ಸ್ವಾವಲಂಬಿ ಬದುಕಿಗೆ ಆಸರೆಯಾದ ಪಂಜರದ ಮೀನು ಕೃಷಿ

ಕಲಿಕೆಯೊಂದಿಗೆ ಮೀನು ಸಾಕಣೆಯಲ್ಲಿ ತೊಡಗಿಸಿಕೊಂಡ ವಿದ್ಯಾರ್ಥಿ

Team Udayavani, Oct 5, 2021, 6:10 AM IST

ಸ್ವಾವಲಂಬಿ ಬದುಕಿಗೆ ಆಸರೆಯಾದ ಪಂಜರದ ಮೀನು ಕೃಷಿ

ತೆಕ್ಕಟ್ಟೆ:ಆತನಿಗೆ ಬಾಲ್ಯದಿಂದಲೇ ಕೃಷಿ, ಹೈನುಗಾರಿಕೆ, ಮೀನುಗಾರಿಕೆ ಮೊದಲಾದವುಗಳಲ್ಲಿ ಆಕರ್ಷಣೆ ಹೆಚ್ಚಾಗಿತ್ತು. ಅದಕ್ಕೆ ಬೇಕಾದ ಪೂರಕ ವಾತಾವರಣವೂ ಊರಲ್ಲಿತ್ತು.  ಲಾಭನಷ್ಟದ ಬಗ್ಗೆ ಚಿಂತೆಯೇ ಮಾಡಲಿಲ್ಲ. ಈಗ ಪಂಜರ ಮೀನು ಕೃಷಿಯೂ ಆಸಕ್ತಿ ವಹಿಸಿದವರಿಗೆ ಲಾಭ ತರಬಲ್ಲದು ಎಂಬ ಆಶಾಭಾವನೆ ಮೂಡಿಸುತ್ತಿದ್ದಾನೆ ಆಕರ್ಷ್‌ ಪೂಜಾರಿ.

ಈತ ಕೋಟ ವಿವೇಕ ಜೂನಿಯರ್‌ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ. ಬೇಳೂರಿನ ದೇಲಟ್ಟು ಗೋವಿಂದ ಪೂಜಾರಿ ಹಾಗೂ ವಸಂತಿ ಪೂಜಾರಿ ಈತನ ಹೆತ್ತವರು.

ಪಂಜರದ ಮೀನು ಕೃಷಿಯೆಡೆಗೆ ಆಕರ್ಷಣೆ
ಆಕರ್ಷ್‌ ಬಾಲ್ಯದಿಂದಲೂ ಕೃಷಿ, ಹೈನುಗಾರಿಕೆ, ಕೋಳಿ ಸಾಕಾಣಿಕೆ ಕುರಿತಾಗಿ ಆಸಕ್ತಿ ವಹಿಸಿದ್ದನು. ಇದಕ್ಕೆ ಪೂರಕವಾಗಿ ಮಾವ ಬಸವ ಪೂಜಾರಿ ಅವರು ಮಾರ್ಗದರ್ಶನ ನೀಡಿದ್ದರು. ಅಲ್ಲದೆ ಯೂಟ್ಯೂಬ್‌ನಿಂದ ಮಾಹಿತಿ ಸಂಗ್ರಹಿಸಿ ಕಾಟ್ಲಾ, ರೋಬೋ ಹಾಗೂ ವಿವಿಧ ಜಾತಿಗೆ ಸೇರಿದ ಸುಮಾರು 800ಕ್ಕೂ ಅಧಿಕ ಮೀನಿನ ಮರಿಗಳನ್ನು ಬಳಸಿ ಮನೆ ಸಮೀಪದ ಸಣ್ಣಹೊಳೆಯಲ್ಲಿ ಪ್ರಾಯೋಗಿಕವಾಗಿ ಪಂಜರದ ಮೀನು ಕೃಷಿ ಆರಂಭಿಸಿದ್ದ.

ಪಂಜರ ರಚನೆ
ಪಿವಿಸಿ ಪೈಪ್‌ ಹಾಗೂ ಬಲೆಗಳನ್ನು ಬಳಸಿಕೊಂಡು, ಸುಮಾರು 5 ಸಾವಿರಕ್ಕೂ ಅಧಿಕ ಮೀನು ಸಾಕಣೆ ಮಾಡುವ ಸಾಮರ್ಥ್ಯ ಹೊಂದಿದ 12 ಅಡಿ ಅಗಲ ಹಾಗೂ 8 ಅಡಿ ಎತ್ತರದ ಪಂಜರವನ್ನು 25 ಸಾವಿರ ರೂ. ವೆಚ್ಚದಲ್ಲಿ ಸಿದ್ಧಪಡಿಸಿದ್ದಾನೆ.

ಇದನ್ನೂ ಓದಿ:ತಂತ್ರಜ್ಞಾನ ಆಧಾರಿತ ಹೈನುಗಾರಿಕೆ, ಆಧುನಿಕ ಪದ್ಧತಿ ಅಳವಡಿಕೆಯಿಂದ ಲಾಭದಾಯಕ

ವಿದ್ಯಾರ್ಥಿಯೋರ್ವ ಕಲಿಕೆಯ ಜತೆ ಸ್ವಾವಲಂಬಿ ಬದುಕು ಕಟ್ಟಿಕೊಂಡು ಬಿಡುವಿನ ಸಂದರ್ಭದಲ್ಲಿ ಗ್ರಾಮೀಣ ಭಾಗದಲ್ಲಿ ಮೀನು ಕೃಷಿಯ ಹಾಗೂ ಡೆಕೋರೇಶನ್‌ ಕಾಯಕದಲ್ಲಿ  ತೊಡಗಿಸಿಕೊಂಡಿದ್ದಾನೆ.

ಬಾಲ್ಯದಿಂದಲೂ ಆಕರ್ಷ್‌ ಕಲಿಕೆಯ ಜತೆಗೆ ಸಾಂಪ್ರದಾಯಿಕ ಕೃಷಿ, ಹೈನುಗಾರಿಕೆ, ಮೀನುಗಾರಿಕೆ, ಕೋಳಿ ಸಾಕಾಣಿಕೆ ಹಾಗೂ ತೆಂಗಿನ  ಕಾಯಿ ಕೀಳುವ ಕಾಯಕದಲ್ಲಿ ಆಸಕ್ತಿ ಹೊಂದಿದ್ದಾನೆ.  ಬಿಡುವಿನ ವೇಳೆಯಲ್ಲಿ ಏನಾದರೂ ಚಟುವಟಿಕೆಯಲ್ಲಿ ತೊಡಗಿರುತ್ತಾನೆ ಎಂದು ಆಕರ್ಷ್‌ ಪೂಜಾರಿಯ ತಾಯಿ ವಸಂತಿ ಪೂಜಾರಿ ಹೇಳಿದ್ದಾರೆ.

ಮೀನಿಗೆ ಬೇಡಿಕೆ

ಏರುತ್ತಿರುವ ತಾಪಮಾನ, ಜಲ ಮಾಲಿನ್ಯದಿಂದಾಗಿ ಕಡಲಿನಲ್ಲಿ ಮತ್ಸ್ಯಕ್ಷಾಮ ಉಂಟಾಗಿದೆ. ಹೀಗಾಗಿ ಈ ಮೀನಿಗೆ ಬೇಡಿಕೆ ಇದೆ.  ಈ ಬಾರಿ ಅನುಭವದ ಕೊರತೆಯಿಂದ ಅಷ್ಟೇನು ಲಾಭದಾಯಕವಾಗಿಲ್ಲ. ಮುಂದಿನ ದಿನಗಳಲ್ಲಿ ಸರಕಾರದ ಯೋಜನೆಗಳನ್ನು ಬಳಸಿಕೊಂಡು  ಮೀನು ಕೃಷಿ ವಿಸ್ತರಿಸಬೇಕು ಎನ್ನುವ ಹಂಬಲವಿದೆ.
-ಆಕರ್ಷ್‌ ಪೂಜಾರಿ, ಪಂಜರದ ಮೀನು ಕೃಷಿ ಮಾಡಿದ ವಿದ್ಯಾರ್ಥಿ

– ಟಿ.ಲೋಕೇಶ್‌ ಆಚಾರ್ಯ ತೆಕ್ಕಟ್ಟೆ

 

ಟಾಪ್ ನ್ಯೂಸ್

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.