ರಾಜ್ಯಪಾಲರ ಭೇಟಿ ಅಂತ್ಯ: ಬಿಎಸ್ ವೈ ಇಂದು ಸಂಜೆ ಪ್ರಮಾಣ ವಚನ
Team Udayavani, Jul 26, 2019, 10:43 AM IST
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಲು ವೇದಿಕೆ ಸಜ್ಜಾಗಿದ್ದು, ರಾಜ್ಯಪಾಲರ ಅನುಮತಿ ಸಿಕ್ಕಿದೆ.
ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾಗಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಜಿಜೆಪಿ ರಾಜ್ಯಾಧ್ಯಕ್ಷ, ಇಂದು ಸಂಜೆ 6.15ರ ಒಳಗೆ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಸಲು ಅನುಮತಿ ನೀಡಬೇಕು ಎಂದು ಕೋರಿದ್ದೇನೆ. ರಾಜ್ಯಪಾಲರ ಅನುಮತಿ ಸಿಕ್ಕಿದೆ ಎಂದರು.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಅವರಿಗೆ ವ್ಯಯಕ್ತಿಕ ಪಾತ್ರ ಬರೆದು ಪ್ರಮಾಣ ವಚನ ಕಾರ್ಯಕ್ರಮಕ್ಕೆ ಅಹ್ವಾನ ನೀಡುತ್ತೇನೆ ಎಂದರು.