೆಗೆ ಸೋನು, ಡಾಲಿ ಧನಂಜಯ್, ವಸಿಷ್ಠ ಸಿಂಹ ಸಿನಿಮಾದಲ್ಲಿ ಅಬ್ಬರಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ