ಲಾಕ್ ಸಡಿಲಿಸುವಾಗ ಎಚ್ಚರವಿರಲಿ: ಸಿದ್ದು
Team Udayavani, May 2, 2020, 5:55 AM IST
ಬೆಂಗಳೂರು: ಲಾಕ್ಡೌನ್ ಸಡಿಲ ಮಾಡುವಾಗ ಎಚ್ಚರಿಕೆಯ ಹೆಜ್ಜೆ ಇಡಬೇಕು ಎಂದು ವಿಧಾನಸಭೆಯ ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಪತ್ರಕರ್ತರ ಜತೆ ಮಾತನಾಡಿ, ಆರ್ಥಿಕ ಚಟುವಟಿಕೆಗಳು ರಾಜ್ಯದಲ್ಲಿ ಗರಿಗೆದರಬೇಕಾದರೆ ಲಾಕ್ಡೌನ್ ಸಡಿಲಿಕೆ ಅನಿವಾರ್ಯ. ಆದರೆ ಈ ವಿಷಯದಲ್ಲಿ ಸರಕಾರ ವಿವೇಚನೆಯಿಂದ ತೀರ್ಮಾನ ಕೈಗೊಳ್ಳಬೇಕು ಎಂದರು.ರಾಜ್ಯದಲ್ಲಿ ಆರ್ಥಿಕ ಚಟುವಟಿಕೆ ಪುನರಾರಂಭವಾಗದಿದ್ದರೆ ಸರಕಾರಿ ನೌಕರರಿಗೆ ವೇತನ ನೀಡಲೂ ಆಗದಂಥ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಹೀಗಾಗಿ ಲಾಕ್ಡೌನ್ ಸಡಿಲಿಕೆ ಅನಿವಾರ್ಯ.
ಆದರೆ ಕಂಟೈನ್ಮೆಂಟ್ ವಲಯದಲ್ಲಿ ಲಾಕ್ಡೌನ್ ಸಡಿಲಿಕೆ ಮಾಡಬಾರದು. ಕಿತ್ತಳೆ ಮತ್ತು ಹಸುರು ವಲಯದಲ್ಲಿ ಸಡಿಲಿಕೆ ಮಾಡಿ ವಹಿವಾಟಿಗೆ ಅವಕಾಶ ಕೊಡಬೇಕು ಎಂದು ಸಿದ್ದರಾಮಯ್ಯ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು