ಸೊರಬ : ಬೆಂಗಳೂರಿನಿಂದ ಕೂಲಿ ಕೆಲಸಕ್ಕೆಂದು ಬಂದ ಯುವಕ ಕೆರೆಯಲ್ಲಿ ಮುಳುಗಿ ಸಾವು
Team Udayavani, Dec 16, 2021, 5:56 PM IST
ಸೊರಬ: ಕೆರೆಯಲ್ಲಿ ಸ್ನಾನ ಮಾಡಲು ತೆರಳಿದ್ದ ಯುವಕನೊಬ್ಬ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ಪಟ್ಟಣದ ಹಿರೇಶಕುನ ಕೆರೆಯಲ್ಲಿ ಗುರುವಾರ ನಡೆದಿದೆ.
ಮೂಲತಃ ಬೆಂಗಳೂರಿನ ರಾಜಗೋಪಾಲ ನಗರದ ಬಸಪ್ಪನಕಟ್ಟೆ ನಿವಾಸಿ ಶಂಕರ ವೆಂಕಟೇಶಪ್ಪ ( 30) ಮೃತ ದುರ್ಧೈವಿ. ಪಟ್ಟಣಕ್ಕೆ ಕೂಲಿ ಕೆಲಸಕ್ಕೆಂದು ಆಗಮಿಸಿದ್ದ ಯುವಕನು ಬುಧವಾರ ಸ್ನಾನ ಮಾಡಲೆಂದು ಕೆರೆಗೆ ತೆರಳಿದ್ದಾಗ ಘಟನೆ ನಡೆದಿದೆ ಎನ್ನಲಾಗುತ್ತಿದೆ.
ವಿಷಯ ತಿಳಿದು ಅಗ್ನಿ ಶಾಮಕ ಠಾಣೆ ಸಿಬ್ಬಂದಿ ಸತತ ಎರಡು ಗಂಟೆಗಳ ಕಾಲ ಶೋಧಕಾರ್ಯ ನಡೆಸಿ ಮೃತ ದೇಹವನ್ನು ಪತ್ತೆ ಮಾಡಿದ್ದಾರೆ.
ಶೋಧ ಕಾರ್ಯದಲ್ಲಿ ಅಗ್ನಿ ಶಾಮಕ ಠಾಣೆಯ ಸಿಬ್ಬಂದಿ ಡಿ.ವಿ. ಮಂಜುನಾಥ್, ವಿ. ನಾಗರಾಜ್, ಮಹೇಶ್ ಮಡಿವಾಳ, ಪ್ರಶಾಂತ್, ಡಿ.ಕೆ. ನಾಗರಾಜ್ ಪಾಲ್ಗೊಂಡಿದ್ದರು. ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಶೀನಾ ಬೋರಾ ಜೀವಂತವಾಗಿದ್ದಾಳೆ… ಸಿಬಿಐ ಗೆ ಇಂದ್ರಾಣಿ ಮುಖರ್ಜಿ ಪತ್ರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?