Odisha ದಲ್ಲೂ ಜಾತಿ ಗಣತಿ ವರದಿ ರಿಲೀಸ್‌?- ಸದ್ಯದಲ್ಲೇ ವರದಿ ಬಹಿರಂಗ ಎಂದ ಸರ್ಕಾರದ ಮೂಲಗಳು


Team Udayavani, Oct 4, 2023, 9:09 PM IST

CENSUS 2

ನವದೆಹಲಿ/ಭುವನೇಶ್ವರ: ಬಿಹಾರದ ಜಾತಿಗಣತಿ ವರದಿಯು ದೇಶಾದ್ಯಂತ ಸಂಚಲನ ಮೂಡಿಸಿರುವಂತೆಯೇ ಈಗ ಒಡಿಶಾ ಸರ್ಕಾರ ಕೂಡ ತನ್ನ ಹಿಂದುಳಿದ ವರ್ಗಗಳ ಸಮೀಕ್ಷಾ ವರದಿಯನ್ನು ಬಿಡುಗಡೆ ಮಾಡಲು ಚಿಂತನೆ ನಡೆಸಿದೆ.

ಪ್ರಸಕ್ತ ವರ್ಷದ ಮೇ ತಿಂಗಳಿಂದ ಜುಲೈವರೆಗಿನ ಅವಧಿಯಲ್ಲಿ ಸಮೀಕ್ಷೆ ನಡೆಸಿರುವ ಒಡಿಶಾ ರಾಜ್ಯ ಹಿಂದುಳಿದ ವರ್ಗಗಳ ಆಯೋಗ, ಇತ್ತೀಚೆಗಷ್ಟೇ ರಾಜ್ಯ ಸರ್ಕಾರಕ್ಕೆ ತನ್ನ ವರದಿಯನ್ನು ಸಲ್ಲಿಸಿದೆ. ರಾಜ್ಯದ ಒಟ್ಟಾರೆ 4.7 ಕೋಟಿ ಜನಸಂಖ್ಯೆಯ ಪೈಕಿ ಶೇ.42ರಷ್ಟು ಮಂದಿ 208 ಹಿಂದುಳಿದ ವರ್ಗಗಳಿಗೆ ಸೇರಿದವರು ಎಂದು ಮೂಲಗಳು ತಿಳಿಸಿವೆ. ಸದ್ಯದಲ್ಲೇ ಸರ್ಕಾರವು ಈ ವರದಿಯನ್ನು ಬಹಿರಂಗಪಡಿಸಲಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ತಜ್ಞರು ವರದಿಯಲ್ಲಿನ ದತ್ತಾಂಶಗಳನ್ನು ವಿಶ್ಲೇಷಿಸುತ್ತಿದ್ದಾರೆ. ಈ ಪ್ರಕ್ರಿಯೆ ಮುಗಿದ ಬಳಿಕ ವರದಿಯನ್ನು ಬಿಡುಗಡೆ ಮಾಡಲಾಗುತ್ತದೆ. ಒಬಿಸಿಗಳು ಎಷ್ಟಿದ್ದಾರೆ ಎಂಬುದನ್ನು ಅರಿತು, ಅವರಿಗೆ ಅನುಕೂಲತೆ ಕಲ್ಪಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಬಿಜೆಡಿ ಹಿರಿಯ ಶಾಸಕ ಮತ್ತು ಮಾಜಿ ಸಚಿವ ದೇಬಿ ಪ್ರಸಾದ್‌ ಮಿಶ್ರಾ ಹೇಳಿದ್ದಾರೆ.

ತಂದೆ-ಮಗನ ತದ್ವಿರುದ್ಧ ನಿಲುವು:
ಜಾತಿಗಣತಿ ವರದಿಯ ವಿಚಾರದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ಗಾಂಧಿ ಅವರು ತಮ್ಮ ತಂದೆಯವರಾದ ದಿವಂಗತ ರಾಜೀವ್‌ಗಾಂಧಿ ಅವರಿಗಿಂತ ಭಿನ್ನ ನಿಲುವು ಹೊಂದಿರುವುದು ಅವರ ಇತ್ತೀಚೆಗಿನ ಹೇಳಿಕೆಯಿಂದ ಸ್ಪಷ್ಟವಾಗಿದೆ. ಜಾತಿ ಗಣತಿಯ ಪರ ಮಾತನಾಡಿರುವ ರಾಹುಲ್‌, “ಜನಸಂಖ್ಯೆ ಆಧರಿಸಿ ಹಕ್ಕುಗಳನ್ನು ನೀಡಬೇಕು’ ಎಂದು ಒತ್ತಾಯಿಸಲು ಆರಂಭಿಸಿದ್ದಾರೆ. ಆದರೆ, ಅವರ ತಂದೆ, ಮಾಜಿ ಪ್ರಧಾನಿ ರಾಜೀವ್‌ ಗಾಂಧಿಯವರು 1990ರಲ್ಲಿ ಪ್ರತಿಪಕ್ಷದ ನಾಯಕರಾಗಿದ್ದಾಗ ಸಂಸತ್‌ನಲ್ಲೇ “ಜಾತಿರಹಿತ ಸಮಾಜ’ದ ಕನಸಿನ ಬಗ್ಗೆ ಮಾತನಾಡಿದ್ದರು. ಅಲ್ಲದೇ, ಮಂಡಲ್‌ ಆಯೋಗದ ವರದಿಯೊಂದಿಗೆ ಪ್ರಧಾನಮಂತ್ರಿ ವಿ.ಪಿ.ಸಿಂಗ್‌ ಅವರು ದೇಶವನ್ನು ಜಾತಿಗಳ ನಡುವಿನ ಯುದ್ಧಕ್ಕೆ ಅಣಿಯಾಗಿಸುತ್ತಿದ್ದಾರೆ. ಈ ಸರ್ಕಾರವು ಜಾತಿಯ ಸುತ್ತಲೂ ಗಿರಕಿ ಹೊಡೆಯುತ್ತಿರುವುದು ಅತ್ಯಂತ ದುರದೃಷ್ಟಕರ ಸಂಗತಿ. ಸಮಾಜದಲ್ಲಿ ವಿಭಜನೆ ತರುವ ಯತ್ನವಿದು ಎಂದೂ ಆರೋಪಿಸಿದ್ದರು.

ಅಲ್ಲದೆ, ಅದಕ್ಕೂ ಮೊದಲು 1980ರಲ್ಲಿ ಇಂದಿರಾ ಗಾಂಧಿಯವರ ನೇತೃತ್ವದ ಕಾಂಗ್ರೆಸ್‌ ಪಕ್ಷವು “ನಾ ಜಾತ್‌ ಪರ್‌, ನಾ ಪಥ್‌ ಪರ್‌'(ಜಾತಿ ಅಥವಾ ಪಂಗಡದ ಹಂಗಿಲ್ಲದೆ) ಎಂಬ ಸ್ಲೋಗನ್‌ ಮೂಲಕ ಜಾತಿರಹಿತ ಸಮಾಜದ ಕನಸು ಕಂಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಜಾತಿ ಗಣತಿಯಿಂದ ಅಭಿವೃದ್ಧಿ ಕಾರ್ಯಗಳಿಗೆ ನೆರವು: ಖರ್ಗೆ 
ದೇಶದಲ್ಲಿ ಜಾತಿ ಗಣತಿ ನಡೆಸುವುದರಿಂದ ಹಿಂದುಳಿದ ವರ್ಗದವರು ಎಷ್ಟು ಪ್ರಮಾಣದಲ್ಲಿ ಇದ್ದಾರೆ, ಅವರಿಗೆ ಯಾವ ರೀತಿ ಅಭಿವೃದ್ಧಿ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸಲು ನೆರವಾಗುತ್ತದೆ. ಹೀಗೆಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಛತ್ತೀಸ್‌ಗಢದ ಕೊಡತರಾರಿ ಎಂಬಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಇದೇ ಕಾರಣಕ್ಕಾಗಿಯೇ ನಮ್ಮ ಪಕ್ಷ ದೇಶಾದ್ಯಂತ ಜಾತಿ ಗಣತಿ ನಡೆಸುವುದಕ್ಕೆ ಒತ್ತಾಯಿಸುತ್ತಿದೆ ಎಂದರು. ಕಾಂಗ್ರೆಸ್‌ ಹಿಂದೂಗಳನ್ನು ವಿಭಜಿಸುತ್ತಿದೆ ಎಂಬ ಪ್ರಧಾನಿ ಮೋದಿ ಆರೋಪಕ್ಕೆ ಕ್ರುದ್ಧರಾದ ಖರ್ಗೆ, ಮಹಿಳೆಯರ ಅಭ್ಯುದಯದ ಬಗ್ಗೆ ಬಿಜೆಪಿಗೆ ನಿಜವಾಗಿಯೂ ಕಾಳಜಿ ಇದ್ದರೆ ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರಿಗೆ ಸ್ಥಾನಗಳನ್ನು ಮೀಸಲಾಗಿ ಇರುವ ಕಾಯ್ದೆಯನ್ನು ತಕ್ಷಣವೇ ಜಾರಿಗೆ ತರಬೇಕು ಎಂದು ಸವಾಲು ಹಾಕಿದ್ದಾರೆ. ಜನಸಂಘ ಅಥವಾ ಬಿಜೆಪಿ, ಆರ್‌ಎಸ್‌ಎಸ್‌ ಯಾವತ್ತೂ ಮಹಿಳೆಯರ ವಿರೋಧಿಯೇ ಎಂದು ಹೇಳಿದ್ದಾರೆ ಖರ್ಗೆ.

ಸುಳ್ಳುಗಳ ಸರದಾರ:
ಪ್ರಧಾನಿಯವರನ್ನು ಸುಳ್ಳುಗಳ ಸರದಾರ ಎಂದು ಟೀಕಿಸಿದ ಖರ್ಗೆ, ಛತ್ತೀಸ್‌ಗಢ ಸರ್ಕಾರ ಸಗಣಿ ಮಾರಾಟದಲ್ಲೂ ಭ್ರಷ್ಟಾಚಾರ ಎಸಗುತ್ತಿದೆ ಎಂದು ದೂರಿದ್ದರು. ಬಿಜೆಪಿಯೇ ಗೋವುಗಳ ಹೆಸರಿನಲ್ಲಿ ಭ್ರಷ್ಟಾಚಾರ ನಡೆಸಿದೆ ಎಂದು ತಿರುಗೇಟು ನೀಡಿದ್ದಾರೆ.

ಶೀಘ್ರ ಪ್ರಕಟ:
ಕರ್ನಾಟಕದಲ್ಲಿ ನಡೆಸಲಾಗಿದ್ದ ಸಾಮಾಜಿಕ ಮತ್ತು ಆರ್ಥಿಕ ಗಣತಿ ವರದಿ ಸಿದ್ಧಗೊಂಡಿದೆ. ಅದನ್ನು ಶೀಘ್ರದಲ್ಲಿಯೇ ಬಹಿರಂಗಪಡಿಸಲಾಗುತ್ತದೆ ಎಂದು ಖರ್ಗೆ ಪ್ರಕಟಿಸಿದ್ದಾರೆ.

ಟಾಪ್ ನ್ಯೂಸ್

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.