ಸಂಪುಟ ವಿಸ್ತರಣೆ ಗದ್ದಲದಲ್ಲಿ ಭಿನ್ನ ದನಿ


Team Udayavani, Feb 3, 2020, 3:09 AM IST

samputa-vista

ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಸಂಪುಟ ಸರ್ಕಸ್‌ ಕೊನೆಗೂ ಅಂತಿಮಗೊಂಡಿದ್ದು, ನೂತನ ಸಚಿವರು ಪ್ರಮಾಣ ವಚನ ಸ್ವೀಕಾರದ ಸಿದ್ಧತೆಯಲ್ಲಿ ತೊಡಗಿದ್ದಾರೆ. ಪ್ರಮಾಣ ವಚನ ಸಮಾರಂಭಕ್ಕೆ ಸಮಯ ನಿಗದಿಯಾಗಿದ್ದರೂ, ಅಂದು ವಿಸ್ತರಣೆಯಾಗುವುದೋ ಅಥವಾ ಪುನಾ ರಚನೆಯಾಗುವುದೋ ಎಂಬುದು ಇನ್ನೂ ಬಹಿರಂಗವಾಗಿಲ್ಲ. ಈ ನಡುವೆಯೇ, ಸಚಿವಾಕಾಂಕ್ಷಿಗಳ ಒತ್ತಡ ತಂತ್ರವೂ ಮುಂದುವರಿದಿದೆ. ಸಂಪುಟ ವಿಸ್ತರಣೆ ಗದ್ದಲದಲ್ಲಿ ಯಾರು ಏನೆಂದರು ಎಂಬ ವಿವರ ಇಲ್ಲಿದೆ..

ಹದಿನೇಳು ಶಾಸಕರ ಹಂಗಿನಲ್ಲಿ ಸಿಎಂ ಯಡಿಯೂರಪ್ಪ: ಸತೀಶ
ಬೆಳಗಾವಿ: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹದಿನೇಳು ಮಂದಿ ಶಾಸಕರ ಹಂಗಿನಲ್ಲಿದ್ದಾರೆ. ಅವರನ್ನು ಸಮಾಧಾನಪಡಿಸುವುದು ಅವರ ಮೊದಲ ಕೆಲಸ. ಹೀಗಾಗಿ ಮೂಲ ಬಿಜೆಪಿ ಶಾಸಕರು ಸಚಿವರಾಗಲು ಇನ್ನಷ್ಟು ದಿನ ಕಾಯಬೇಕು ಎಂದು ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ವ್ಯಂಗ್ಯವಾಡಿದರು. ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿ, ಸಂಪುಟ ವಿಸ್ತರಣೆ ನಂತರ ಮತ್ತೆ ಭಿನ್ನಮತ ಸ್ಫೋಟಗೊಳ್ಳಲಿದೆ. ಮೂಲ ಬಿಜೆಪಿ ಶಾಸಕರು ತಮ್ಮ ಹಕ್ಕು ಪ್ರತಿಪಾದನೆ ಮಾಡುತ್ತಾರೆ. ಆಗ ತಾನಾಗೇ ಭಿನ್ನಮತ ಹೊರಗಡೆ ಬರುತ್ತದೆ ಎಂದರು.

ಆಪರೇಷನ್‌ ಕಮಲ ಮಾಡಿದ ಮೇಲೆ ಎಲ್ಲವನ್ನೂ ಸರಿದೂಗಿಸಲು ಸಾಧ್ಯವಿಲ್ಲ. ಮೊದಲು 17 ಜನ ಶಾಸಕರನ್ನು ತೃಪ್ತಿಪಡಿಸಬೇಕು. ಇದರಿಂದ ಮೂಲ ಬಿಜೆಪಿ ಶಾಸಕರು ಇನ್ನೂ ಸಚಿವರಾಗಲು ಕನಸು ಕಾಣುತ್ತಲೇ ಇರಬೇಕು. ಆಪರೇಷನ್‌ ಕಮಲ ಮಾಡಿದ್ದೇ ತಪ್ಪು ಸಂದೇಶ ಹೋಗಿದೆ. ಹೀಗಾಗಿ ಸರ್ಕಾರಕ್ಕೆ ಸಮಸ್ಯೆ ಉಂಟಾಗುವುದು ಖಚಿತ ಎಂದರು. ರಮೇಶ ಜಾರಕಿಹೊಳಿ ಒಬ್ಬ ಟ್ರಬಲ್‌ ಮೇಕರ್‌. ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಮೇಶನನ್ನು ಎಷ್ಟು ದಿನ ಸಹಿಸಿಕೊಳ್ಳುತ್ತಾರೋ ನೋಡಬೇಕು. ರಮೇಶ ಜಾರಕಿಹೊಳಿ ಅಭಿವೃದ್ಧಿ ಉದ್ದೇಶದಿಂದ ನೀರಾವರಿ ಸಚಿವ ಸ್ಥಾನ ಕೇಳುತ್ತಿಲ್ಲ.

ಇದು ಎರಡು ವರ್ಷದಿಂದ ನಡೆದಿರುವ ಪ್ಲಾನ್‌. ತಮ್ಮ ಸ್ವಹಿತಾಸಕ್ತಿಗಾಗಿ ಈ ಖಾತೆ ಕೇಳುತ್ತಿದ್ದಾರೆ. ಇಲ್ಲಿಯೂ ತಾವು ಬೇಡಿದ ಖಾತೆ ಕೊಡದಿದ್ದರೆ ಆಗ ಮತ್ತೆ ರಮೇಶ ಸಮಸ್ಯೆ ಉಂಟು ಮಾಡುತ್ತಾರೆ ಎಂದು ಹೇಳಿದರು. ಸಚಿವ ಸ್ಥಾನ ಸಿಗದೇ ಇದ್ದರೆ ಬಿಜೆಪಿ ಕಚೇರಿಯಲ್ಲಿ ಕಸ ಗುಡಿಸಲು ಸಿದ್ಧ ಎಂಬ ಶಾಸಕ ಮಹೇಶ ಕುಮಟಳ್ಳಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಒಂದು ಪಕ್ಷಕ್ಕೆ ಹೋದ ಮೇಲೆ ಅದರ ಸಿದ್ಧಾಂತಕ್ಕೆ ಬದ್ಧವಾಗಿರಬೇಕಾಗುತ್ತದೆ. ಕಸವನ್ನೂ ಗುಡಿಸಬೇಕಾಗುತ್ತದೆ ಎಂದು ವ್ಯಂಗ್ಯವಾಡಿದರು.

ಬಿಎಸ್‌ವೈ ಕೊಟ್ಟ ಮಾತು ಉಳಿಸಿಕೊಳ್ಳಲಿ: ವಾಲ್ಮೀಕಿ ಶ್ರೀ
ಹರಿಹರ: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಕೊಟ್ಟ ಮಾತಿನಂತೆ ಸಂಪುಟ ವಿಸ್ತರಣೆ ವೇಳೆ ವಾಲ್ಮೀಕಿ ಸಮಾಜದವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಆಗ್ರಹಿಸಿದರು. ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿ, ಚುನಾವಣೆ ಸಂದರ್ಭ ಯಡಿಯೂರಪ್ಪ ವಾಲ್ಮೀಕಿ ಸಮಾಜ ದವರಿಗೆ ಡಿಸಿಎಂ ಸ್ಥಾನ ನೀಡುವುದಾಗಿ ಘೋಷಿಸಿದ್ದರು. ಈಗ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕಿದೆ ಎಂದರು.

ವಾಲ್ಮೀಕಿ ಸಮಾಜದ ಶ್ರೀರಾಮುಲು ಹಾಗೂ ರಮೇಶ್‌ ಜಾರಕಿಹೊಳಿ ಡಿಸಿಎಂ ಸ್ಥಾನಕ್ಕೆ ಅರ್ಹರಾಗಿದ್ದು, ಇಬ್ಬರಲ್ಲಿ ಯಾರಿಗಾದರೂ ಒಬ್ಬರಿಗೆ ಡಿಸಿಎಂ ಸ್ಥಾನ ನೀಡಲಿ. ಅದರ ಬಗ್ಗೆ ನಮ್ಮ ತಕರಾರು ಇಲ್ಲ ಎಂದ ಶ್ರೀಗಳು, ಈ ಕುರಿತು ಸಮಾಜದ ಜನರಲ್ಲೂ ದೊಡ್ಡ ನಿರೀಕ್ಷೆ ಇದ್ದು, ಅದನ್ನು ಬಿಎಸ್‌ವೈ ಹುಸಿಗೊಳಿಸಬಾರದು ಎಂದರು. ವಾಲ್ಮೀಕಿ ಸಮಾಜದವರಿಗೆ ಶೇ.7.5 ಮೀಸಲಾತಿ ನೀಡಬೇಕೆಂಬ ಬೇಡಿಕೆ ಇಟ್ಟಿದ್ದೇವೆ. ಆಯೋಗದ ವರದಿ ಬಂದ ನಂತರ ಈ ಕುರಿತು ನಿರ್ಣಯಿಸುವುದಾಗಿ ಬಿಎಸ್‌ವೈ ಹೇಳಿದ್ದಾರೆ. ಆ ಬಗ್ಗೆ ನಮ್ಮ ಒಪ್ಪಿಗೆಯೂ ಇದೆ. ಹಿಂದುಳಿದ ಸಮಾಜಕ್ಕೆ ಸಾಮಾಜಿಕ ನ್ಯಾಯ ಸಿಗಬೇಕಿದೆ ಎಂದರು.

ವಾಲ್ಮೀಕಿ ಜಾತ್ರೆ: ಫೆ.8 ಮತ್ತು 9ರಂದು ಮಠದಲ್ಲಿ ಎರಡನೇ ವರ್ಷದ ಐತಿಹಾಸಿಕ ಮಹರ್ಷಿ ವಾಲ್ಮೀಕಿ ಜಾತ್ರೆ ನಡೆಯಲಿದೆ. ರಾಜ್ಯದ ನಾನಾ ಭಾಗಗಳಿಂದ ಲಕ್ಷಾಂತರ ಭಕ್ತರು ಆಗಮಿಸಲಿದ್ದು, ಈ ಬಾರಿ ಕಳೆದ ವರ್ಷಕ್ಕಿಂತ ಹೆಚ್ಚು ಜನ ಆಗಮಿಸುವ ನಿರೀಕ್ಷೆ ಇದೆ. ಸಿಎಂ, ಮಾಜಿ ಸಿಎಂ, ಕೇಂದ್ರ, ರಾಜ್ಯ ಸಚಿವರು, ನಾಡಿನ ವಿವಿಧ ಮಠಾ ಧೀಶರು, ಸಮಾಜದ ಮುಖಂಡರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಜಾತ್ರೆ ಸಂಬಂಧ ಸಿದ್ಧತೆಗಳು ನಡೆಯುತ್ತಿವೆ ಎಂದರು.

ತಾಳ್ಮೆ ವಹಿಸಿದರೆ ಶಂಕರ್‌ಗೂ ಅವಕಾಶ
ಬಳ್ಳಾರಿ: ಮಾಜಿ ಸಚಿವ ಆರ್‌.ಶಂಕರ್‌ ಅವರನ್ನು ಬಿಜೆಪಿ ವರಿಷ್ಠರು ಕೈಬಿಡಲ್ಲ. ಮುಂದೆಯೂ ಅವರಿಗೆ ಅವಕಾಶ ಇದ್ದೇ ಇರುತ್ತದೆ ಎಂದು ಶಾಸಕ ಜಿ.ಸೋಮಶೇಖರರೆಡ್ಡಿ ಹೇಳಿದರು. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಚಿವ ಲಕ್ಷ್ಮಣ ಸವದಿ ಅವರಿಗೆ ಎಂಎಲ್‌ಸಿ ನೀಡಿದರೂ, ಮಾಜಿ ಸಚಿವ ಆರ್‌.ಶಂಕರ್‌ ಅವರನ್ನು ಕೈಬಿಡಲ್ಲ. ಮುಂದೆ ಯೂ ಯಾವುದಾದರೂ ಒಂದು ಅವಕಾಶ ಅವರಿಗೆ ಇದ್ದೇ ಇರುತ್ತದೆ. ಸ್ವಲ್ಪ ತಾಳ್ಮೆಯಿಂದ ಇರಬೇಕು. ಪಕ್ಷದ ರಾಜ್ಯ ಮುಖಂಡರು ಈ ಬಗ್ಗೆ ಆಲೋಚನೆ ಮಾಡಿ ಅವಕಾಶ ಕಲ್ಪಿಸುತ್ತಾರೆ ಎಂದರು.

ಹಣೆ ಬರಹದಂತೆ ಆಗುತ್ತೆ: ತಾವು ಸಚಿವ ಸ್ಥಾನದ ಆಕಾಂಕ್ಷಿಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಪಕ್ಷದ ರಾಜ್ಯ ಮುಖಂಡರಿಗೆ ಈಗಿರುವ ತಲೆನೋವೇ ಸಾಕು. ಅದರಲ್ಲಿ ನಾನೇಕೆ ಮಧ್ಯೆ ಪ್ರವೇಶಿಸಬೇಕು? ನಾನು ಎರಡನೇ ಬಾರಿ ಶಾಸಕನಾಗಿ ಆಯ್ಕೆ ಯಾಗಿದ್ದೇನೆ. ಕೆಲವರಂತೆ ಮೂರ್‍ನಾಲ್ಕು ಬಾರಿ ಶಾಸಕನಾಗಿ ಆಯ್ಕೆ ಯಾಗಿಲ್ಲ. ಮನಸ್ಸಿದ್ದರೆ ಮಾರ್ಗ. ಭಗವಂತ ಹಣೆಬರಹದಲ್ಲಿ ಏನು ಬರೆದಿದ್ದಾನೋ ಅದರಂತೆ ಆಗಲಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರುವಲ್ಲಿ ಮಾಜಿ ಸಚಿವರಾದ ಎಚ್‌.ವಿಶ್ವನಾಥ್‌ ಮತ್ತು ಎಂ.ಟಿ.ಬಿ. ನಾಗರಾಜ್‌ ಅವರ ತ್ಯಾಗ ದೊಡ್ಡದು. ಅವರ ತ್ಯಾಗವನ್ನು ಸಿಎಂ ಯಡಿಯೂರಪ್ಪ ಅವರು ಮರೆಯುವುದಿಲ್ಲ.
-ವಿ.ಸೋಮಣ್ಣ, ವಸತಿ ಸಚಿವ

ಜನಪ್ರತಿನಿಧಿಗಳಿಗೆ ಅಧಿಕಾರದ ಆಸೆ ಹೆಚ್ಚಾಗಿರುವುದನ್ನು ಕಾಣುತ್ತಿದ್ದೇವೆ. ಇದೇ ಪರಿಸ್ಥಿತಿ ಮುಂದುವರಿದಲ್ಲಿ ಮುಂದೆ ದಾವಣಗೆರೆ, ಚಿತ್ರದುರ್ಗ, ಬೆಂಗಳೂರು..ಹೀಗೆ ಒಂದೊಂದು ಜಿಲ್ಲೆಗೆ ಒಬ್ಬೊಬ್ಬ ಮುಖ್ಯಮಂತ್ರಿ ಮಾಡಿ ಎಂದು ಒತ್ತಡ ಹಾಕುವ ದಿನಗಳು ಸಹ ಬರಬಹುದು.
-ಸಂತೋಷ್‌ ಹೆಗ್ಡೆ, ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ

ವಾಲ್ಮೀಕಿ ಸಮುದಾಯಕ್ಕೆ ಡಿಸಿಎಂ ಸ್ಥಾನ ಕೊಡುವ ಬಗ್ಗೆ ಏನನ್ನೂ ಹೇಳಲ್ಲ. ಹಾಗೆಯೇ ಯಾರಿಗೂ ಮುಜುಗರಪಡಿಸಲೂ ಹೋಗುವುದಿಲ್ಲ. ಪಕ್ಷದ ವರಿಷ್ಠರು ತೆಗೆದುಕೊಳ್ಳುವ ತೀರ್ಮಾನವನ್ನು ಕಾದು ನೋಡುತ್ತೇನೆ.
-ಶ್ರೀರಾಮುಲು, ಆರೋಗ್ಯ ಸಚಿವ

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.