ದೆವ್ವದ ವೇಷ ಧರಿಸಿ ಭೀತಿ ಮೂಡಿಸುತ್ತಿದ್ದ ವಿದ್ಯಾರ್ಥಿಗಳ ಸೆರೆ


Team Udayavani, Nov 12, 2019, 3:08 AM IST

devvadfas

ಬೆಂಗಳೂರು: ಪ್ರಾಂಕ್‌(ತಮಾಷೆ) ವಿಡಿಯೋಗಳನ್ನು ತಮ್ಮ ಯು ಟ್ಯೂಬ್‌ ಚಾನೆಲ್‌ನಲ್ಲಿ ಅಪ್‌ಲೋಡ್‌ ಮಾಡಲು ದೆವ್ವದ ವೇಷ ಧರಿಸಿ ರಸ್ತೆಯಲ್ಲಿ ಸಾರ್ವಜನಿಕರನ್ನು ಬೆದರಿಸುತ್ತಿದ್ದ ಏಳು ಮಂದಿ ವಿದ್ಯಾರ್ಥಿಗಳನ್ನು ಯಶವಂತಪುರ ಪೊಲೀಸರು ಬಂಧಿಸಿದ್ದಾರೆ.

ಆರ್‌.ಟಿ.ನಗರ ನಿವಾಸಿಗಳಾದ ಶಾನ್‌ ಮಲ್ಲಿಕ್‌ (20), ನವೀದ್‌ (20), ಸಜೀಲ್‌ ಮೊಹಮ್ಮದ್‌ (21), ಮೊಹಮ್ಮದ್‌ ಅಕ್ಯೂಬ್‌ (20), ಸಾಕಿಬ್‌ (20), ಸೈಯದ್‌ ನಬೀಲ್‌ (20), ಯೂಸಫ್ ಅಹಮ್ಮದ್‌ (20) ಎಂಬ ಆರೋಪಿಗಳನ್ನು ಬಂಧಿಸಿ, ಬಳಿಕ ಠಾಣಾ ಜಾಮೀನಿನ ಮೇಲೆ ಮುಚ್ಚಳಿಕೆ ಪತ್ರ ಬರೆಸಿಕೊಂಡು ಬಿಡುಗಡೆ ಮಾಡಿ ಕಳುಹಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಆರೋಪಿಗಳು ನಗರದ ಪ್ರತಿಷ್ಠಿತ ಕಾಲೇಜುಗಳಲ್ಲಿ ಪದವಿ, ಎಂಜಿನಿಯರಿಂಗ್‌ ವ್ಯಾಸಂಗ ಮಾಡುತ್ತಿದ್ದಾರೆ. ಈ ಪೈಕಿ ಕೆಲವರು ದೆವ್ವದ ವೇಷಧರಿಸಿ, ಮುಖಕ್ಕೆ ಮುಸುಕು ಹಾಗೂ ಉದ್ದನೆಯ ಕೂದಲಿನ ವಿಗ್‌ ಹಾಕಿಕೊಂಡು ತಡರಾತ್ರಿ ರಸ್ತೆಯಲ್ಲಿ ಓಡಾಡುವ ಸಾರ್ವಜನಿಕರ ಎದುರಿಗೆ ಪ್ರತ್ಯಕ್ಷವಾಗಿ ದಾಳಿ ಮಾಡುವ ರೀತಿಯಲ್ಲಿ ಬೆದರಿಕೆಯೊಡ್ಡುತ್ತಿದ್ದರು.

ಕಾರಿನಲ್ಲಿ ಮಲಗಿರುವ ಚಾಲಕರು ಹಾಗೂ ರಸ್ತೆ ಬದಿ, ಅಂಗಡಿ ಮುಗ್ಗಟ್ಟು ಮಂದೆ ಮಲಗಿದ್ದ ಸಾರ್ವಜನಿಕರನ್ನು ಎಚ್ಚರಗೊಳಿಸಿ ದೆವ್ವದ ರೀತಿಯಲ್ಲಿ ಹೆದರಿಸುತ್ತಿದ್ದರು. ಇದನ್ನು ಇತರೆ ವಿದ್ಯಾರ್ಥಿಗಳು ದೂರದಿಂದ ಕ್ಯಾಮೆರಾದಲ್ಲಿ ಸೆರೆ ಹಿಡಿಯುತ್ತಿದ್ದರು. ಭಾನುವಾರ ರಾತ್ರಿ ಆರೋಪಿಗಳು ಯಶವಂತಪುರದ ಶರೀಫ್ನಗರದಲ್ಲಿ ದೆವ್ವದ ವೇಷಧರಿಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ್ದರು.

ಅದರಿಂದ ಭಯಗೊಂಡ ಕೆಲವರು ಯಶವಂತಪುರ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದ್ದರು. ಅಲ್ಲದೆ, ಅದೇ ವೇಳೆ ರಾತ್ರಿ ಗಸ್ತು ತಿರುಗುತ್ತಿದ್ದ ಸೋಲದೇವನಹಳ್ಳಿ ಇನ್ಸ್‌ಪೆಕ್ಟರ್‌ ಸಿ.ಬಿ.ಶಿವಸ್ವಾಮಿ ಅವರಿಗೆ ಅದೇ ರಸ್ತೆಯಲ್ಲಿ ಬರುತ್ತಿದ್ದ ವ್ಯಕ್ತಿಯೊಬ್ಬರು ಯುವಕರ ಕೃತ್ಯದ ಬಗ್ಗೆ ಮಾಹಿತಿ ನೀಡಿದ್ದರು. ಕೂಡಲೇ ಇನ್ಸ್‌ಪೆಕ್ಟರ್‌ ಸ್ಥಳಕ್ಕೆ ತೆರಳಿ ಆರೋಪಿಗಳನ್ನು ಬಂಧಿಸಿ, ಠಾಣೆಗೆ ಕರೆದೊಯ್ದಿದ್ದಾರೆ ಎಂದು ಹಿರಿಯ ಪೊಲೀಸ್‌ ಅಧಿಕಾರಿ ಮಾಹಿತಿ ನೀಡಿದರು.

ಹಲ್ಲೆಗೆ ಮುಂದಾಗಿದ್ದ ಸಾರ್ವಜನಿಕರು: ತಡರಾತ್ರಿ ತಮಾಷೆ ವಿಡಿಯೋಗಳನ್ನು ಚಿತ್ರೀಕರಣ ಮಾಡುವಾಗ ದೊಣ್ಣೆಯಿಂದ ಸಾರ್ವಜನಿಕರನ್ನು ಹೆದರಿಸುತ್ತಿದ್ದರು. ಈ ವೇಳೆ ಆಕ್ರೋಶಗೊಂಡ ಸಾರ್ವಜನಿಕರೊಬ್ಬರು ಕೈಗೆ ಸಿಕ್ಕ ವಸ್ತುವೊಂದರಿಂದ ದೆವ್ವದ ವೇಷ ಧರಿಸಿದ್ದ ಯುವಕನ ಮೇಲೆ ಎಸೆಯಲು ಮುಂದಾಗಿದ್ದರು. ಮತ್ತೂಂದೆಡೆ ಕೆಲವರು ಯುವಕರ ಮೇಲೆ ಹಲ್ಲೆಗೂ ಮುಂದಾಗಿದ್ದರು. ನಂತರ ಕೂಡಲೇ ಇತರೆ ವಿದ್ಯಾರ್ಥಿಗಳು ತಮಾಷೆ ವಿಡಿಯೋ ಎಂದು ಬಿಡಿಸಿದ್ದಾರೆ.

ಭಾನುವಾರ ಈದ್‌ ಮಿಲಾದ್‌, ಟಿಪ್ಪು ಜಯಂತಿ ಹಾಗೂ ಅಯೋಧ್ಯೆ ತೀರ್ಪು ಪ್ರಕಟವಾಗಿತ್ತು. ಇಂತಹ ಸಂದರ್ಭದಲ್ಲಿ ಈ ರೀತಿಯ ವಿಡಿಯೋ ಮಾಡುವುದು ಸರಿಯಲ್ಲ. ಏಕಾಏಕಿ ದೆವ್ವ ಎಂದರೆ ರಸ್ತೆಯಲ್ಲಿ ಓಡಾಡುವ ವ್ಯಕ್ತಿಯ ಮನಸ್ಸಿಗೆ ಆಘಾತವಾದರೆ ಅಥವಾ ಯಾರೋ ಹೆದರಿಸಲು ಈ ರೀತಿ ಮಾಡುತ್ತಿದ್ದಾರೆ ಎಂದು ಆಕ್ರೋಶಗೊಂಡು ಸಾರ್ವಜನಿಕರೇ ಹಲ್ಲೆ ನಡೆಸಿದರೆ ಯಾರು ಹೊಣೆ? ಹೀಗಾಗಿ, ಬಂಧಿಸಿ ಎಚ್ಚರಿಕೆ ನೀಡಿ ಕಳುಹಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಐದಾರು ತಿಂಗಳಿಂದ ಕೃತ್ಯ: ಪ್ರಾಂಕ್‌ ವಿಡಿಯೋಗಳನ್ನು ಅಪ್‌ಲೋಡ್‌ ಮಾಡಲೆಂದೇ ಐದಾರು ತಿಂಗಳ ಹಿಂದೆ ಯುವಕರು ಯುಟ್ಯೂಬ್‌ನಲ್ಲಿ ಖಾತೆ ತೆರೆದು ಚಾನಲ್‌ವೊಂದನ್ನು ಮಾಡಿಕೊಂಡಿದ್ದಾರೆ. ಅಚ್ಚರಿ ಹಾಗೂ ಪ್ರಾಂಕ್‌ ವಿಡಿಯೋಗಳನ್ನು ಚಿತ್ರೀಕರಿಸಿ ಈ ಚಾನಲ್‌ಗೆ ಅಪ್‌ಲೋಡ್‌ ಮಾಡುತ್ತಿದ್ದರು. ವಿಡಿಯೋಗೆ ಹೆಚ್ಚು ಲೈಕ್‌ ಹಾಗೂ ಶೇರ್‌ ಮಾಡಿಸಿದರೆ ಅಥವಾ ಚಾನಲ್‌ ಚಂದಾದಾ ರರಾದರೆ ಯುಟ್ಯೂಬ್‌ನಿಂದ ಹಣ ಸಿಗುತ್ತದೆ ಎಂದು ವಿದ್ಯಾರ್ಥಿಗಳು ಈ ಕೃತ್ಯಕ್ಕೆ ಕೈ ಹಾಕಿದ್ದರು. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಠಾಣಾ ಜಾಮೀನಿನ ಮೇಲೆ ಬಿಟ್ಟು ಕಳುಹಿಸಲಾಗಿದ್ದು, ಪೋಷಕರನ್ನು ಕರೆದು ಎಚ್ಚರಿಕೆ ನೀಡಲಾಗಿದೆ ಎಂದು ಅಧಿಕಾರಿ ಮಾಹಿತಿ ನೀಡಿದರು.

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.