ಆಸ್ತಿ ಖರೀದಿ, ಮಾರಾಟಕ್ಕೆ ಶೇ. 10 ರಿಯಾಯ್ತಿ ಅವಧಿ ವಿಸ್ತರಣೆ: ಆರ್.ಅಶೋಕ್
Team Udayavani, Apr 22, 2022, 6:01 AM IST
ಬೆಂಗಳೂರು: ಆಸ್ತಿ ಖರೀದಿ ಮತ್ತು ಮಾರಾಟಕ್ಕೆ ಘೋಷಿಸಲಾಗಿದ್ದ ಶೇ.10ರಷ್ಟು ನೋಂದಣಿ ಹಾಗೂ ಮುದ್ರಾಂಕ ಶುಲ್ಕ ರಿಯಾಯಿತಿಯನ್ನು ಜುಲೈವರೆಗೂ ವಿಸ್ತರಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ಜನವರಿಯಿಂದ ಮಾರ್ಚ್ವರೆಗೆ ಘೋಷಿಸಲಾಗಿದ್ದ ಶೇ.10 ರಿಯಾಯಿತಿಯಿಂದ ಹೆಚ್ಚಿನ ನೋಂದಣಿಗಳಾಗಿದೆ. ಇದರಿಂದ ಸರಕಾರಕ್ಕೂ ಆದಾಯ ಬಂದಿದ್ದು, ಜನರಿಗೂ ಅನುಕೂಲವಾಗಿದೆ. ಈ ಸೌಲಭ್ಯವನ್ನು ಮುಂದುವರಿಸುವಂತೆ ಜನರಿಂದ ಬೇಡಿಕೆ ಬಂದಿದ್ದರಿಂದ ಜುಲೈ 24ರ ವರೆಗೆ ವಿಸ್ತರಿಸಲಾಗಿದೆ ಎಂದು ಹೇಳಿದರು.
ಮಾರ್ಗಸೂಚಿ ದರದಲ್ಲಿ ಶೇ.10ರಷ್ಟು ರಿಯಾಯಿತಿ ದೊರೆಯಲಿದೆ. ಎಲ್ಲ ರೀತಿಯ ಸೊತ್ತುಗಳ ಮಾರಾಟ ಮತ್ತು ಖರೀದಿಗೆ ಇದು ಅನ್ವಯಿಸುತ್ತದೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜತೆ ಚರ್ಚಿಸಿ ಆದೇಶ ಹೊರಡಿಸಲಾಗಿದೆ ಎಂದೂ ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ