ಲೇಡಿಗೋಶನ್‌ ಎದುರಿನ ಶೆಡ್‌ಗಳಲ್ಲಿ ಬೀದಿಬದಿಯವರಿಂದ ವ್ಯಾಪಾರ

ಇನ್ನೂ ತಾತ್ಕಾಲಿಕ ಮಳಿಗೆಗೆ ಬಾರದ ಸೆಂಟ್ರಲ್‌ ಮಾರ್ಕೆಟ್‌ ವ್ಯಾಪಾರಸ್ಥರು

Team Udayavani, Jun 21, 2020, 5:55 AM IST

ಲೇಡಿಗೋಶನ್‌ ಎದುರಿನ ಶೆಡ್‌ಗಳಲ್ಲಿ ಬೀದಿಬದಿಯವರಿಂದ ವ್ಯಾಪಾರ

ಮಹಾನಗರ: ಸೆಂಟ್ರಲ್‌ ಮಾರ್ಕೆಟ್‌ ಕಟ್ಟಡದೊಳಗೆ ವ್ಯಾಪಾರ ನಡೆಸುತ್ತಿದ್ದ ಚಿಲ್ಲರೆ ವ್ಯಾಪಾ ರಸ್ಥರಿಗಾಗಿ ನಿರ್ಮಿಸಿ ಕೊಡಲಾದ ತಾತ್ಕಾಲಿಕ ಮಳಿಗೆಗಳ ಪೈಕಿ ಲೇಡಿಗೋಶನ್‌ ಎದುರಿನ ಮಳಿಗೆ ಯಲ್ಲಿ ಬೀದಿಬದಿ ವ್ಯಾಪಾರಸ್ಥರು ವ್ಯಾಪಾರ ಆರಂಭಿಸಿದ್ದಾರೆ.

ಸೆಂಟ್ರಲ್‌ ಮಾರ್ಕೆಟ್‌ ಒಳಗಿನ ಚಿಲ್ಲರೆ ಮತ್ತು ಹೋಲ್‌ಸೇಲ್‌ ವ್ಯಾಪಾರಸ್ಥರನ್ನು ಅಲ್ಲಿಂದ ತೆರವುಗೊಳಿಸಿದ ಅನಂತರ ಚಿಲ್ಲರೆ ವ್ಯಾಪಾರಸ್ಥರಿಗೆ ತಾತ್ಕಾಲಿಕ ಶೆಡ್‌ಗಳನ್ನು ನಿರ್ಮಿಸಿಕೊಡಲಾಗಿತ್ತು. ಹೋಲ್‌ಸೇಲ್‌ ವ್ಯಾಪಾರಸ್ಥರಿಗೆ ಬೈಕಂಪಾಡಿ ಎಪಿಎಂಸಿ ಯಾರ್ಡ್‌ನಲ್ಲಿ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಎ. 8ರಿಂದ ಹೋಲ್‌ಸೇಲ್‌ ವ್ಯಾಪಾರಸ್ಥರ ಪೈಕಿ ಕೆಲವರು ಎಪಿಎಂಸಿ ಯಾರ್ಡ್‌ನಲ್ಲಿ ವ್ಯಾಪಾರ ನಡೆಸುತ್ತಿದ್ದಾರೆ. ಆದರೆ ಚಿಲ್ಲರೆ ವ್ಯಾಪಾರಸ್ಥರು ತಾತ್ಕಾಲಿಕ ಶೆಡ್‌ಗಳಿಗೆ ತೆರಳಲು ನಿರಾಕರಿಸಿದ್ದಾರೆ. ಅತ್ತ ಸೆಂಟ್ರಲ್‌ ಮಾರ್ಕೆಟ್‌ನಲ್ಲಿಯೂ ಅವಕಾಶವಿಲ್ಲದೆ ಇತ್ತ ತಾತ್ಕಾಲಿಕ ಶೆಡ್‌ಗಳಲ್ಲಿಯೂ ವ್ಯಾಪಾರ ಮಾಡಲು ಸಾಧ್ಯವಾಗದೆ ಅಸಹಾಯಕರಾಗಿದ್ದಾರೆ.

50 ಶೆಡ್‌ಗಳು ಭರ್ತಿ
ಚಿಲ್ಲರೆ ವ್ಯಾಪಾರಸ್ಥರಿಗಾಗಿ ಪುರಭವನ, ಲೇಡಿಗೋಶನ್‌ ಎದುರು, ಬೀದಿಬದಿ ವ್ಯಾಪಾರಸ್ಥರ ಯಾರ್ಡ್‌ ಮತ್ತು ಅದರ ಪಕ್ಕದಲ್ಲಿ ಒಟ್ಟು 200ಕ್ಕೂ ಅಧಿಕ ತಾತ್ಕಾಲಿಕ ಮಳಿಗೆಗಳನ್ನು ಮಹಾನಗರ ಪಾಲಿಕೆ ಕಟ್ಟಿಸಿಕೊಟ್ಟಿತ್ತು. ಇದೀಗ ಲೇಡಿಗೋಶನ್‌ ಎದುರಿನ ಶೆಡ್‌ಗಳಲ್ಲಿ ಬೀದಿಬದಿ ವ್ಯಾಪಾರಸ್ಥರು ವ್ಯಾಪಾರ ಆರಂಭಿಸಿದ್ದಾರೆ. ಇಲ್ಲಿನ ಸುಮಾರು 50 ಶೆಡ್‌ಗಳಲ್ಲಿ ಪಾಲಿಕೆಯಿಂದ ಗುರುತಿನ ಚೀಟಿ ಪಡೆದಿರುವ ಬೀದಿಬದಿ ವ್ಯಾಪಾರಸ್ಥರು ತರಕಾರಿ, ಹಣ್ಣು ಹಂಪಲು, ಇತರೆ ಗೃಹೋಪಯೋಗಿ ಸಾಮಗ್ರಿಗಳ ವ್ಯಾಪಾರ ನಡೆಸುತ್ತಿದ್ದಾರೆ.

ನಮ್ಮನ್ನು ಬೀದಿಪಾಲು ಮಾಡದಿರಿ
“ನಾವು ಲೇಡಿಗೋಶನ್‌ ಎದುರಿನ ರಸ್ತೆ ಬದಿಯಲ್ಲಿ ಹತ್ತಾರು ವರ್ಷಗಳಿಂದ ವ್ಯಾಪಾರ ಮಾಡಿಕೊಂಡು ಬಂದಿದ್ದೇವೆ. ನಮಗೆ ಮಹಾನಗರ ಪಾಲಿಕೆ ಗುರುತಿನ ಚೀಟಿ ಕೂಡ ನೀಡಿದೆ. ಎಪ್ರಿಲ್‌ನಲ್ಲಿ ಸೆಂಟ್ರಲ್‌ ಮಾರ್ಕೆಟ್‌ನಿಂದ ಚಿಲ್ಲರೆ ವ್ಯಾಪಾರಸ್ಥರನ್ನು ಎಬ್ಬಿಸಿದ ಅನಂತರ ಅವರಿಗೆ ತಾತ್ಕಾಲಿಕ ಶೆಡ್‌ ನಿರ್ಮಿಸಿಕೊಡಲಾಯಿತು. ನಾವು ವ್ಯಾಪಾರ ಮಾಡುತ್ತಿದ್ದ ಲೇಡಿಗೋಶನ್‌ ಎದುರಿನ ಸ್ಥಳದಲ್ಲಿಯೂ ಶೆಡ್‌ಗಳನ್ನು ನಿರ್ಮಿಸಿಕೊಡಲಾಗಿದೆ. ನಾವು ಆಗಲೇ ನಮಗೂ ವ್ಯವಸ್ಥೆ ಮಾಡಿ ಕೊಡುವಂತೆ ಪಾಲಿಕೆಗೆ ಮನವಿ ಮಾಡಿದ್ದೆವು. ಈಗ ನಮ್ಮ ಜಾಗದಲ್ಲೇ ಶೆಡ್‌ ಇರುವುದರಿಂದ ಇಲ್ಲಿಯೇ ವ್ಯಾಪಾರ ಮಾಡುತ್ತಿದ್ದೇವೆ’ ಎನ್ನುತ್ತಾರೆ ಇಲ್ಲಿನ ಬೀದಿಬದಿ ವ್ಯಾಪಾರಸ್ಥರು.

 ನಮಗೂ ಸೂಕ್ತ ವ್ಯವಸ್ಥೆ ಬೇಕು
ಸರಕಾರದಿಂದ ನೇಮಿಸಲ್ಪಟ್ಟ ಬೀದಿ ಬದಿ ವ್ಯಾಪಾರಸ್ಥರ ಸಮಿತಿ ಇದೆ. ಅದರ ಗಮನಕ್ಕೂ ತಾರದೆ ನಾವು ವ್ಯಾಪಾರ ಮಾಡುತ್ತಿದ್ದ ಸ್ಥಳದಲ್ಲಿ ಶೆಡ್‌ಗಳನ್ನು ಹಾಕಲಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಎರಡು ತಿಂಗಳು ಮನೆಯಲ್ಲೇ ಇದ್ದೆವು. ಈಗ ನಾವು ಈ ಹಿಂದಿನಿಂದ ವ್ಯಾಪಾರ ಮಾಡುತ್ತಿದ್ದ ಸ್ಥಳದಲ್ಲೇ ವ್ಯಾಪಾರ ಮಾಡುತ್ತಿದ್ದೇವೆ. ನಮಗೆ ಬೇರೆ ಕಡೆ ಸೂಕ್ತ ವ್ಯವಸ್ಥೆ ಆಗದೆ ಇಲ್ಲಿಂದ ಹೋಗುವುದಿಲ್ಲ
-ಸಂತೋಷ್‌ ಆರ್‌.ಎಸ್‌., ಉಪಾಧ್ಯಕ್ಷರು, ಬೀದಿಬದಿ ವ್ಯಾಪಾರಸ್ಥರ ಸಂಘ, ಲೇಡಿಗೋಶನ್‌ ಘಟಕ

ತಾತ್ಕಾಲಿಕ ಶೆಡ್‌ನ‌ಲ್ಲಿ ವ್ಯಾಪಾರ ಅಸಾಧ್ಯ
ಸೆಂಟ್ರಲ್‌ ಮಾರ್ಕೆಟ್‌ನ ಒಳಗೆ ಸ್ಟಾಲ್‌ಗ‌ಳಲ್ಲಿ ಹಾಗೂ ಸ್ಟಾಲ್‌ನಿಂದ ಹೊರಗೆ ಒಟ್ಟು 345 ಮಂದಿ ಚಿಲ್ಲರೆ ವ್ಯಾಪಾರ ಮಾಡುತ್ತಿದ್ದೆವು. ನಮಗೆ ಸರಿಯಾದ ವ್ಯವಸ್ಥೆ ಮಾಡಿಕೊಡದೆ ಏಕಾಏಕಿ ಅಲ್ಲಿಂದ ತೆರವು ಮಾಡಿದ್ದಾರೆ. ನಮಗೆ ನಿರ್ಮಿಸಿಕೊಟ್ಟಿರುವ ತಾತ್ಕಾಲಿಕ ಶೆಡ್‌ನ‌ಲ್ಲಿ ವಿದ್ಯುತ್‌ ಸಂಪರ್ಕ, ಸಾಮಗ್ರಿಗಳಿಗೆ ಭದ್ರತೆ ಮೊದಲಾದ ಯಾವ ಅಗತ್ಯ ಸೌಲಭ್ಯವೂ ಇಲ್ಲ. ಹಾಗಾಗಿ ಆ ಶೆಡ್‌ಗಳಲ್ಲಿ ವ್ಯಾಪಾರ ಮಾಡದಿರಲು ನಿರ್ಧರಿಸಿದ್ದೇವೆ. ಉರ್ವ ಮಾರ್ಕೆಟ್‌ನ ಕಟ್ಟಡದಲ್ಲಿ ಅವಕಾಶ ನೀಡುವ ಭರವಸೆ ನೀಡಿದ್ದಾರೆ. ಆದರೆ ಅಲ್ಲಿಯೂ ಅವ್ಯವಸ್ಥೆ ಇದೆ. ಬೇರೆ ಸೂಕ್ತ ಸ್ಥಳಾವಕಾಶ ಮಾಡಿಕೊಡಬೇಕು.
-ಜನಾರ್ದನ್‌, ಕಾರ್ಯದರ್ಶಿ ,
ಸೆಂಟ್ರಲ್‌ ಮಾರ್ಕೆಟ್‌ ವ್ಯಾಪಾರಸ್ಥರ ಸಂಘ

 ಬೀದಿಬದಿ ವ್ಯಾಪಾರಸ್ಥರಿಗೂ ಸೂಕ್ತ ವ್ಯವಸ್ಥೆ
ಸೆಂಟ್ರಲ್‌ ಮಾರ್ಕೆಟ್‌ನ ಚಿಲ್ಲರೆ ವ್ಯಾಪಾರಸ್ಥರಿಗೆಂದು ಲೇಡಿಗೋಶ‌ನ್‌ ಎದುರಿನ ಸ್ಥಳವೂ ಸೇರಿದಂತೆ ಹಲವೆಡೆ ತಾತ್ಕಾಲಿಕ ಮಳಿಗೆ ಕಟ್ಟಿಸಿಕೊಟ್ಟಿದ್ದೇವೆ. ಆದರೆ ಅವರು ಇದುವರೆಗೂ ಮಳಿಗೆಗಳಿಗೆ ಬಂದಿಲ್ಲ. ಲೇಡಿಗೋಶನ್‌ ಎದುರಿನ ಮಳಿಗೆಯಲ್ಲಿ ಅಲ್ಲಿನ ಬೀದಿ ಬದಿ ವ್ಯಾಪಾರಿಗಳು ವ್ಯಾಪಾರ ಮಾಡುತ್ತಿದ್ದಾರೆ. ಚಿಲ್ಲರೆ ವ್ಯಾಪಾರಸ್ಥರು ಈ ಮಳಿಗೆಗಳಿಗೆ ಬಂದರೆ ಬೀದಿಬದಿ ವ್ಯಾಪಾರಸ್ಥರಿಗೆ ಬೇರೆ ಸೂಕ್ತ ವ್ಯವಸ್ಥೆ ಮಾಡಿಕೊಡುತ್ತೇವೆ.
-ಸಂತೋಷ್‌ ಕುಮಾರ್‌, ಉಪ ಆಯುಕ್ತರು, ಮನಪಾ

ಟಾಪ್ ನ್ಯೂಸ್

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Moodabidri: ಬೃಹತ್ ಜೈನ ಆರಾಧನಾ ಕೋಶ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Online Bitcoin Gambling Enterprises: An Overview to Betting with Cryptocurrency

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.