ಬೈಕಿಗೆ ಬಸ್ಸು ಢಿಕ್ಕಿ : ಮೂವರ ದುರ್ಮರಣ
Team Udayavani, May 12, 2019, 1:24 PM IST
ಮಂಡ್ಯ: ಇಲ್ಲಿನ ಕೆ.ಆರ್.ಪೇಟೆಯ ಸಾದಗೋನಹಳ್ಳಿಯಲ್ಲಿ ಸರಕಾರಿ ಬಸ್ಸು ಮತ್ತು ಬೈಕಿನ ನಡುವೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಬೈಕಿನಲ್ಲಿದ್ದ ಮೂವರು ಮೃತಪಟ್ಟಿರುವ ಕುರಿತಾಗಿ ಮಾಹಿತಿ ಲಭ್ಯವಾಗಿದೆ.
ಬೈಕಿನಲ್ಲಿದ್ದವರು ಹೇಮಗಿರಿಯಲ್ಲಿರುವ ದೇವಸ್ಥಾನವೊಂದಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮೃತರನ್ನು ಜಯಮ್ಮ, ಕೃಷ್ಣ ಮತ್ತು ಗೌರಿ ಎಂದು ಗುರುತಿಸಲಾಗಿದೆ. ಕೃಷ್ಣ ಅವರು ತಮ್ಮ ತಾಯಿ ಮತ್ತು ಪತ್ನಿಯನ್ನು ಬೈಕಿನಲ್ಲಿ ಕುಳ್ಳಿರಿಸಿಕೊಂಡು ತೆರಳುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ.
ಘಟನೆಗೆ ಸಂಬಂಧಿಸಿದಂತೆ ಕೆ.ಆರ್.ಪೇಟೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.