ಹೊರ ರಾಜ್ಯ ಕನ್ನಡಿಗರನ್ನು ಕರೆ ತನ್ನಿ: ಕಾಂಗ್ರೆಸ್‌


Team Udayavani, May 5, 2020, 6:45 AM IST

ಹೊರ ರಾಜ್ಯ ಕನ್ನಡಿಗರನ್ನು ಕರೆ ತನ್ನಿ: ಕಾಂಗ್ರೆಸ್‌

ಬೆಂಗಳೂರು: ಕೋವಿಡ್‌- 19ನಿಂದಾಗಿ ಬೇರೆ ರಾಜ್ಯಗಳಲ್ಲಿ ಸಿಲುಕಿಕೊಂಡಿರುವ ಕನ್ನಡಿಗರನ್ನು ವಾಪಸ್‌ ಕರೆತರಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯ ದರ್ಶಿಗಳಿಗೆ ಕಾಂಗ್ರೆಸ್‌ ಆಗ್ರಹಿಸಿದೆ.

ಸೋಮವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಕಾಂಗ್ರೆಸ್‌ ನಿಯೋಗ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

ಬೇರೆ ರಾಜ್ಯಗಳಲ್ಲಿ ಉದ್ಯೋಗ ಮಾಡುತ್ತಿರುವ ಅನೇಕ ಕನ್ನಡಿಗರು ಸಿಲುಕಿಕೊಂಡು ಪರದಾಡುತ್ತಿದ್ದಾರೆ. ಅವರಲ್ಲಿ ಹಲವರು ಕುಟುಂಬದಿಂದ ದೂರ ಉಳಿದಿದ್ದಾರೆ. ಅವರು ಈ ಸಮಯದಲ್ಲಿ ಭವಿಷ್ಯದ ಬಗ್ಗೆ ಯೋಚಿಸುವ ಮುನ್ನ ತಮ್ಮ ಊರಿಗೆ ಮರಳಲು ಇಚ್ಛಿಸುತ್ತಿದ್ದಾರೆ. ಅದೇ ರೀತಿ ಸಾವಿರಾರು ಬೇರೆ ರಾಜ್ಯಗಳ ಜನರು ಕರ್ನಾಟಕವನ್ನು ಕರ್ಮಭೂಮಿಯನ್ನಾಗಿ ಪರಿಗಣಿಸಿ ಈ ನಾಡನ್ನು ಎರಡನೇ ತವರನ್ನಾಗಿ ಪರಿಗಣಿಸಿದ್ದಾರೆ. ಆದರೆ ಅವರು ತಮ್ಮ ರಾಜ್ಯಗಳಲ್ಲಿ ಸಿಲುಕಿದ್ದಾರೆ. ಹೀಗಾಗಿ ಇಲ್ಲಿಗೆ ಬಂದು ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ನಿಯೋಗ ಸಿಎಸ್‌ ಅವರಿಗೆ ವಿವರಿಸಿತು.

ಹಣಕಾಸಿನ ಕೊರತೆ, ಭಾವ ನಾತ್ಮಕ ವಿಚಾರ, ವೈಯಕ್ತಿಕ ಕಾರಣ ಗಳಿಂದಾಗಿ ತಮ್ಮ ರಾಜ್ಯಗಳಿಗೆ ಮರಳಲು ಬಯಸುತ್ತಿರುವವರನ್ನು ಬೇರೆ ರಾಜ್ಯ ಸರಕಾರಗಳು ವಾಪಸ್‌ ಕರೆಸಿಕೊಳ್ಳುತ್ತಿವೆ. ಆದರೆ ಈ ವಿಚಾರದಲ್ಲಿ ಕರ್ನಾಟಕ ಮಾತ್ರ ಕನ್ನಡಿಗರು ಮಾಡುತ್ತಿರುವ ಮನವಿ ಯನ್ನು ಪರಿಗಣಿಸದೆ ವಿಭಿನ್ನವಾಗಿ ವರ್ತಿಸುತ್ತಿದೆ. ಬೇರೆ ರಾಜ್ಯಗಳಲ್ಲಿ ಸಿಲುಕಿರುವ ನಮ್ಮ ರಾಜ್ಯದ ಜನರನ್ನು ವಾಪಸ್‌ ಕರೆತರಲು ರೈಲು ವ್ಯವಸ್ಥೆ ಕಲ್ಪಿಸುವುದು ಸಹಿತ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ರೈಲ್ವೇ ಪ್ರಯಾಣದ ವೆಚ್ಚ ಭರಿಸಲು ಕಾಂಗ್ರೆಸ್‌ ಸಿದ್ಧವಿದೆ. ನಮ್ಮ ಜನರನ್ನು ಮತ್ತೆ ಮನೆಗೆ ವಾಪಸ್‌ ಕರೆತರಲು ರಾಜ್ಯ ಸರಕಾರ ಕೇಂದ್ರ ರೈಲ್ವೇ ಇಲಾಖೆಯೊಂದಿಗೆ ಮತುಕತೆ ನಡೆಸಿ ನಿರ್ಧಾರಕ್ಕೆ ಬರಬೇಕು. ಈ ವಿಚಾರ ದಲ್ಲಿ ರಾಜ್ಯದ ಹಿತಾಸಕ್ತಿ ಮತ್ತು ಕನ್ನಡಿಗರ ಘನತೆಯನ್ನು ಶೀಘ್ರ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.