ಉಪಚುನಾವಣಾ ಕಣದಲ್ಲಿ ಬಿಎಸ್ವೈ ಏಳು ದಿನ ಪ್ರಚಾರ
Team Udayavani, May 9, 2019, 3:05 AM IST
ಬೆಂಗಳೂರು: ವಿಧಾನಸಭೆಯಲ್ಲಿ ಸಂಖ್ಯಾಬಲ ವೃದ್ಧಿ ದೃಷ್ಟಿಯಿಂದ ಮಹತ್ವದ್ದೆನಿಸಿದ ಕುಂದಗೋಳ ಹಾಗೂ ಚಿಂಚೋಳಿ ವಿಧಾನಸಭೆ ಉಪಚುನಾವಣೆ ಗೆಲ್ಲಲು ಬಿಜೆಪಿ ರಣತಂತ್ರ ರೂಪಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಏಳು ದಿನಗಳ ಕಾಲ ಎರಡೂ ಕ್ಷೇತ್ರಗಳಲ್ಲಿ ಭರ್ಜರಿ ಪ್ರಚಾರ ನಡೆಸಲಿದ್ದಾರೆ.
ಯಡಿಯೂರಪ್ಪ ಅವರು ಬುಧವಾರ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳಿದ್ದಾರೆ. ಶುಕ್ರವಾರದಿಂದ ಮೇ 17ರವರೆಗೆ ಕುಂದಗೋಳ ಹಾಗೂ ಚಿಂಚೋಳಿ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲಿದ್ದಾರೆ. ಮೇ 10ರಿಂದ 12ರವರೆಗೆ ಮೂರು ದಿನಗಳ ಕಾಲ ಕುಂದಗೋಳದಲ್ಲಿ ಹಾಗೂ ಮೇ 13, 14ರಂದು ಚಿಂಚೋಳಿ ಕ್ಷೇತ್ರದಲ್ಲಿ ಪ್ರಚಾರ ಸಭೆ, ಸಮಾವೇಶಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಮೇ 16 ಹಾಗೂ 17ರಂದು ಮತ್ತೆ ಕುಂದಗೋಳ ಕ್ಷೇತ್ರದಲ್ಲಿ ಚುನಾವಣಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಿದ್ದಾರೆ.
ಎರಡೂ ಕ್ಷೇತ್ರಗಳಲ್ಲಿ ಸಮುದಾಯವಾರು ಸ್ಥಳೀಯ ಅಗತ್ಯಕ್ಕೆ ತಕ್ಕಂತೆ ಇತರ ಕ್ಷೇತ್ರಗಳ ಶಾಸಕರು, ಸಂಸದರನ್ನು ನಿಯೋಜಿಸಲಾಗಿದೆ. ಮೈತ್ರಿ ಸರ್ಕಾರವು ಸಚಿವರು, ಪ್ರಭಾವಿ ಶಾಸಕರನ್ನು ಉಸ್ತುವಾರಿಯಾಗಿ ನೇಮಿಸಿರುವುದರಿಂದ ಬಿಜೆಪಿಯಿಂದಲೂ ಚುನಾವಣೆಗಳನ್ನು ನಡೆಸಿದ ಅನುಭವಿ ನಾಯಕರು, ಮುಖಂಡರನ್ನೇ ನಿಯೋಜಿಸಲಾಗುತ್ತಿದೆ ಎಂದು ಮೂಲಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?