ಬದುಕಲು ಹೊಸ ಮಾರ್ಗ ಕಂಡುಕೊಂಡ ಬಸ್ ನೌಕರರು
Team Udayavani, Jun 27, 2020, 6:45 AM IST
ಕಾಸರಗೋಡು: ಕೋವಿಡ್ನಿಂದಾಗಿ ಬಸ್ಗಳಲ್ಲಿ ಪ್ರಯಾಣಿಕರು ಇಲ್ಲದಿರು ವುದರಿಂದ ಆದಾಯವಿಲ್ಲದೆ ಸಂಚಾರ ಮೊಟಕುಗೊಂಡ ಬಸ್ನ ಕಾರ್ಮಿಕರು ಉಪ ಜೀವನಕ್ಕಾಗಿ ಹೊಸ ಮಾರ್ಗವನ್ನು ಅನುಸರಿಸತೊಡಗಿದ್ದಾರೆ.
ಕಾಸರಗೋಡು-ಕಣ್ಣೂರು ರೂಟ್ನಲ್ಲಿ ಸಂಚರಿಸುವ ಸೂಪರ್ ಫಾಸ್ಟ್ ಬಸ್ನ ಸಿಬಂದಿ ಕಣ್ಣೂರಿನಿಂದ ಟಿ ಶರ್ಟ್ ಸಹಿತ ಬಟ್ಟೆ ಬರೆಗಳನ್ನು ಕಾಸರಗೋಡಿಗೆ ತಂದು ಬಸ್ನಲ್ಲೇ ಮಾರಾಟ ಮಾಡುತ್ತಿದ್ದಾರೆ.
‘ಟಿಕೆಟ್ನಿಂದ ಲಭಿಸುವ ಆದಾಯ ಡೀಸೆಲ್ಗೂ ಸಾಕಾಗುತ್ತಿಲ್ಲವೆಂದು ಬಸ್ ಕಾರ್ಮಿಕರು ಹೇಳುತ್ತಿದ್ದಾರೆ.
ಕೆಲವೊಮ್ಮೆ ಆಹಾರಕ್ಕೂ, ನಿತ್ಯ ಖರ್ಚಿಗೂ ಹಣ ಲಭಿಸುತ್ತಿಲ್ಲ. ಆದರಿಂದ ಬಟ್ಟೆ ಬರೆಗಳನ್ನು ಮಾರಾಟ ನಡೆಸಿ ಖರ್ಚಿಗೆ ಹಣ ಸಂಗ್ರಹಿಸಲು ಪ್ರಯತ್ನಿಸುತ್ತಿರುವುದಾಗಿ ಅವರು ತಿಳಿಸಿ ದ್ದಾರೆ. ಕಣ್ಣೂರಿನಿಂದ ಬರುವ ಖಾಸಗಿ ಬಸ್ಗಳು ಕಾಸರಗೋಡಿಗೆ ತಲುಪಿದ ಬಳಿಕ ಬಟ್ಟೆ ಬರೆಗಳನ್ನು ಮಾರಾಟ ಮಾಡುತಿದ್ದಾರೆ.
ಬಸ್ಗಳಲ್ಲಿ ಪ್ರಯಾಣಿಸಿದರೆ ಕೋವಿಡ್ 19 ಬಾಧಿಸುವುದೋ ಎಂಬ ಭಯದಿಂದ ಪ್ರಯಾಣಿಕರು ಬಸ್ ಸಂಚಾರವನ್ನು ಹೊರತುಪಡಿಸಿದ್ದು, ಇದು ಆದಾಯವನ್ನು ಇಲ್ಲದಾಗಿಸಿದೆ ಎಂದು ಬಸ್ ಸಿಬಂದಿ ಹೇಳುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ
Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು
Kasaragod ಎನ್ಡಿಎ ಅಭ್ಯರ್ಥಿ ಅಶ್ವಿನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು
ಸಿಡಿದ ಗ್ಯಾಸ್ ಸಿಲಿಂಡರ್; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ
Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ
MUST WATCH
ಹೊಸ ಸೇರ್ಪಡೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ