ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ದಸರಾ ಗಜಪಡೆಗೆ ಬೀಳ್ಕೊಡುಗೆ


Team Udayavani, Oct 29, 2020, 10:45 AM IST

ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ದಸರಾ ಗಜಪಡೆಗೆ ಬೀಳ್ಕೊಡುಗೆ

ಮೈಸೂರು: 2020ನೇ ಸಾಲಿನ ದಸರಾ ಜಂಬೂ ಸವಾರಿಯನ್ನು ಯಶಸ್ವಿಯಾಗಿ ಪೂರೈಸಿದ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ಗಜಪಡೆಗೆ ಬುಧವಾರ ಅರಮನೆ ಅಂಗಳದಲ್ಲಿ ಬೀಳ್ಕೊಡಲಾಯಿತು. ಕಳೆದೊಂದು ತಿಂಗಳಿನಿಂದ ಅರಮನೆ ಆವರಣದಲ್ಲಿ ಬೀಡುಬಿಟ್ಟಿದ್ದ ದಸರಾ ಆನೆಗಳೊಂದಿಗೆ, ಮಾವುತರು ಮತ್ತು ಕಾವಾಡಿಗಳು ನಾಡಿನಿಂದ ಮತ್ತೆ ಕಾಡಿನತ್ತ ಪಯಣ ಬೆಳೆಸಿದರು.
ಅಂಬಾರಿ ಆನೆ ಅಭಿಮನ್ಯು ಮತ್ತಿಗೋಡು ಶಿಬಿರಕ್ಕೆ, ಕಾವೇರಿ, ವಿಕ್ರಮ, ಗೋಪಿ ಆನೆಗಳು ದುಬಾರೆ ಶಿಬಿರಕ್ಕೆ ಹಾಗೂ ವಿಜಯಾ ಆನೆಕಾಡು ಶಿಬಿರಕ್ಕೆ ಹೊರಟವು. ಈ ಬಾರಿ ಒಂದೇ ತಂಡದಲ್ಲಿ ಮೈಸೂರಿಗೆ ಆಗಮಿಸಿದ್ದ 5 ಆನೆಗಳನ್ನು ಪ್ರತ್ಯೇಕ 5 ಲಾರಿಯಲ್ಲಿ ರವಾನಿಸಲಾಯಿತು. ಸಾರ್ವಜನಿಕರಿಗೆ ಅರಮನೆಯೊಳಗೆ ಪ್ರವೇಶ ನಿರ್ಬಂಧಿಸಲಾಗಿತ್ತು.

ಹೀಗಾಗಿ ಅರಮನೆ ಆವರಣದಿಂದ ಹೊರಟ ಆನೆಗಳನ್ನು ರಸ್ತೆಯಲ್ಲಿ ನಿಂತಿದ್ದ ಜನರು ಕಂಡು ಜೈಕಾರ ಕೂಗಿ ಹರ್ಷ ವ್ಯಕ್ತಪಡಿಸಿದರು.

ಅಧಿಕಾರಿಗಳಿಂದ ಪೂಜೆ: ದಸರಾ ಜಂಬೂ ಸವಾರಿ ಯಶಸ್ವಿಗೊಳಿಸಿದ ಗಜಪಡೆಗೆ ಅರಮನೆ ಆವರಣದಲ್ಲಿ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಲಾಯಿತು. ಅರಣ್ಯಾಧಿಕಾರಿಗಳು ಹಾಗೂ ಅರಮನೆ ಮಂಡಳಿ ಅಧಿಕಾರಿಗಳು ಆನೆಗಳ
ಪಾದಗಳನ್ನು ತೊಳೆದು ಪೂಜಿಸಿ, ಬೂದುಗುಂಬಳ ಒಡೆದು ದೃಷ್ಟಿ ತೆಗೆದರು. ನಂತರ ಎಲ್ಲಾ ಆನೆಗಳಿಗೂ ವಿವಿಧ ಹಣ್ಣು, ಕಬ್ಬು ತಿನ್ನಿಸಿದರು. ಇದಕ್ಕೂ ಮುನ್ನ ಮಾವುತರು ಹಾಗೂ ಕಾವಾಡಿಗಳಿಗೆ ಉಪಾಹಾರ ವ್ಯವಸ್ಥೆ ಏರ್ಪಡಿಸಲಾಗಿತ್ತು.
ಈ ವೇಳೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌, ಡಿಸಿಎಫ್ ಅಲೆಗ್ಸಾಂಡರ್, ಅರಮನೆ ಭದ್ರತೆ ಎಸಿಪಿ ಚಂದ್ರಶೇಖರ್‌, ಪಶುವೈದ್ಯ ಡಾ.ನಾಗರಾಜು ಇದ್ದರು.

ಇದನ್ನೂ ಓದಿ:ಮೈಸೂರು ನಿವೃತ್ತ ಪ್ರಾಂಶುಪಾಲ ಹತ್ಯೆ ಪ್ರಕರಣ : ಸುಪಾರಿ ಹಂತಕರು ಸೇರಿ ಐವರ ಬಂಧನ

ಆನೆ ಶಿಬಿರಗಳಿಗೆ ಮರಳಿದ ಮಾವುತರು, ವಿಶೇಷ ಮಾವುತರು, ಕಾವಾಡಿಗಳಿಗೆ ಅರಣ್ಯ ಇಲಾಖೆ ವತಿಯಿಂದ ತಲಾ 2.5 ಸಾವಿರ ರೂ. ನಗದು, 25 ಕೆ.ಜಿ.ಅಕ್ಕಿ, ಒಂದು ಬಾಕ್ಸ್‌ ತಿನಿಸು ನೀಡಲಾಯಿತು.

ಅರಮನೆ ಅಂಗಳದಲ್ಲಿ ಯದುವೀರ್‌ ಸುತ್ತಾಟ
ನವರಾತ್ರಿ ಹಾಗೂ ದಸರಾ ಹಬ್ಬದ ಧಾರ್ಮಿಕ ಕಾರ್ಯಗಳಲ್ಲಿ ತಲ್ಲೀನರಾಗಿದ್ದ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಬುಧವಾರ ತಮ್ಮ ಪುತ್ರ ಆದ್ಯವೀರ್‌ ಜತೆ ಅರಮನೆ ಆವರಣದಲ್ಲಿ ಕಾರಿನಲ್ಲಿ ಸುತ್ತಾಡಿದರು.
ಮೊದಲು ಅರಮನೆಯ ಸೋಮೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಯದುವೀರ್‌ ನಂತರ ಗಜಪಡೆ ಬೀಳ್ಕೊಡುಗೆ ಕಾರ್ಯಕ್ರಮಕ್ಕೆ ಆಗಮಿಸಿದರು. ಗಜಪಡೆ ಬೀಳ್ಕೊಡುಗೆ ಸಮಾರಂಭದಲ್ಲಿ ಇದೇ ಮೊದಲ ಬಾರಿಗೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಭಾಗವಹಿಸಿ ಗಮನ ಸೆಳೆದರು. ನಂತರ ಅಭಿಮನ್ಯು ನೇತೃತ್ವದ ದಸರಾ ಆನೆಗಳನ್ನು ಕಾಡಿಗೆ ಕಳುಹಿಸಲು ಪೂಜೆ ಸಲ್ಲಿಸಿ ಬೀಳ್ಕೊಡಲಾಯಿತು. ಈ ವೇಳೆ ಗಜಪಡೆಯ ನಾಯಕ ಅಭಿಮನ್ಯು ಜೊತೆ ಯದುವೀರ್‌ ಮಗನೊಂದಿಗೆ ಫೋಟೋ ತೆಗೆಸಿಕೊಂಡರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.