ಅಮೃತ ಕಾಲಕ್ಕೆ ನಾಲ್ಕು ಸ್ತಂಭಗಳು


Team Udayavani, Feb 2, 2023, 6:23 AM IST

ಅಮೃತ ಕಾಲಕ್ಕೆ ನಾಲ್ಕು ಸ್ತಂಭಗಳು

ಅಮೃತ ಕಾಲದ ಭಾರತ ಕಟ್ಟಲು ಶುಭ ಮುಹೂರ್ತವಿಟ್ಟಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಇದಕ್ಕಾಗಿ ಮಹಿಳೆಯರ ಆರ್ಥಿಕ ಸಶಕ್ತೀಕರಣ, ಸಾಂಪ್ರದಾಯಿಕ ಕರಕುಶಲಕರ್ಮಿಗಳ ಕೌಶಲ, ಪ್ರವಾಸೋದ್ಯಮ ಮತ್ತು ಹಸುರು ಪ್ರಗತಿ ಎಂಬ ನಾಲ್ಕು ಸ್ತಂಭಗಳನ್ನು ಗುರುತಿಸಿದ್ದಾರೆ.

ದೇಶದಲ್ಲಿನ ಅಸಂಘಟಿತ ಕರಕುಶಲ ಕರ್ಮಿಗಳಿಗೆ ಆರ್ಥಿಕ ಸಹಾಯ, ಆಧುನಿಕ ಕೌಶಲ ತರಬೇತಿ, ಹೊಸ ತಂತ್ರಜ್ಞಾನದ ನೆರವು, ಅತೀ ಸಣ್ಣ, ಸಣ್ಣ, ಮಧ್ಯಮ ಕೈಗಾರಿಕೆಗಳ ಜತೆ ಸೇರುವಿಕೆ, ಪೇಪರ್‌ರಹಿತ ಹಣ ಪಾವತಿ, ಜಾಗತಿಕ ಮಾರುಕಟ್ಟೆ ಅಥವಾ ವಿಶಾಲ ಮಾರುಕಟ್ಟೆ ಒದಗಿಸುವ ಚಿಂತನೆಯೊಂದಿಗೆ ಪ್ರಧಾನ ಮಂತ್ರಿ ವಿಶ್ವಕರ್ಮ ಕೌಶಲ ಸಮ್ಮಾನ (ಪಿಎಂ ವಿಕಾಸ್‌) ಯೋಜನೆಯನ್ನು ಬಜೆಟ್‌ನಲ್ಲಿ ಪ್ರಕಟಿಸಲಾಗಿದೆ.

ಶತಮಾನಗಳಿಂದ ಸಾಂಪ್ರದಾಯಿಕ ಕರಕುಶಲ ಕರ್ಮಿಗಳು ದೇಶಕ್ಕೆ ಖ್ಯಾತಿ ತಂದಿದ್ದು ಅವರ ಕಲೆ ಮತ್ತು ಕರ ಕುಶಲತೆ ಆತ್ಮ ನಿರ್ಭರ ಭಾರತದ ನೈಜ ಚೈತನ್ಯವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಥಮ ಬಾರಿಗೆ ಅವರಿಗೆ ನೆರವು ನೀಡುವ ಪ್ಯಾಕೇಜ್‌ ಅನ್ನು ಪ್ರಕಟಿಸುತ್ತಿದ್ದೇವೆ ಎಂದು ವಿತ್ತ ಸಚಿವರು ಹೇಳಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪಂಗಡ, ಇತರ ಹಿಂದುಳಿದ ವರ್ಗಗಳು, ಮಹಿಳೆಯರು ಮತ್ತು ಇತರ ದುರ್ಬಲ ವರ್ಗದ ಕೌಶಲವನ್ನು ಬಳಸಿಕೊಂಡು ಅವರಿಗೆ ಆರ್ಥಿಕ ಚೈತನ್ಯ ತುಂಬಿ ದೇಶದ ಜಿಡಿಪಿಗೆ ಅವರ ಕೊಡುಗೆಯು ಸಿಗುವಂತೆ ಮಾಡುವುದು ಈ ಯೋಜನೆಯ ಉದ್ದೇಶವಾಗಿದೆ.

ಕಮ್ಮಾರ, ವಿಶ್ವಕರ್ಮ, ಅಕ್ಕಸಾಲಿಗರು, ಬಡಗಿ ಮುಂತಾದ ಕೆಲಸ ಮಾಡುವವರು ವಿಶ್ವಕರ್ಮ ವಿಭಾಗದಲ್ಲಿ ಬರುತ್ತಾರೆ. ವಿತ್ತ ಸಚಿವರು ತಮ್ಮ ಯೋಜನೆಯ ಉದ್ದೇಶವನ್ನು ಬಜೆಟ್‌ನಲ್ಲಿ ಪ್ರಕಟಿಸಿದ್ದರೂ ಸಹ ಯೋಜನೆಯ ರೂಪುರೇಷೆ, ಅನು ದಾನ ಮುಂತಾದ ಅಂಶಗಳು ಇನ್ನಷ್ಟೆ ಹೊರಬೀಳಬೇಕಿದೆ.

ಮಹಿಳೆಯರ ಆರ್ಥಿಕ ಸಶಕ್ತೀಕರಣ: ಹೆಣ್ಣು ಕುಟುಂಬದ ಕಣ್ಣು ಎಂಬ ಸಾಮಾಜಿಕ ನೆಲೆಯಿಂದ ಆಕೆಯನ್ನು ದೇಶದ ಆರ್ಥಿಕತೆಯ ಬೆನ್ನುಲುಬನ್ನಾಗಿ ರೂಪಿಸುವ ಪ್ರಯತ್ನದಲ್ಲಿ ಕೇಂದ್ರ ಸರಕಾರವಿದೆ. ಗ್ರಾಮೀಣ ಮಹಿಳೆಯರ 81 ಲಕ್ಷ ಸ್ವಸಹಾಯ ಸಂಘಗಳಿದ್ದು ಇದರ ಯಶಸ್ಸಿನಿಂದ ಪ್ರಭಾವಿತವಾಗಿರುವ ಸರಕಾರ ಅವರನ್ನು ಮುಂದಿನ ಹಂತದ ಆರ್ಥಿಕ ಚಟುವಟಿಕೆಗೆ ಸೆಳೆಯುವ ಪ್ರಯತ್ನ ನಡೆಸಿದೆ. ಸಣ್ಣ ಸ್ವಸಹಾಯ ಗುಂಪುಗಳಿಂದ ಬೃಹತ್‌ ಉತ್ಪಾದನ ಉದ್ದಿಮೆ ಅಥವಾ ಸಾವಿರಾರು ಸದಸ್ಯರಿರುವ ಗುಂಪನ್ನು ರಚಿಸುವುದಾಗಿ ಸರಕಾರ ಹೇಳಿದೆ. ಈ ಗುಂಪಿಗೆ ಕಚ್ಚಾ ವಸ್ತುಗಳ ಪೂರೈಕೆ, ಉತ್ತಮ ವಿನ್ಯಾಸ, ಗುಣಮಟ್ಟ, ಬ್ರ್ಯಾಂಡಿಂಗ್‌ ಮತ್ತು ಮಾರುಕಟ್ಟೆಯ ನೆರವನ್ನು ಸರಕಾರ ನೀಡಲಿದೆ. ಮಹಿಳೆಯರ ಉತ್ಪಾದನೆಗೆ ದೊಡ್ಡ ಮಾರುಕಟ್ಟೆ ಒದಗಿಸುವುದು ಸರಕಾರದ ಉದ್ದೇಶವಾಗಿದೆ.

ಪ್ರವಾಸೋದ್ಯಮ: ಪ್ರವಾಸೋದ್ಯಮದಲ್ಲಿರುವ ಸಾಧ್ಯತೆ ಯನ್ನು ಗರಿಷ್ಠ ಪ್ರಮಾಣದಲ್ಲಿ ಬಳಸಿಕೊಳ್ಳಬೇಕು ಎಂಬ ಆಶಯವನ್ನು ಸರಕಾರ ವ್ಯಕ್ತಪಡಿಸಿದೆ. ಉದ್ಯೋಗ ಮತ್ತು ಉದ್ದಿಮಶೀಲತೆಗೆ ಅವಕಾಶವಿದ್ದು, ಯುವ ಜನಾಂಗ ಈ ರಂಗವನ್ನು ಬಳಸಿಕೊಳ್ಳಬೇಕು ಎಂಬ ಉದ್ದೇಶ ಹೊಂದಿದೆ. ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಚಟುವಟಿಕೆಯನ್ನು ಆದ್ಯತೆಯ ಮೇಲೆ ಕೈಗೊಳ್ಳಲಾಗುವುದು ಎಂದು ಸರಕಾರ ಹೇಳಿದೆ. 50 ಪ್ರವಾಸಿ ತಾಣಗಳನ್ನು ದೇಶ ವಿದೇಶದ ಪ್ರವಾಸಿಗರನ್ನು ಸೆಳೆಯುವಂತೆ ಅಭಿವೃದ್ಧಿ ಪಡಿಸುವ ಉದ್ದೇಶವಿರುವುದಾಗಿ ಸರಕಾರ ಹೇಳಿದೆ.

ಹಸುರು ಪ್ರಗತಿ
ಹಸುರು ಇಂಧನ, ಹಸುರು ಶಕ್ತಿ, ಹಸುರು ಕೃಷಿ, ಹಸುರು ಸಾರಿಗೆ, ಹಸುರು ಕಟ್ಟಡ ಮತ್ತು ಹಸುರು ಉಪಕರಣ ಮತ್ತು ಎಲ್ಲ ವಲಯದಲ್ಲಿಯೂ ಹಸುರು ಬಳಕೆಗೆ ಒತ್ತು ನೀಡುವ ನಿಯಮಗಳ ರೂಪಣೆ ಮಾಡುವ‌ ಆಶಯವನ್ನು ಸರಕಾರ ಸ್ಪಷ್ಟವಾಗಿ ತಿಳಿಸಿದೆ. ಇಂಗಾಲಾಮ್ಲದ ಹೊರಸೂಸುವಿಕೆ ಯನ್ನು ತಡೆಯುವುದು ಹಸುರೀಕರಣದ ಉದ್ದೇಶ ಎಂದು ಸರಕಾರ ಹೇಳಿದೆ. ಇದರ ಜತೆಗೆ ಹಸುರು ವಲಯದಲ್ಲಿ ಭಾರತ ಉತ್ತಮ ಸಾಧನೆ ಮಾಡುತ್ತಿದ್ದು ಸ್ವಾವಲಂಬಿ ಯಾಗುವ ಹೆಚ್ಚಿನ ಅವಕಾಶವಿದೆ. ಇದನ್ನು ಬಳಸಿಕೊಂಡು ವಿದೇಶಗಳ ಮೇಲಿನ ಅವಲಂಬನೆ ಕಡಿಮೆ ಮಾಡಿ ವಿದೇಶಿ ವಿನಿಮಯ ಉಳಿಸುವ‌ ಆಶಯವನ್ನು ಸರಕಾರ ಹೊಂದಿದೆ.

ಟಾಪ್ ನ್ಯೂಸ್

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.