ಕೊಲ್ಲೂರು ಮೂಕಾಂಬಿಕೆಗೆ ಬೆಳ್ಳಿ ಖಡ್ಗ ಸಮರ್ಪಿಸಿದ ಸಚಿವ ಬೈರತಿ ಬಸವರಾಜ್
Team Udayavani, Jul 15, 2020, 4:31 PM IST
ಕೊಲ್ಲೂರು: ಸಚಿವ ಬೈರತಿ ಬಸವರಾಜ್ ಅವರು ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿ ಶ್ರೀ ದೇವಿಯ ದರ್ಶನ ಪಡೆದು ಹರಕೆಯ ರೂಪದಲ್ಲಿ ಬೆಳ್ಳಿ ಖಡ್ಗ ಸಮರ್ಪಿಸಿದರು.
ರಾಜಕೀಯ ಗೊಂದಲದ ಸಂದರ್ಭದಲ್ಲಿ ತಾಯಿ ಮೂಕಾಂಬಿಕೆಗೆ ಸಚಿವರು ಮಾಡಿರುವ ಹರಕೆ ಪೂರೈಸಲು ಇಲ್ಲಿಗೆ ಆಗಮಿಸಿದ್ದರು.
ತಮಿಳುನಾಡಿನ ಮುಖ್ಯಮಂತ್ರಿ ದಿ.ಎಂ.ಜಿ.ರಾಮಚಂದ್ರನ್ ಅವರು ಇಷ್ಟಾರ್ಥ ಪೂರೈಕೆ ಆಗಿದ್ದ ಆ ಕಾಲ ಘಟ್ಟದಲ್ಲಿ ಮೂಕಾಂಬಿಕೆಗೆ ಚಿನ್ನದ ಖಡ್ಗವನ್ನು ಕಾಣಿಕೆ ರೂಪದಲ್ಲಿ ನೀಡಿರುವುದನ್ನು ಇಲ್ಲಿ ಸ್ಮರಿಸಬಹುದು.
ಸಚಿವರೊಡನೆ ದೇಗುಲದ ಆಡಳಿತಾಧಿಕಾರಿ ಹಾಗೂ ಉಪಕಮೀಷನರ್ ಆಗಿರುವ ರಾಜು, ಕಾರ್ಯನಿರ್ವಹಣಾಧಿಕಾರಿ ಅರವಿಂದ ಎ.ಸುತಗುಂಡಿ, ಉಡುಪಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಸದಸ್ಯ ಕಿಶೋರ್ ಕುಮಾರ್. ಉಡುಪಿ ನಗರ ಯೋಜನಾ ಸದಸ್ಯ ಜಿತೇಶ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್