ಬುಕ್ಕಾಪಟ್ಟಣ ಗ್ರಾಮದಲ್ಲಿ ಹೊರಬೀಡು ಕಾರ್ಯಕ್ರಮ : ಇಲ್ಲಿ ಶೂನ್ಯ ಮಾಸದ ದಿನ ಊರೇ ಖಾಲಿ

ಪ್ರತಿವರ್ಷ ಶೂನ್ಯ ಮಾಸದ ದಿನ ಊರೇ ಖಾಲಿ.. ಅಂಗನವಾಡಿ ಮತ್ತು ಶಾಲೆಗೆ ಸ್ವಯಂಪ್ರೇರಿತ ರಜೆ..

Team Udayavani, Dec 26, 2021, 7:13 PM IST

ಬುಕ್ಕಾಪಟ್ಟಣ ಗ್ರಾಮದಲ್ಲಿ ಹೊರಬೀಡು ಕಾರ್ಯಕ್ರಮ : ಶೂನ್ಯ ಮಾಸದ ದಿನ ಊರೇ ಖಾಲಿ

ಕೊರಟಗೆರೆ : ಹೊರಬೀಡು ಕಾರ್ಯಕ್ರಮ ಆಯೋಜನೆಯ ಬಗ್ಗೆ ಹದಿನೈದು ದಿನಗಳ ಮುಂಚೆಯೇ ಗ್ರಾಮದಲ್ಲಿನ ಮುಖಂಡರ ಸಭೆ.. ಹಿರಿಯ ಮುಖಂಡರ ಸಭೆಯ ತಿರ್ಮಾನದಂತೆ ವಾರದ ಮುಂಚೆಯೇ ಅಕ್ಕಪಕ್ಕದ ಗ್ರಾಮಗಳಲ್ಲಿ ಟಾಂಟಾಂ ಸುದ್ದಿ.. ಪ್ರತಿ ಮೂರು ವರ್ಷಕ್ಕೊಮ್ಮೆ ಶೂನ್ಯ ಮಾಸದಲ್ಲಿ ಸ್ಥಳೀಯ ನಾಗರೀಕರು ಆಚರಿಸುವ ಪದ್ದತಿಯು ಗುರುವಾರ ಬುಕ್ಕಾಪಟ್ಟಣ ಗ್ರಾಮದಲ್ಲಿ ನಡೆದಿದೆ.

ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ಬುಕ್ಕಾಪಟ್ಟಣ ಗ್ರಾಪಂ ವ್ಯಾಪ್ತಿಯ ಬುಕ್ಕಾಪಟ್ಟಣ, ಗೊಲ್ಲರಹಟ್ಟಿ, ಮಾರುತಿನಗರ, ಶ್ರೀನಿವಾಸಪುರ, ಹೊಸಪಾಳ್ಯ ಗ್ರಾಮದ 550ಕ್ಕೂ ಅಧಿಕ ಕುಟುಂಬದ 3ಸಾವಿರಕ್ಕೂ ಅಧಿಕ ಜನ ತಮ್ಮ ಮನೆಗಳಿಗೆ ಬೀಗ ಜಡಿದು ಗ್ರಾಮದ ಎರಡು ಕಡೆಯ ರಸ್ತೆಗಳಿಗೆ ಮುಳ್ಳಿನ ಬೇಲಿಯನ್ನು ಹಾಕಿ ಊರನ್ನು ಬಿಡುತ್ತಾರೆ.

ಬುಕ್ಕಪಟ್ಟಣ ಗ್ರಾಪಂ ವ್ಯಾಪ್ತಿಯ ಬುಕ್ಕಾಪಟ್ಟಣ, ಗೊಲ್ಲರಹಟ್ಟಿ, ಮಾರುತಿನಗರ, ಶ್ರೀನಿವಾಸಪುರ ಮತ್ತು ಹೊಸಪಾಳ್ಯ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಎರಡು ಕಡೆಯ ದಾರಿಗಳನ್ನು ಮುಳ್ಳಿನಿಂದ ಮುಚ್ಚುತ್ತಾರೆ. ಎರಡು ಕಡೆಗಳಲ್ಲಿ ಗ್ರಾಮದ ಮುಖಂಡರು ಗ್ರಾಮದೊಳಗೆ ಯಾರು ಪ್ರವೇಶ ಮಾಡದಂತೆ ಕಾವಲು ಕಾಯುತ್ತಾರೆ. ಗ್ರಾಮ ದೇವತೆ ಮಾರಮ್ಮದೇವಿ ಊರನ್ನು ಸುತ್ತುವುದಲ್ಲದೇ ಕಾವಲು ಕಾಯುತ್ತಾಳೆ ಎಂಬ ನಂಬಿಕೆ ಇದೆ ಎನ್ನುತ್ತಾರೆ ಸ್ಥಳೀಯ ಗ್ರಾಮಸ್ತರು.

ಬುಕ್ಕಾಪಟ್ಟಣ ಗ್ರಾಮದ ಹೊರಗಡೆ ಗುಡಿಸಲು ಹಾಕಿ ಮಾರಮ್ಮದೇವಿಯ ಪ್ರತಿಷ್ಟಾಪನೆ ಮಾಡಿ ಪ್ರತಿಯೊಬ್ಬರು ಪೂಜೆ ಸಲ್ಲಿಸುತ್ತಾರೆ. ನಂತರ ತಮ್ಮ ಜಮೀನುಗಳಲ್ಲಿ ಗುಡಾರ ಹಾಕಿಕೊಂಡು ಮಾಂಸಹಾರಿ ಪ್ರೀಯರು ಮಾಂಸದೂಟ, ಸಸ್ಯಹಾರಿ ಪ್ರೀಯರು ಅನ್ನಪಾಯಸ ಮಾಡಿಕೊಂಡು ತಮ್ಮ ಸಂಬಂಧಿಗಳ ಜೊತೆ ಜಮೀನಿನಲ್ಲೇ ಸೇರಿ ಊಟ ಮಾಡಿ ಸಂಭ್ರಮಿಸುವ ಸಂಪ್ರದಾಯ ಬುಕ್ಕಾಪಟ್ಟಣ ಗ್ರಾಮದಲ್ಲಿ ಇಂದಿಗೂ ಜೀವಂತವಾಗಿದೆ.

ಸೂರ್ಯ ಮುಳುಗಿದ ನಂತರ ಗೋಧೂಳಿ ಸಮಯದಲ್ಲಿ ಊರಿನ ಬಾಗೀಲಿನಲ್ಲಿ ಗ್ರಾಮ ದೇವತೆ ಮಾರಮ್ಮದೇವಿಗೆ ಪೂಜೆ ಸಲ್ಲಿಸಿ ಗ್ರಾಮಸ್ಥರ ಸಂಪ್ರದಾಯದಂತೆ ರಣಬಲೆ, ಕೋಬಲೆ ಎಂದು ಕೂಗುತ್ತಾ ಸರಗು ಹಾಕುತ್ತಾರೆ. ಅದಾದ ನಂತರವಷ್ಟೆ ಊರಿನೊಳಗೆ ಪ್ರವೇಶ. ಪ್ರತಿ ಮನೆಯ ಬಾಗಿಲಿಗೆ ಪೂಜೆಯನ್ನು ಸಲ್ಲಿಸಿದ ನಂತರ ಮನೆಯ ಸುತ್ತಮುತ್ತಲು ಮೊಸರನ್ನು ಹಾಕಿ ಮನೆಯನ್ನು ಪ್ರವೇಶ ಮಾಡುತ್ತಾರೆ. ಪ್ರತಿ ಮೂರು ವರ್ಷಕ್ಕೊಮ್ಮೆ ಶೂನ್ಯ ಮಾಸದಲ್ಲಿ ಹೊರಬೀಡು ಕಾರ್ಯಕ್ರಮ ನಡೆಯಲಿದೆ.

ಇದನ್ನೂ ಓದಿ : ಕಳಪೆ ಟಾರ್ಪಲಿನ್ ನೀಡುವ ಸಂಸ್ಥೆಗಳು ಕಪ್ಪುಪಟ್ಟಿಗೆ:ಬಿಸಿಪಿ ಖಡಕ್ ವಾರ್ನಿಂಗ್

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.