ಉಪ ಚುನಾವಣೆ: ಮೈತ್ರಿ ಆಸೆ “ಕೈ’ ಚೆಲ್ಲಿದ ಕಾಂಗ್ರೆಸ್‌?

ಮೂಲ-ವಲಸಿಗರ ತಿಕ್ಕಾಟಕ್ಕೆ ವೇದಿಕೆ ಆಗಲಿದೆಯೇ ಫ‌ಲಿತಾಂಶ?

Team Udayavani, Dec 8, 2019, 7:22 PM IST

congress

ಬೆಂಗಳೂರು: ಉಪ ಚುನಾವಣೆ ಫ‌ಲಿತಾಂಶದ ಬಳಿಕ ಸರಕಾರವನ್ನು ಭದ್ರಪಡಿಸಿಕೊಳ್ಳುವ ಅತೀವ ಉಮೇದಿನಲ್ಲಿ ಬಿಜೆಪಿ ಪಾಳಯ ಇದ್ದರೆ, ಹಳೆ ದೋಸ್ತಿ ಮುಂದುವರಿಯಬಹುದು ಎನ್ನುವ ನಿರೀಕ್ಷೆಯಿಟ್ಟುಕೊಂಡಿದ್ದ ಕಾಂಗ್ರೆಸ್‌ ಪಾಳಯ ಆ ಆಸೆಯನ್ನು ಸದ್ಯಕ್ಕೆ ಕೈಚೆಲ್ಲಿದಂತಿದೆ. ಮತದಾನೋತ್ತರ ಸಮೀಕ್ಷೆ ಹೊರಬಂದ ಅನಂತರ ಕಾಂಗ್ರೆಸ್‌ ನಾಯಕರಲ್ಲಿ ಒಂದು ರೀತಿಯ ಮೌನ ಮನೆ ಮಾಡಿದೆ.

ಕನಿಷ್ಠ 8ರಿಂದ 9 ಸ್ಥಾನಗಳನ್ನು ಗೆಲ್ಲುತ್ತೇವೆ ಎಂಬ ಕಾಂಗ್ರೆಸ್‌ನ ಲೆಕ್ಕಚಾರ ತಲೆಕೆಳಗಾಗಿರುವಂತೆ ಕಾಣುತ್ತಿದೆ. ಆದರೆ ಈಗ ಹುಣಸೂರು, ಕಾಗವಾಡ, ಅಥಣಿ, ರಾಣೆಬೆನ್ನೂರು ಬಗ್ಗೆ ಮಾತ್ರ ಆಶಾ ಭಾವನೆ ಹೊಂದಿದ್ದು, ಶಿವಾಜಿನಗರದಲ್ಲಿ ಅಚ್ಚರಿಯ ಫ‌ಲಿತಾಂಶ ಬಂದಲ್ಲಿ ಕಾಂಗ್ರೆಸ್‌ ಮೇಲುಗೈ ಸಾಧಿಸಲಿದೆ ಎಂಬ ವಿಶ್ವಾಸ ಇಟ್ಟುಕೊಂಡಿದೆ. ಉಳಿದ ಕಡೆ ಅಂಥ ಯಾವ ಲಕ್ಷಣಗಳೂ ಕಾಂಗ್ರೆಸ್‌ಗೆ ಸದ್ಯಕ್ಕಂತೂ ಕಾಣುತ್ತಿಲ್ಲ.

ಅಷ್ಟಕ್ಕೂ ಸೋಮವಾರ ಹೊರಬೀಳಲಿರುವ ಫ‌ಲಿತಾಂಶದಿಂದ ಎಲ್ಲ ಅಂತೆ-ಕಂತೆಗಳಿಗೆ ತೆರೆ ಬೀಳಲಿದ್ದು, ಇದೇ ವೇಳೆ ಕಾಂಗ್ರೆಸ್‌ ಪಕ್ಷದಲ್ಲಿ “ಆಂತರಿಕ ಧ್ರುವೀಕರಣ’ ಆಗುವ ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ.

ಧ್ರುವೀಕರಣದ ಮಾತು
ವಿಪಕ್ಷ ನಾಯಕನ ಸ್ಥಾನಪಲ್ಲಟ, ಕೆಪಿಸಿಸಿ ಅಧ್ಯಕ್ಷರ ತಲೆದಂಡ ಚರ್ಚೆಗಳು ಮುನ್ನೆಲೆಗೆ ಬರಲಿದ್ದು, ಜತೆಗೆ ಪಕ್ಷ ಸೋತರೆ ಯಾರನ್ನು ಹೊಣೆ ಮಾಡಬೇಕು, ಗೆದ್ದರೆ ಯಶಸ್ಸಿನ ಶ್ರೇಯ ಯಾರಿಗೆ ಎಂಬ ಬಗ್ಗೆ ಈಗಾಗಲೇ ಕಾಂಗ್ರೆಸ್‌ ಪಾಳಯದಲ್ಲಿ ಚರ್ಚೆಗಳು ಆರಂಭವಾಗಿದ್ದು ಫ‌ಲಿತಾಂಶ ಘೋಷಣೆಯಾದ ಬಳಿಕ ಈ ಚರ್ಚೆಗಳು ಇನ್ನಷ್ಟು ಬಿರುಸುಗೊಳ್ಳುವ ಸಾಧ್ಯತೆಗಳಿವೆ. ಮೂಲ ಮತ್ತು ವಲಸಿಗರ ಸೆಣಸಾಟ ಸಹ ಹೆಚ್ಚಾಗಲಿದೆ. ಈ ಮಧ್ಯೆ ಹೈಕಮಾಂಡ್‌ಗೆ ವರದಿ ಒಪ್ಪಿಸಲು ಪೈಪೋಟಿಯೂ ನಡೆಯಲಿದೆ ಎಂಬ ಮಾತುಗಳು ಪಕ್ಷದ ಆಂತರಿಕ ವಲಯದಲ್ಲಿ ಕೇಳಿ ಬರುತ್ತಿವೆ.

ಮರುಮೈತ್ರಿ ಪ್ರಸ್ತಾವ
ಉಪ ಸಮರ ಗೆಲ್ಲೋದು ನಾವೇ ಎಂದು ರಣರಂಗಕ್ಕೆ ಇಳಿದ ಕಾಂಗ್ರೆಸ್‌ ಚುನಾವಣ ಪ್ರಚಾರದ ಮೊದಲಾರ್ಧದಲ್ಲಿ ಅಷ್ಟೇನು ಉತ್ಸಾಹ, ಸಂಘಟಿತ ಪ್ರಯತ್ನ ನಡೆಸಿದಂತೆ ಕಂಡು ಬರಲಿಲ್ಲ. ಆದರೆ ದೇವೇಗೌಡರು ಮೈತ್ರಿ ದಾಳ ಉರುಳಿಸುತ್ತಿದ್ದಂತೆ ಸಿಎಂ ಪಟ್ಟಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ತೇಲಿ ಬರುತ್ತಿದ್ದಂತೆ ಪ್ರಚಾರ ಗರಿಗೆದರಿತು. ಪ್ರಚಾರದ ಕೊನೆಯಾರ್ಧದಲ್ಲಿ ಕಣದಲ್ಲಿ ಕಾಂಗ್ರೆಸ್‌ನ ಘಟಾನುಘಟಿಗಳು ಒಟ್ಟೊಟ್ಟಿಗೆ ಕಂಡು ಬಂದರು. ನಮಗೆ ಬಿಜೆಪಿಯಷ್ಟೇ ಜೆಡಿಎಸ್‌ ಸಹ ರಾಜಕೀಯವಾಗಿ ಅಷ್ಟೇ ಶತ್ರು ಎಂಬ ಸಿದ್ದರಾಮಯ್ಯ ಅವರ ಮಾತು ಮೈತ್ರಿಯ ಕನಸಿಗೆ ಭಂಗ ತಂದಿತು ಎಂಬು ಮಾತುಗಳು ಕೇಳಿ ಬರುತ್ತಿವೆ.

ಅಷ್ಟಕ್ಕೂ ಮೈತ್ರಿಯ ಮಾತೇ ಗೆಲ್ಲುವ ಲೆಕ್ಕಾಚಾರಕ್ಕೆ ಹಿನ್ನಡೆ ತಂದಿತು ಎನ್ನುವ ಮಾತುಗಳು ಕಾಂಗ್ರೆಸ್‌ ಪಡಸಾಲೆಯಲ್ಲಿ ಕೇಳಿ ಬಂದಿವೆ. ಏಕೆಂದರೆ ಶಾಸಕರ ಅನರ್ಹತೆಯ ವಿಚಾರ ಇಟ್ಟುಕೊಂಡು ಪ್ರಚಾರ ಮಾಡಿದ್ದರೆ ಪಕ್ಷಕ್ಕೆ ಹೆಚ್ಚು ಪೂರಕವಾಗುತ್ತಿತ್ತು. ಆದರೆ ಚುನಾವಣ ಪ್ರಚಾರದ ಕೊನೆಯಾರ್ಧದಲ್ಲಿ ಕೇಳಿ ಬಂದ ಮೈತ್ರಿಯ ಮಾತುಗಳು ಲೆಕ್ಕಚಾರ “ಕೈ’ ತಪ್ಪುವಂತೆ ಮಾಡಿತು. ಇದು ಬಿಜೆಪಿಗೆ ಇನ್ನಷ್ಟು ಪೂರಕ ವಾತಾವರಣ ನಿರ್ಮಿಸಿಕೊಟ್ಟಿತು. ಜೆಡಿಎಸ್‌ ನಾಯಕರು ಉದ್ದೇಶಪೂರ್ವಕವಾಗಿಯೇ ಕೊನೆ ಹಂತದಲ್ಲಿ ಮೈತ್ರಿ ಮಾತುಗಳನ್ನು ತೇಲಿ ಬಿಟ್ಟರು ಎಂದು ಕಾಂಗ್ರೆಸ್‌ ನಾಯಕರ ವಾದವಾಗಿದೆ.

ಕೆಪಿಸಿಸಿ ಅಧ್ಯಕ್ಷರ ತಲೆದಂಡ?
ಉಪ ಚುನಾವಣೆ ಫ‌ಲಿತಾಂಶ ಕಾಂಗ್ರೆಸ್‌ ಪಕ್ಷಕ್ಕೆ ಹಿನ್ನಡೆ ತಂದು ಕೊಟ್ಟರೂ ಸದ್ಯಕ್ಕೆ ವಿಪಕ್ಷ ನಾಯಕನ ಸ್ಥಾನ ಪಲ್ಲಟ ಆಗುವ ಸಾಧ್ಯತೆಗಳು ಕಡಿಮೆ. ಆದರೆ ಕೆಪಿಸಿಸಿ ಅಧ್ಯಕ್ಷರ “ತಲೆದಂಡ’ಕ್ಕೆ ಒತ್ತಡ ಹೆಚ್ಚಾಗಬಹುದು. ಈ ಹಿಂದೆ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ನಿರೀಕ್ಷಿತ ಸ್ಥಾನ ಸಿಗದಿದ್ದಾಗ “ನೈತಿಕ’ ಹೊಣೆ ಹೊತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ರಾಜೀನಾಮೆ ಕೊಡಲು ಮುಂದಾಗಿದ್ದರು. ಆದರೆ ಬಳಿಕ ಹೈಕಮಾಂಡ್‌ ಸೂಚಿಸಿದರೆ ರಾಜಿನಾಮೆ ಕೊಡುತ್ತೇನೆ ಎಂದು ಉಲ್ಟಾ ಹೊಡೆದಿದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.