Caste census: ವರದಿ ಸಲ್ಲಿಕೆಗೆ ನಿಗದಿಯಾಗದ ಸಮಯ- ಹೆಗ್ಡೆ ಅವಧಿ ಮತ್ತೆ ವಿಸ್ತರಣೆ ಸಾಧ್ಯತೆ
Team Udayavani, Jan 24, 2024, 11:43 PM IST
ಬೆಂಗಳೂರು: ಬಹುನಿರೀಕ್ಷಿತ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ (ಜಾತಿ ಗಣತಿ) ವರದಿ ಬಹುತೇಕ ಸಿದ್ಧ ಗೊಂಡಿದೆ. ಆದರೆ ಸದ್ಯಕ್ಕೆ ಅದು ಸರಕಾರಕ್ಕೆ ಸಲ್ಲಿಕೆಯಾಗುವ ಲಕ್ಷಣಗಳು ಕಂಡುಬರುತ್ತಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರ ಅವಧಿ ಮತ್ತೂಮ್ಮೆ ವಿಸ್ತರಣೆಯಾಗುವ ಸಾಧ್ಯತೆಗಳಿವೆ.
ಒಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಜೆಟ್ ಸಿದ್ಧತೆಯಲ್ಲಿ ಬ್ಯುಸಿಯಾಗಿದ್ದಾರೆ. ಮತ್ತೂಂದೆಡೆ ಅಧಿವೇಶನಕ್ಕೂ ಮೊದಲೇ ವರದಿ ಸ್ವೀಕಾರಗೊಂಡರೆ, ವಿಪಕ್ಷಗಳಿಗೆ ಅನಾಯಾಸವಾಗಿ ಆಹಾರವಾಗಲಿದೆ. ಒಂದು ವೇಳೆ ಈಗ ಇದರಿಂದ ಪಾರಾದರೆ, ಲೋಕಸಭಾ ಚುನಾವಣೆ ಮುಗಿಯುವವರೆಗೂ ಇದು ನೇಪಥ್ಯಕ್ಕೆ ಸರಿಯಲಿದೆ. ಈ ಮಧ್ಯೆ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರ ಅವಧಿ ಇದೇ ಜ. 31ಕ್ಕೆ ಪೂರ್ಣಗೊಳ್ಳಲಿದೆ. ಈ ಇಕ್ಕಟ್ಟಿನಿಂದ ಪಾರಾಗಲು ಸರಕಾರ ಮತ್ತೂಮ್ಮೆ ಅಧ್ಯಕ್ಷರ ಅವಧಿಯನ್ನು ವಿಸ್ತರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಕಳೆದ ನವೆಂಬರ್ 25ಕ್ಕೆ ಜಯಪ್ರಕಾಶ್ ಹೆಗ್ಡೆ ಅಧಿಕಾರಾ ವಧಿ ಪೂರ್ಣಗೊಂಡಿತ್ತು. ನ. 24ರಂದು ಎರಡು ತಿಂಗಳ ಮಟ್ಟಿಗೆ ಅಂದರೆ, ಜ. 31ರವರೆಗೆ ಮರುನೇಮಕ ಮಾಡಿ ಆದೇಶ ಹೊರಡಿಸಿತ್ತು.
ಸಮಯ ಕೇಳಿದ್ದೇವೆ, ಸಿಎಂ ಬ್ಯುಸಿ ಇದ್ದಾರೆ
ಈ ಬಗ್ಗೆ “ಉದಯವಾಣಿ’ ಜತೆಗೆ ಮಾತನಾಡಿದ ಜಯಪ್ರಕಾಶ್ ಹೆಗ್ಡೆ, ವರದಿ ಅಂತಿಮಗೊಂಡಿದ್ದು, ಸಲ್ಲಿಕೆಗಾಗಿ ಮುಖ್ಯಮಂತ್ರಿಯಲ್ಲಿ ಸಮಯ ಕೇಳಿದ್ದೇವೆ, ಬಜೆಟ್ ಸಿದ್ಧತೆಯಲ್ಲಿ ಅವರು ವ್ಯಸ್ತರಾಗಿದ್ದಾರೆ. ಸರಕಾರಕ್ಕೆ ನಾವು ವರದಿ ಕೊಡಲಿದ್ದು, ಆ ವರದಿಯನ್ನು ಸರಕಾರ ಸಚಿವ ಸಂಪುಟದ ಮುಂದಿಡಲಿದೆ. ವರದಿ ಕೊಡುವುದು ಮಾತ್ರ ನಮ್ಮ ಕೆಲಸ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !