Caste Census Report: ಇಂದು ಸಿಎಂಗೆ ಸಲ್ಲಿಕೆ


Team Udayavani, Feb 29, 2024, 7:20 AM IST

cm

ಬೆಂಗಳೂರು: ಸರಕಾರದ ಮಹತ್ವಾಕಾಂಕ್ಷಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ವರದಿ ಸಲ್ಲಿಕೆಗೆ ಕೊನೆಗೂ ಮುಹೂರ್ತ ಕೂಡಿ ಬಂದಿದೆ. ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ
ಜಯಪ್ರಕಾಶ ಹೆಗ್ಡೆ ಈ ಬಗ್ಗೆ ಪ್ರತಿ ಕ್ರಿಯೆ ನೀಡಿ ಗುರುವಾರವೇ ವರದಿ ಯನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಸಲಾಗುತ್ತದೆ ಎಂದಿದ್ದಾರೆ. ಲೋಕ ಸಭೆ ಚುನಾವಣೆ ಘೋಷಣೆಯಾಗುವ ಸನಿಹದಲ್ಲಿಯೇ ಈ ಬೆಳವಣಿಗೆ ನಡೆಯ ಲಿರುವುದು ಮಹತ್ವ ಪಡೆದಿದೆ.

“ಉದಯವಾಣಿ’ ಜತೆ ಮಾತನಾಡಿದ ಜಯಪ್ರಕಾಶ್‌ ಹೆಗ್ಡೆ, ಸರಕಾರ ನಿಗದಿಪಡಿಸಿದ ಅವಧಿಯಲ್ಲಿ ವರದಿ ಸಿದ್ಧಪಡಿಸಲಾಗಿದೆ. ಗುರು ವಾರ ಮುಖ್ಯಮಂತ್ರಿಗೆ ಅದನ್ನು ಸಲ್ಲಿಸಲಾಗುತ್ತದೆ.

ಇದರೊಂದಿಗೆ ಆಯೋಗದ ಪ್ರಮುಖ ಜವಾಬ್ದಾರಿಯೊಂದು ಪೂರ್ಣಗೊಂಡಂತಾಗಲಿದೆ’ ಎಂದರು.
ಫೆ. 29ರಂದು ಆಯೋಗದ ಅವಧಿ ಪೂರ್ಣಗೊಳ್ಳಲಿದೆ. ಅದೇ ದಿನ ವರದಿ ಸಲ್ಲಿಕೆಗೂ ಕಾಲ ಕೂಡಿಬಂದಿದೆ. ಸದಸ್ಯ ಕಾರ್ಯದರ್ಶಿ ಸಹಿತ ಎಲ್ಲರೂ ಸಹಿ ಮಾಡಿದ್ದು, ಮುದ್ರಣಗೊಂಡ ವರದಿಯ ಪ್ರತಿಯನ್ನು ಈಗಾಗಲೇ ಪ್ಯಾಕಿಂಗ್‌ ಕೂಡ ಮಾಡಲಾಗಿದೆ. ವರದಿ ಸಲ್ಲಿಕೆ ಅನಂತರ ಅದನ್ನು ಸ್ವೀಕರಿಸುವುದು, ಬಿಡುವುದು ಸರಕಾರಕ್ಕೆ ಬಿಟ್ಟಿದ್ದು. ಕಾಂತರಾಜ ಆಯೋಗ ನೀಡಿದ ದತ್ತಾಂಶಗಳನ್ನು ಆಧರಿಸಿಯೇ ವರದಿ ಸಿದ್ಧಪಡಿಸಲಾಗಿದ್ದು, ಹಲವು ಮಹತ್ವದ ಅಂಶಗಳನ್ನು ಇದು ಒಳಗೊಂಡಿದೆ ಎಂದು ಆಯೋಗದ ಮೂಲಗಳು ತಿಳಿಸಿವೆ.

ಮುಂದೇನು?
ವರದಿ ಕೈಸೇರಿದ ತತ್‌ಕ್ಷಣ ಕುತೂಹಲಕ್ಕೆ ತೆರೆಬೀಳುತ್ತದೆ ಎಂದಲ್ಲ. ಯಾಕೆಂದರೆ ಆ ವರದಿಯನ್ನು ಸ್ವೀಕರಿಸಿದ ಸರಕಾರ ಅದರ ಕೂಲಂಕಷ ಪರಿಶೀಲನೆಗೆ ಉಪಸಮಿತಿ ರಚಿಸಬಹುದು. ಆ ವರದಿ ಮೇಲೊಂದು ತಜ್ಞರ ವರದಿ ಕೇಳಬಹುದು. ಸಚಿವ ಸಂಪುಟದಲ್ಲಿ ಈ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಬಹುದು ಅಥವಾ ವಿಧಾನಸಭೆಯಲ್ಲಿ ಮಂಡಿಸುವುದಾಗಿ ಹೇಳಬಹುದು. ಇದಾದ ಮೇಲೆ ವರದಿ ಬಿಡುಗಡೆ ಮಾಡಲು ತೀರ್ಮಾನಿಸಲಿದೆ. ಅನಂತರ ಅದನ್ನು ವಿವಿಧ ಕಾರ್ಯಕ್ರಮಗಳ ಉದ್ದೇಶಕ್ಕೆ ಬಳಸಬಹುದು. ಇದೆಲ್ಲದಕ್ಕೂ ಸ್ವಲ್ಪ ಸಮಯ ಹಿಡಿಯುತ್ತದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದರು.

ವೀರಶೈವ-ಲಿಂಗಾಯತ ಹಾಗೂ ಒಕ್ಕಲಿಗರು ಜಾತಿ ಗಣತಿ ವರದಿ ಬಿಡುಗಡೆಗೆ ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದರೆ, ಹಿಂದುಳಿದ ವರ್ಗಗಳಿಗೆ ಸೇರಿದ ಅನೇಕ ಸಮುದಾಯಗಳು ವರದಿ ಸ್ವೀಕರಿಸಬೇಕೆಂದು ಸರಕಾರದ ಮೇಲೆ ಒತ್ತಡ ಹೇರಿದ್ದವು. ಇವೆಲ್ಲದರ ನಡುವೆ ಅಂತಿಮವಾಗಿ ಗುರುವಾರ ಆಯೋಗವು ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ಮುಂದಿನ ಬೆಳವಣಿಗೆಗಳು ಸಾಕಷ್ಟು ಕುತೂಹಲ ಕೆರಳಿಸಿವೆ.

ಟಾಪ್ ನ್ಯೂಸ್

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

SSLC Results: ಮೇ ಎರಡನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಫ‌ಲಿತಾಂಶ ಪ್ರಕಟ?

SSLC Results: ಮೇ ಎರಡನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಫ‌ಲಿತಾಂಶ ಪ್ರಕಟ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.