ಪ್ರೊ ಕಬಡ್ಡಿ: ಬುಲ್ಸ್‌-ಟೈಟಾನ್ಸ್‌, ಮುಂಬಾ-ಯೋಧ ಟೈ ರೋಮಾಂಚನ


Team Udayavani, Jan 1, 2022, 10:19 PM IST

ಪ್ರೊ ಕಬಡ್ಡಿ: ಬುಲ್ಸ್‌-ಟೈಟಾನ್ಸ್‌, ಮುಂಬಾ-ಯೋಧ ಟೈ ರೋಮಾಂಚನ

ಬೆಂಗಳೂರು: ಪ್ರೊ ಕಬಡ್ಡಿ ಪಂದ್ಯಾವಳಿಯ ಶನಿವಾರದ ಸ್ಪರ್ಧೆಗಳು ಕ್ರೀಡಾಪ್ರಿಯರನ್ನು ತುದಿಗಾಲಲ್ಲಿ ನಿಲ್ಲಿಸುವಂತೆ ಮಾಡಿದವು. ಮೊದಲು ಯು ಮುಂಬಾ-ಯುಪಿ ಯೋಧ, ಬಳಿಕ ಬೆಂಗಳೂರು ಬುಲ್ಸ್‌-ತೆಲುಗು ಟೈಟಾನ್ಸ್‌ ಪಂದ್ಯಗಳು ಏಕರೀತಿಯ ಹೋರಾಟ ಕಂಡವು. ಎರಡೂ ಪಂದ್ಯಗಳು ಟೈ ಆದವು!

ಮುಂಬಾ-ಯೋಧ ಮುಖಾಮುಖಿ 28-28ರಿಂದ, ಬುಲ್ಸ್‌-ಟೈಟಾನ್ಸ್‌ ಪಂದ್ಯ 34-34ರಿಂದ ಸಮಬಲದಲ್ಲಿ ಅಂತ್ಯ ಕಂಡಿತು. ಹ್ಯಾಟ್ರಿಕ್‌ ಗೆಲುವಿನೊಂದಿಗೆ ಕಣಕ್ಕಿಳಿದಿದ್ದ ಬುಲ್ಸ್‌ ಪಾಲಿಗೆ ಇದು ಮೊದಲ ಟೈ ಫ‌ಲಿತಾಂಶ. ಇನ್ನೊಂದೆಡೆ ತೆಲುಗು ಟೈಟಾನ್ಸ್‌ 2ನೇ ಟೈ ಸಾಧಿಸಿತು. ಅದಿನ್ನೂ ಗೆಲುವಿನ ಮುಖ ಕಂಡಿಲ್ಲ.

ಅಂತಿಮ ರೈಡ್‌ನ‌ಲ್ಲಿ ಟೈಟಾನ್ಸ್‌ ತಂಡದ ನಾಯಕ ರೋಹಿತ್‌ ಕುಮಾರ್‌ ಅವರನ್ನು ಬುಲ್ಸ್‌ ಸಾರಥಿ ಪವನ್‌ ಸೆಹ್ರಾವತ್‌ ಟ್ಯಾಕಲ್‌ ಮಾಡುವುದರೊಂದಿಗೆ ಪಂದ್ಯವನ್ನು ಸಮಬಲಕ್ಕೆ ತಂದರು. ಬುಲ್ಸ್‌ ಪರ ರೈಡರ್‌ಗಳಾದ ಚಂದ್ರನ್‌ ರಂಜಿತ್‌ (9 ಅಂಕ), ಪವನ್‌ (8 ಅಂಕ) ಅಮೋಘ ಆಟವಾಡಿದರು. ಟೈಟಾನ್ಸ್‌ ರೈಡರ್‌ ಅಂಕಿತ್‌ ಬೇನಿವಾಲ್‌ ಸರ್ವಾಧಿಕ 10 ಅಂಕ ಗಳಿಸಿದರು.

ಇದನ್ನೂ ಓದಿ:ಕೋವಿಡ್ ಹಿನ್ನೆಲೆ : ಸಾಮೂಹಿಕ ಕೇಶ ಮುಂಡನೆ ಮಾಡಿ ಹರಕೆ ತೀರಿಸಿದ ಗ್ರಾಮಸ್ಥರು

ಮುಂಬಾ-ಯೋಧ ಟೈ
ಯು ಮುಂಬಾ-ಯುಪಿ ಯೋಧ ನಡುವಿನ ಮೊದಲ ಮುಖಾಮುಖೀ ಕೂಡ ರೋಚಕವಾಗಿ ಸಾಗಿತು. ಎರಡೂ ತಂಡಗಳಲ್ಲಿ ಜಿದ್ದಾಜಿದ್ದಿ ಹೋರಾಟ ಕಂಡುಬಂತು. ವಿರಾಮದ ವೇಳೆ ಮುಂಬಾ 16-13 ಅಂತರದ ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾಯಿತು.

ವಿರಾಮದ ಬಳಿಕ ಎರಡೂ ತಂಡಗಳ ಆಟಗಾರರು ಜಿದ್ದಿಗೆ ಬಿದ್ದವರಂತೆ ಆಡಿದರು. ಮುಂಬಾ ತುಸು ಮೇಲುಗೈ ಸಾಧಿಸಿತಾದರೂ ಯೋಧ ಸೋಲು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಯಿತು. ಯುಪಿ ರೈಡರ್‌ ಪದೀìಪ್‌ ನರ್ವಾಲ್‌ (4 ಅಂಕ) ಲಯದಲ್ಲಿ ಇಲ್ಲದಿದ್ದುದು ತಂಡಕ್ಕೆ ಹಿನ್ನಡೆಯಾಗಿ ಪರಿಣಮಿಸಿತು. ಮತ್ತೋರ್ವ ರೈಡರ್‌ ಸುರೇಂದರ್‌ ಗಿಲ್‌ (8 ಅಂಕ), ಡಿಫೆಂಡರ್‌ ಸುಮಿತ್‌ (6 ಅಂಕ) ಉತ್ತಮ ಪ್ರದರ್ಶನವಿತ್ತರು.

ಮುಂಬಾ ಪರ ಅಜಿತ್‌ ರೈಡಿಂಗ್‌ನಲ್ಲಿ ಮಿಂಚಿ 9 ಅಂಕ ತಂದಿತ್ತರು. ಅಭಿಷೇಕ್‌ ಸಿಂಗ್‌ ಮತ್ತು ರಿಂಕು ತಲಾ 4 ಅಂಕ ಗಳಿಸಿದರು.

 

ಟಾಪ್ ನ್ಯೂಸ್

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ

IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.