ಜನವರಿ ಅಂತ್ಯಕ್ಕೆ ಕಾರ್ಗೋ ಟರ್ಮಿನಲ್‌ ಕಾರ್ಯಾರಂಭ


Team Udayavani, Nov 30, 2020, 12:05 PM IST

ಜನವರಿ ಅಂತ್ಯಕ್ಕೆ ಕಾರ್ಗೋ ಟರ್ಮಿನಲ್‌ ಕಾರ್ಯಾರಂಭ

ಹುಬ್ಬಳ್ಳಿ: ನಗರದ ಹಳೆಯ ವಿಮಾನ ನಿಲ್ದಾಣದ ಟರ್ಮಿನಲ್‌ ಡೊಮೆಸ್ಟಿಕ್‌ ಏರ್‌ ಕಾರ್ಗೋ ಟರ್ಮಿನಲ್‌ (ಸರಕು ಸಾಗಣೆ) ಆಗಿ
ಪರಿವರ್ತನೆಯಾಗುತ್ತಿದ್ದು, ಇದರ ಕಾಮಗಾರಿಯು ಭರದಿಂದ ಸಾಗಿದ್ದು, ಜನವರಿ ಇಲ್ಲವೆ ಫೆಬ್ರವರಿಯಲ್ಲಿ
ಕಾರ್ಯಾರಂಭಗೊಳ್ಳುವ ನಿರೀಕ್ಷೆಗಳಿವೆ.

ನಗರದ ವಿಮಾನ ನಿಲ್ದಾಣದಿಂದ ದೇಶದ ವಿವಿಧೆಡೆ ಪ್ರಯಾಣಿಸುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಜೊತೆಗೆ ಸರಕು ಸಾಗಾಟವೂ ಹೆಚ್ಚಳವಾಗುತ್ತಿದೆ. ಹೀಗಾಗಿ ಹಳೆಯ ವಿಮಾನ ನಿಲ್ದಾಣದ ಟರ್ಮಿನಲ್‌ ಅನ್ನು ಡೊಮೆಸ್ಟಿಕ್‌ ಏರ್‌ ಕಾರ್ಗೋ ವಿಮಾನ (ಸರಕು ಸಾಗಣೆ)ಗಳ ಬಳಕೆಗಾಗಿ ನಾಗರಿಕ ವಿಮಾನಯಾನ ಸಚಿವಾಲಯ ಅನುಮೋದನೆ ನೀಡಿದ್ದು, ಇದರ ಕಾಮಗಾರಿ
ಭರದಿಂದ ನಡೆದಿದೆ. ನಗರದಲ್ಲಿ ನಿರ್ಮಿಸಲಾಗುತ್ತಿರುವ ಡೊಮೆಸ್ಟಿಕ್‌ ಏರ್‌ ಕಾರ್ಗೋ ಟರ್ಮಿನಲ್‌ಗೆ ಎರಡು ದಿನಗಳ ಹಿಂದೆ
ಬ್ಯೂರೋ ಆಫ್‌ ಸಿವಿಲ್‌ ಎವಿಯೇಷನ್‌ ಸೆಕ್ಯುರಿಟಿ (ಬಿಸಿಎಎಸ್‌) ಅಧಿಕಾರಿಗಳು ಬಂದು ಭೇಟಿಕೊಟ್ಟು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಕಾರ್ಗೋ ನಿಲ್ದಾಣಕ್ಕೆ ಅವಶ್ಯವಾದ ಮೂಲಸೌಕರ್ಯಗಳು ಹಾಗೂ ಭದ್ರತಾ ಕ್ರಮಗಳ ಕುರಿತು ಕೆಲವು ಸಲಹೆ-ಸೂಚನೆ ನೀಡಿದ್ದು, ಅದರಂತೆ ಕಾಮಗಾರಿ ಕೈಗೊಳ್ಳಲಾಗುತ್ತಿದೆ.

ಅಂದುಕೊಂಡಂತೆ ನಿಗದಿತ ಅವಧಿಯಲ್ಲಿ ಈ ಕಾಮಗಾರಿ ಪೂರ್ಣಗೊಂಡು, ಬಿಸಿಎಎಸ್‌ನಿಂದ ಸೆಕ್ಯುರಿಟಿ ಕ್ಲಿಯರೆನ್ಸ್‌ ದೊರೆತರೆ ಜನವರಿ ಅಂತ್ಯ ಇಲ್ಲವೆ ಫೆಬ್ರವರಿ ಮೊದಲಾರ್ಧದಲ್ಲಿ ಇದು ಕಾರ್ಯಾರಂಭಗೊಳ್ಳಲಿದೆ. ಡೊಮೆಸ್ಟಿಕ್‌ ಏರ್‌ ಕಾರ್ಗೋ ಟರ್ಮಿನಲ್‌ನ ನಿರ್ವಹಣೆಯನ್ನು ಎಎಐಸಿಎಲ್‌ಎಎಸ್‌ (ಕಾರ್ಗೋ ಲಾಜಿಸ್ಟಿಕ್ಸ್‌ ಆ್ಯಂಡ್‌ ಅಲೈಡ್‌ ಸರ್ವೀಸಸ್‌) ಮಾಡಲಿದೆ.

3+4 ಬೇಸ್‌ನಲ್ಲಿ ಕಾರ್ಗೋ ಟರ್ಮಿನಲ್‌: ನಗರದಲ್ಲಿ ನಿರ್ಮಾಣವಾಗುತ್ತಿರುವ ಡೊಮೆಸ್ಟಿಕ್‌ ಏರ್‌ ಕಾರ್ಗೋ ಟರ್ಮಿನಲ್‌ 3+4 (ಏಳು) ಬೇಸ್‌ಗಳಲ್ಲಿ ಸಿದ್ಧಗೊಳ್ಳುತ್ತಿದೆ. ಈ ಟರ್ಮಿನಲ್‌ದಲ್ಲಿ ಮೂರು (3) ದೊಡ್ಡ ಕಾರ್ಗೋ ವಿಮಾನಗಳು ಹಾಗೂ ನಾಲ್ಕು  (4) ಚಿಕ್ಕ ಕಾರ್ಗೋ ವಿಮಾನಗಳ ನಿಲುಗಡೆ ಆಗಲಿವೆ. ಇಲ್ಲಿಂದ ಉದ್ಯಮಿಗಳು, ರೈತರು, ವ್ಯಾಪಾರಸ್ಥರು ತಮ್ಮ ಉತ್ಪನ್ನ-ಸರಕುಗಳನ್ನು ಸಾಗಾಟ ಮಾಡಲು ಹಾಗೂ ತಮಗೆ ಬೇಕಾದ ಕಚ್ಚಾ ಸಾಮಗ್ರಿಗಳು, ಇತರೆ ಸರಕುಗಳನ್ನು ಆಮದು ಮಾಡಿಕೊಳ್ಳಬಹುದಾಗಿದೆ.

ಸರಕು ಸಾಗಣೆ-ಆಮದು ಬೇಡಿಕೆ ಹೆಚ್ಚಳ :
ನಗರದಿಂದ ದೇಶದ ವಿವಿಧ ಪ್ರದೇಶಗಳಿಗೆ ಸರಕು ಸಾಗಾಣಿಕೆ ಹಾಗೂ ಆಮದಿನ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಆದರೆ ಈಗ ನಗರದಿಂದ ಹಿಂಡನ್‌ (ದೆಹಲಿ), ಮುಂಬಯಿ, ಬೆಂಗಳೂರು, ಅಹ್ಮದಾಬಾದ್‌, ತಿರುಪತಿ, ಚೆನ್ನೈ, ಕೊಚ್ಚಿ, ಕನ್ನೂರ,
ಗೋವಾಗೆ ವಿಮಾನಸೇವೆ ಒದಗಿಸುತ್ತಿರುವ ಕಂಪನಿಗಳು ತಮ್ಮ ವಿಮಾನಗಳಲ್ಲಿಯೇ ಸಣ್ಣ ಪ್ರಮಾಣದಲ್ಲಿ ಸರಕು ಸಾಗಾಟ ಮಾಡುತ್ತಿವೆ. ಇದರಿಂದ ಸರಕು, ಸಾಮಗ್ರಿ, ಉತ್ಪನ್ನ ಸಾಗಾಟಗಾರರು ಹಾಗೂ ಖರೀದಿದಾರರಿಗೆ ಹೆಚ್ಚಿನ ಪ್ರಮಾಣದಲ್ಲಿ ಸರಕು ಸಾಗಾಟಕ್ಕೆ ಸಮಸ್ಯೆ ಆಗುತ್ತಿದೆ. ನಗರದಲ್ಲಿ ಏರ್‌ ಕಾರ್ಗೋ ಟರ್ಮಿನಲ್‌ ಕಾರ್ಯಾರಂಭಗೊಂಡರೆ ಉತ್ತರ ಕರ್ನಾಟಕ ಭಾಗದ ಕೈಗಾರಿಕೋದ್ಯಮಿಗಳು, ಸರಕುಗಳ ಉತ್ಪಾದಕರಿಗೆ ಹಾಗೂ ವ್ಯಾಪಾರಸ್ಥರಿಗೆ ತಮ್ಮ ಉತ್ಪನ್ನಗಳು, ಸರಕುಗಳನ್ನು ಸರಬರಾಜು
ಮಾಡಲು ಹಾಗೂ ಬೇಡಿಕೆಯಿರುವ ಸರಕು, ಉತ್ಪನ್ನಗಳನ್ನು ಹೊರ ಪ್ರದೇಶಗಳಿಂದ ತರಿಸಿಕೊಳ್ಳಲು ಅನುಕೂಲವಾಗಲಿದೆ.

ಹಳೆಯ ವಿಮಾನ ನಿಲ್ದಾಣದ
ಟರ್ಮಿನಲ್‌ ಅನ್ನು ಡೊಮೆಸ್ಟಿಕ್‌ ಏರ್‌ ಕಾರ್ಗೋ ಟರ್ಮಿನಲ್‌ ಆಗಿ ಪರಿವರ್ತನೆ ಮಾಡಲಾಗುತ್ತಿದೆ. ಇದರ ಕಾಮಗಾರಿ
ಭರದಿಂದ ಸಾಗಿದ್ದು, ಜನವರಿ ಅಂತ್ಯಕ್ಕೆ ಇಲ್ಲವೆ ಫೆಬ್ರವರಿ ಮೊದಲಾರ್ಧದಲ್ಲಿ ಕಾರ್ಯಾರಂಭವಾಗುವ ನಿರೀಕ್ಷೆಯಿದೆ.
– ಪ್ರಮೋದ ಕುಮಾರ ಠಾಕೂರ, ಹುಬ್ಬಳ್ಳಿ ವಿಮಾನ ನಿಲ್ದಾಣ ನಿರ್ದೇಶಕ

– ಶಿವಶಂಕರ ಕಂಠಿ

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.