ಐಷಾರಾಮಿ ಜೀವನಕ್ಕಾಗಿ ಉದ್ಯಮಿ ಅಪಹರಣ

ನಕಲಿ ಪೊಲೀಸರ ಬಂಧನ ; 10 ಲಕ್ಷ ರೂ.ಹಣಕ್ಕೆ ಬೇಡಿಕೆಯಿಟ್ಟಿದ್ದ ಆರೋಪಿಗಳು

Team Udayavani, Aug 11, 2021, 2:59 PM IST

ಐಷಾರಾಮಿ ಜೀವನಕ್ಕಾಗಿ ಉದ್ಯಮಿ ಅಪಹರಣ

ಬೆಂಗಳೂರು: ದೆಹಲಿಯಿಂದ ಬಂದಿದ್ದ ಚಿನ್ನದ ವ್ಯಾಪಾರಿ ಮತ್ತು ಲೆಕ್ಕಪರಿಶೋಧಕ(ಚಾರ್ಟೆಡೆಡ್‌ ಅಕೌಂಡೆಂಟ್‌)ನನ್ನು ಐಷಾರಾಮಿ
ಜೀವನ ನಡೆಸಲು ಅಪಹರಣ ಮಾಡಿದ್ದ ಮೂವರು ನಕಲಿ ಪೊಲೀಸರನ್ನು ಹಲಸೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣದ ಕಿಂಗ್‌ಪಿನ್‌ ಅಸ್ಗ ರ್‌(32), ಆತನ ಸಹಚರರಾದ ನಾಸೀರ್‌ ಶರೀಫ್(35) ಮತ್ತು ಸಂತೋಷ್‌(28) ಬಂಧಿತರು. ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು, ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

ಆರೋಪಿಗಳು ದೆಹಲಿಯಲ್ಲಿ ಬುಲೀಯನ್‌ (ಚಿನ್ನ ಮತ್ತು ಬೆಳ್ಳಿ ವ್ಯಾಪಾರಿ) ವ್ಯಾಪಾರಿಯಾಗಿರುವ ಅರವಿಂದ್‌ ಕುಮಾರ್‌ ಮೆಹ್ತಾ ಮತ್ತು ಆತನ ಸ್ನೇಹಿತ ಲೆಕ್ಕಪರಿಶೋಧಕ(ಚಾರ್ಟೆಡೆಡ್‌ ಅಕೌಂಡೆಂಟ್‌)ನನ್ನು ದಿವಾಕರ್‌ ರೆಡ್ಡಿಯನ್ನು ಆ.6 ರಂದು ರಾತ್ರಿ 10.30ರ ಸುಮಾರಿಗೆ ಡೆಕೆ
ನ್ಸನ್‌ ರಸ್ತೆಯಲ್ಲಿರುವ ರಾಯಲ್‌ ಆರ್ಕಿಡ್‌ ಹೋಟೆಲ್‌ನಿಂದ ಅಪಹರಿಸಿದ್ದರು ಎಂದು ಪೊಲೀಸರು ಹೇಳಿದರು.

ಪೊಲೀಸರ ಸೋಗಿನಲ್ಲಿ ಅಪಹರಣ: ಅಪಹರಣಕ್ಕೊಳಗಾದವ ಪೈಕಿ ಅರವಿಂದ್‌ ಕುಮಾರ್‌ ಮೆಹ್ತಾ ವಿರುದ್ಧ ದೆಹಲಿಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ. ಈತನಿಂದ ವಂಚನೆಗೊಳದ ವ್ಯಕ್ತಿಯೊಬ್ಬ ಅಸ್ಗರ್‌ಗೆ ಕರೆ ಮಾಡಿ ಅರವಿಂದ್‌ ಕುಮಾರ್‌ ಮೆಹ್ತಾ ಬಗ್ಗೆ ಫೋಟೋ ಸಮೇತ ಮಾಹಿತಿ ನೀಡಿದ್ದ. ಅಲ್ಲದೆ, ಆತ ಉಳಿದುಕೊಂಡಿರುವ ಹೋಟೆಲ್‌ ಬಗ್ಗೆಯೂ ಮಾಹಿತಿ ನೀಡಿದ್ದ.

ಇದನ್ನೂ ಓದಿ:3 ದಿನ ಮುಳುಗಿದ್ದ ನಾನಕರು ಎದ್ದು ಬಂದ್ರು !

ಈ ಹಿನ್ನೆಲೆಯಲ್ಲಿ ಆರೋಪಿ ತನ್ನ ಸಹಚರರ ಜತೆ ಸೇರಿಕೊಂಡು ಆ.6ರಂದು ರಾತ್ರಿ ಊಟ ಮುಗಿಸಿಹೊರಗಡೆಬಂದಿದ್ದ ಇಬ್ಬರನ್ನು ಪೊಲೀ ಸರ ಸೋಗಿನಲ್ಲಿ ಪರಿಚಯಿಸಿಕೊಂಡ ಆರೋಪಿಗಳು, ಮೆಹ್ತಾನನ್ನು ಪಕ್ಕಕ್ಕೆ ಕರೆದುಕೊಂಡು ಹೋಗಿ, ದೆಹಲಿಯಲ್ಲಿ ತನ್ನ ವಿರುದ್ಧ ಇರುವ ವಂಚನೆ ಪ್ರಕರಣದ ಬಗ್ಗೆ ಅಲ್ಲಿನ ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಪತ್ರಿಕೆಗಳಲ್ಲಿಯೂ ವರದಿಯಾಗಿದೆ. ಜತೆಗೆ ಇಲ್ಲಿಗೆ ಯಾರೊಂದಿಗೆ ವ್ಯವಹಾರ ನಡೆಸಲು ಬಂದಿರುವ ಬಗ್ಗೆಯೂ ತಿಳಿದಿದೆ. ಕೂಡಲೇ ನಮ್ಮೊಂದಿಗೆ ಬಂದು ತನಿಖೆಗೆ ಸಹಕರ ನೀಡಬೇಕು ಎಂದು ಕಾರಿನೊಳಗೆ ಕೂರಿಸಿಕೊಂಡಿದ್ದಾರೆ. ಮಾರ್ಗ ಮಧ್ಯೆ ಹತ್ತು ಲಕ್ಷ ರೂ.ಕೊಟ್ಟರೆ ಬಿಟ್ಟು ಬಿಡುವುದಾಗಿಯೂ ಹೇಳಿದ್ದಾರೆ. ಅದಕ್ಕೆ ಒಪ್ಪದಿದ್ದಾಗ ಆರೋಪಿಗಳು, ಇಬ್ಬರನ್ನು ಕೋರಮಂಗಲದಲ್ಲಿರುವ ಹೋಟೆಲ್‌ವೊಂದರಲ್ಲಿ ಅಕ್ರಮ ಗೃಹಬಂಧನದಲ್ಲಿಟ್ಟಿದ್ದರು ಎಂದು ಪೊಲೀಸರು ಹೇಳಿದರು.

ಅಪಹರಣಕ್ಕೊಳಗಾದವರ ಸ್ನೇಹಿತ ಪರಮೇಶ್ವರನ್‌ ಎಂಬವರು ರಾಯಲ್‌ ಆರ್ಕಿಡ್‌ ಹೋಟೆಲ್‌ಗೆ ಬಂದಾಗ ಇಬ್ಬರು ಕಾಣೆಯಾಗಿದ್ದರು. ಈ ಬಗ್ಗೆ ಹೋಟೆಲ್‌ ಸಿಬ್ಬಂದಿ ಬಳಿ ವಿಚಾರಿಸಿ ಬಳಿಕ ಸಿಸಿ ಕ್ಯಾಮೆರಾ ದೃಶ್ಯಗಳನ್ನು ಗಮನಿಸಿದ ಹಲಸೂರು ಠಾಣೆಗೆ ದೂರು ನೀಡಿದ್ದರು. ಬಳಿಕ ತಾಂತ್ರಿಕ ತನಿಖೆ ನಡೆಸಿದಾಗ ಆರೋಪಿಗಳು ಕೋರಮಂಗಲದ ಹೋಟೆಲ್‌ನಲ್ಲಿರುವ ಮಾಹಿತಿ ಸಿಕ್ಕಿತ್ತು.

ಈ ಹಿನ್ನೆಲೆಯಲ್ಲಿ ಕ್ಷೀಪ್ರ ಕಾರ್ಯಾಚರಣೆ ನಡೆಸಿದ ಹಲಸೂರು ಠಾಣೆ ಪೊಲೀಸರು ಹೋಟೆಲ್‌ ಮೇಲೆ ದಾಳಿ ನಡೆಸಿ ರವಿಂದ್‌ ಕುಮಾರ್‌ ಮೆಹ್ತಾ ಮತ್ತು ಆತನ ಸ್ನೇಹಿತ ದಿವಾಕರ್‌ ರೆಡ್ಡಿಯನ್ನು ಸುರಕ್ಷಿತವಾಗಿ ರಕ್ಷಿಸಲಾಗಿದ್ದು, ಪರಾರಿಯಾಗಲು ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಇತರೆ ಇಬ್ಬರು ನಾಪತ್ತೆಯಾಗಿದ್ದಾರೆ. ಆರೋಪಿಗಳು ಬರಬೇಕಿದ್ದ ಹಣದಲ್ಲಿ ಐಷಾರಾಮಿ ಜೀವನ ನಡೆಸಲು ನಿರ್ಧರಿಸಿದ್ದರು ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.