ಸಿಬಿಐ Vs ಸ್ಟೇಟ್ಸ್‌


Team Udayavani, Nov 12, 2021, 3:18 AM IST

ಸಿಬಿಐ Vs ಸ್ಟೇಟ್ಸ್‌

ಸಿಬಿಐಗೆ ನೀಡಲಾಗಿದ್ದ “ಸಾಮಾನ್ಯ ಒಪ್ಪಿಗೆ’ಯನ್ನು ದೇಶದ ಕೆಲವು ರಾಜ್ಯಗಳು ಹಿಂಪಡೆದಿದ್ದು, ಇದರ ವಿರುದ್ಧ ಸಿಬಿಐ ಸುಪ್ರೀಂ ಕೋರ್ಟ್‌ಗೆ ಹೋಗಿದೆ. ಸರ್ವೋಚ್ಚ ನ್ಯಾಯಾಲಯವೂ ಈ ಬಗ್ಗೆ ವಿಚಾರಣೆ ನಡೆಸಿದ್ದು, ಇದೊಂದು ಗಂಭೀರವಾದ ಬೆಳವಣಿಗೆ ಎಂದಿದೆ. ಹಾಗಾದರೆ, ಈ ಜನರಲ್‌ ಕನ್ಸೆಂಟ್‌ ಅಥವಾ ಸಾಮಾನ್ಯ ಒಪ್ಪಿಗೆ ಎಂದರೇನು? ರಾಜ್ಯಗಳೇಕೆ ಸಾಮಾನ್ಯ ಒಪ್ಪಿಗೆ ಹಿಂಪಡೆದಿವೆ?

ಜನರಲ್‌ ಕನ್ಸೆಂಟ್‌ ಎಂದರೇನು?
ಸಿಬಿಐನ ಮುಖ್ಯ ಕಚೇರಿ ದಿಲ್ಲಿಯಲ್ಲಿದ್ದು, ಇದು ದಿಲ್ಲಿ ವಿಶೇಷ ಪೊಲೀಸ್‌ ಕಾಯ್ದೆಯಡಿಯಲ್ಲಿ ಆಡಳಿತ ನಿರ್ವಹಣೆ ಮಾಡುತ್ತಿದೆ. ಹೀಗಾಗಿ ದಿಲ್ಲಿ ಬಿಟ್ಟು ಉಳಿದೆಡೆ ಯಾವುದೇ ಪ್ರಕರ

ಣದ ತನಿಖೆ ನಡೆಸಬೇಕು ಎಂದರೂ ಸಿಬಿಐ ಆ ರಾಜ್ಯದ ಒಪ್ಪಿಗೆ ಪಡೆಯಲೇಬೇಕು. ಸಿಬಿಐ ರಚನೆಯಾದಾಗಿನಿಂದಲೂ ಬಹುತೇಕ ಎಲ್ಲ ರಾಜ್ಯಗಳು ತನಿಖೆಗಾಗಿ ಜನರಲ್‌ ಕನ್ಸೆಂಟ್‌ ಅನ್ನು ನೀಡಿದ್ದವು. ಇತ್ತೀಚೆಗೆ ಎಂದರೆ 2-3 ವರ್ಷಗಳಿಂದ 8 ಬಿಜೆಪಿಯೇತರ ರಾಜ್ಯಗಳು ಈ ಸಾಮಾನ್ಯ ಒಪ್ಪಿಗೆಯನ್ನು ವಾಪಸ್‌ ಪಡೆದಿವೆ.

ಸಾಮಾನ್ಯ ಒಪ್ಪಿಗೆ ಹಿಂಪಡೆದಿರುವ ರಾಜ್ಯಗಳು ಯಾವುವು?
ಮಹಾರಾಷ್ಟ್ರ, ಪಂಜಾಬ್‌, ರಾಜಸ್ಥಾನ, ಪಶ್ಚಿಮ ಬಂಗಾಲ, ಝಾರ್ಖಂಡ್‌, ಛತ್ತೀಸ್‌ಗಢ, ಕೇರಳ ಮತ್ತು ಮಿಜೋರಾಂ. ಇವುಗಳಲ್ಲಿ 2015ರಲ್ಲೇ ಮಿಜೋರಾಂ ರಾಜ್ಯವು ಸಿಬಿಐಗೆ ನೀಡಿದ್ದ ಸಾಮಾನ್ಯ ಒಪ್ಪಿಗೆ ಹಿಂಪಡೆದಿತ್ತು. 2018ರಲ್ಲಿ ಉಳಿದ ರಾಜ್ಯಗಳು ಸಾಮಾನ್ಯ ಒಪ್ಪಿಗೆ ಹಿಂಪಡೆದಿವೆ.

ಸಾಮಾನ್ಯ ಒಪ್ಪಿಗೆ ಹಿಂಪಡೆದಿರುವುದಕ್ಕೆ ಕಾರಣವೇನು?
ಕೇಂದ್ರ ಸರಕಾರ, ತನಿಖಾ ಸಂಸ್ಥೆಗಳನ್ನು ರಾಜಕೀಯ ಕಾರಣಕ್ಕಾಗಿ ಬಳಸಿಕೊಳ್ಳುತ್ತಿದೆ. ವಿಪಕ್ಷ ನಾಯಕರು ಮತ್ತು ಬಿಜೆಪಿಯೇತರ ರಾಜ್ಯಗಳಲ್ಲಿನ ಅಧಿಕಾರಿಗಳನ್ನು ಟಾರ್ಗೆಟ್‌ ಮಾಡಿಕೊಂಡು ದಾಳಿ, ನಡೆಸಿ ಅವರನ್ನು ಬಂಧಿಸಿ ಸಿಲುಕಿಸುತ್ತಿದೆ. ಹೀಗಾಗಿ ಸಿಬಿಐಗೆ ನೀಡಿದ್ದ ಜನರಲ್‌ ಕನ್ಸೆಂಟ್‌ ವಾಪಸ್‌ ಪಡೆದಿದ್ದೇವೆ ಎಂಬುದು ಈ ರಾಜ್ಯಗಳ ಹೇಳಿಕೆ.

ಆಗಿರುವ ಸಮಸ್ಯೆ ಏನು?
ಇತ್ತೀಚೆಗಷ್ಟೇ ಸುಪ್ರೀಂ ಕೋರ್ಟ್‌ನಲ್ಲಿ ಸಿಬಿಐ, ರಾಜ್ಯಗಳು ಸಾಮಾನ್ಯ ಒಪ್ಪಿಗೆ ಹಿಂಪಡೆದಿರುವುದರಿಂದ ಶೇ.70ರಷ್ಟು ಕೇಸುಗಳು ಪೆಂಡಿಂಗ್‌ ಆಗಿವೆ ಎಂದಿದೆ. 2018ರಿಂದ ಇಲ್ಲಿವರೆಗೆ ಈ 8 ರಾಜ್ಯಗಳಿಗೆ 150 ಮನವಿಗಳನ್ನು ಕಳುಹಿಸಲಾಗಿದೆ. ಇದುವರೆಗೂ ಈ ರಾಜ್ಯಗಳು ಶೇ.30 ಕೇಸುಗಳ ವಿಚಾರಣೆಗೆ ಒಪ್ಪಿಗೆ ನೀಡಿವೆ ಎಂದಿತ್ತು. ಏಕೆಂದರೆ ಈ ರಾಜ್ಯಗಳಲ್ಲಿ ಯಾವುದೇ ಭ್ರಷ್ಟ ಅಧಿಕಾರಿ ಅಥವಾ ರಾಜಕಾರಣಿ ಕುರಿತಂತೆ ತನಿಖೆ ನಡೆಸಬೇಕಾದರೆ ಇವುಗಳ ಒಪ್ಪಿಗೆ ಬೇಕೇಬೇಕು.

ಕೇಂದ್ರ ಸರಕಾರಿ ನೌಕರರ ವಿರುದ್ಧ ತನಿಖೆ ನಡೆಸಬಹುದೇ?
ಇತ್ತೀಚೆಗಷ್ಟೇ ಕಲ್ಕತ್ತಾ ಹೈಕೋರ್ಟ್‌ ತೀರ್ಪೊಂದನ್ನು ನೀಡಿದ್ದು, ಕೇಂದ್ರ ಸರಕಾರಿ ನೌಕರಿಯಲ್ಲಿ ಇರುವ ಅಧಿಕಾರಿಗಳ ವಿರುದ್ಧದ ಭ್ರಷ್ಟಾಚಾರ ಆರೋಪಗಳ ಬಗ್ಗೆ ತನಿಖೆ ನಡೆಸಬೇಕಾದರೆ, ಸಿಬಿಐಗೆ ಆಯಾ ರಾಜ್ಯಗಳ ಒಪ್ಪಿಗೆ ಬೇಕಿಲ್ಲ ಎಂದು ಹೇಳಿದೆ. ಸದ್ಯ ಈ ತೀರ್ಪು ಪ್ರಶ್ನಿಸಿ ಪಶ್ಚಿಮ ಬಂಗಾಲ ಸರಕಾರ ಸುಪ್ರೀಂ ಕೋರ್ಟ್‌ಗೆ ಹೋಗಿದೆ. ಇನ್ನೂ ತೀರ್ಪು ಬಂದಿಲ್ಲ. ಸದ್ಯ ಇದನ್ನೇ ದಾಳವಾಗಿ ಇರಿಸಿಕೊಂಡು ಸಿಬಿಐ ಕೇಂದ್ರ ಸರಕಾರದ ವ್ಯಾಪ್ತಿಯಲ್ಲಿ ಬರುವ ಅಧಿಕಾರಿಗಳ ವಿರುದ್ಧದ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದೆ.

ಟಾಪ್ ನ್ಯೂಸ್

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.