ಆದಂ ದೇಸೂರ ನಿಧನದಿಂದ ತೆರವಾದ ಸ್ಥಾನಕ್ಕೆ ಸೆ.3 ರಂದು ಉಪ ಚುನುವಾಣೆ
Team Udayavani, Aug 12, 2021, 7:43 PM IST
ದಾಂಡೇಲಿ : ರಾಜ್ಯದ 12 ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಉಪ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗವು ದಿನಾಂಕ ನಿಗದಿಪಡಿಸಿ ಆದೇಶ ಹೊರಡಿಸಿದೆ. ಸ್ಥಳೀಯ ಸಂಸ್ಥೆಗಳ ಉಪ ಚುನಾವಣೆಯ ಪೈಕಿ ದಾಂಡೇಲಿ ನಗರ ಸಭೆಯ ಹಿಂದುಳಿದ ವರ್ಗ-ಅ ವರ್ಗಕ್ಕೆ ಮೀಸಲಾಗಿರುವ ವಾರ್ಡ್ 11 ಕ್ಕೂ ಉಪ ಚುನಾವಣೆಯ ನಡೆಯಲಿದೆ.
ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದ ಹಾಗೂ ವಾರ್ಡ್ 11 ರಲ್ಲಿ ನಗರ ಸಭಾ ಸದಸ್ಯರಾಗಿ ಆಯ್ಕೆಯಾಗಿದ್ದ ಆದಂ ದೇಸೂರರವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ನಡೆಯಲಿದೆ.
ಸೆ. 3 ರಂದು ಚುನಾವಣೆ ನಡೆಯಲಿದ್ದು, ಸೆ. 6ಕ್ಕೆ ಫಲಿತಾಂಶ ಹೊರಬೀಳಲಿದೆ. ಈ ಸಂಬಂಧ ಆ.16 ರಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆ ಹೊರಡಿಸಲಿದ್ದು, ಅದೇ ದಿನದಿಂದ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ :ಗೋವಾ – ಬೆಳಗಾವಿ ಗಡಿಯಲ್ಲಿ ಹೆಚ್ಚಿದ ತಪಾಸಣೆ : ತೊಂದರೆ ಅನುಭವಿಸುವ ವ್ಯಾಪಾರಸ್ಥರು
ಆ.23 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಆ.24 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆಯನ್ನು ಹಿಂಪಡೆದುಕೊಳ್ಳಲು ಆ.26 ಕೊನೆಯ ದಿನವಾಗಿರುತ್ತದೆ ಎಂದು ರಾಜ್ಯ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ
Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ
Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು