80 ಕೋಟಿ ಮೌಲ್ಯದ ಅಂಬರ್‌ಗ್ರೀಸ್‌ ವಶ

ತಿಮಿಂಗಲದ ಅಂಬರ್‌ಗ್ರೀಸ್‌ ಮಾರಾಟಕ್ಕೆ ಸಿದ್ಧತೆ ನಡೆಸಿದ್ದ ಐವರ ಬಂಧನ

Team Udayavani, Aug 11, 2021, 2:39 PM IST

80 ಕೋಟಿ ಮೌಲ್ಯದ ಅಂಬರ್‌ಗ್ರೀಸ್‌ ವಶ

ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಇದೇ ಮೊದಲ ಬಾರಿಗೆ ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಅಪಾರ ಬೇಡಿಕೆ ಇರುವ ಸುಮಾರು 80 ಕೋಟಿ ರೂ. ಮೌಲ್ಯದ ತಿಮಿಂಗಲದ ವಾಂತಿ ಅಥವಾ ವೀರ್ಯ (ಅಂಬರ್‌ಗ್ರೀಸ್‌) ಮತ್ತು ಪ್ರಾಚೀನ ಕಾಲದ ವಸ್ತುಗಳನ್ನು ಅಕ್ರಮವಾಗಿ ಸಂಗ್ರಹಿಸಿಕೊಂಡು ದೇಶ-ವಿದೇಶದಲ್ಲಿ ಮಾರಾಟಕ್ಕೆ ಸಿದ್ಧತೆ ನಡೆಸಿದ್ದ ರಾಯಚೂರು ಮೂಲದ ಓರ್ವ ಸೇರಿ ಐವರು ಆರೋಪಿಗಳನ್ನು ಕೇಂದ್ರ ಅಪರಾಧ ವಿಭಾಗ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಮಜೀಬ್‌ ಪಾಷ (48), ಮೊಹಮ್ಮದ್‌ ಮುನ್ನಾ (45), ಗುಲಾಬ್‌ ಚಂದ್‌ (40), ಸಂತೋಷ್‌ (31) ಮತ್ತು ರಾಯಚೂರಿನ ಜಗನ್ನಾಥಾಚಾರ್‌ (52) ಬಂಧಿತರು.

80 ಕೋಟಿ ಮೌಲ್ಯದ 80 ಕೆಜಿ ಅಂಬರ್‌ಗ್ರೀಸ್‌ ಗಟ್ಟಿ, ಎರಡು ಬ್ರಿಟಿಷ್‌ ಈಸ್ಟ್‌ ಇಂಡಿಯಾ ಕಂಪನಿ ಕಾಲ ದ ರೆಡ್‌ ಮರ್ಕ್ನೂರಿಯ ತಾಮ್ರದ ಬಾಟಲ್‌ ಗಳು, 1818ರ ಕಾಲದ ಸ್ಟೀಮ್‌ ಫ್ಯಾನ್‌ ಸೇರಿ ವಿವಿಧ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಅಂಬರ್‌ಗ್ರೀಸ್‌ ಎಂಬ ವಸ್ತು ತಿಮಿಂಗಲದ ತ್ಯಾಜ್ಯ (ವಾಂತಿ ಅಥವಾ ವೀರ್ಯ) ಆಗಿದ್ದು, ಅದನ್ನು ಸುಗಂಧ ದ್ರವ್ಯ, ಔಷಧ ತಯಾರಿಕೆಯಲ್ಲಿ ಬಳ ಸಲಾಗುತ್ತದೆ. ಹೀಗಾಗಿ ಭಾರತದ ಕೆಲವೆಡೆ ಮತ್ತು ಅರಬ್‌, ಚೀನಾ, ಪಾಶ್ಚಿಮಾತ್ಯ ದೇಶಗಳಲ್ಲಿ ಈ ವಸ್ತುವಿಗೆ ಭಾರೀ ಬೇಡಿಕೆಯಿದೆ. ಪ್ರತಿ ಕೆ.ಜಿಗೆ ಕೋಟಿಗಟ್ಟಲೇ ಬೆಲೆ ನಿಗದಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಇತ್ತೀಚೆಗೆ ಆರೋಪಿಗಳು ಬಾಗಲಗುಂಟೆ ಪೊಲೀಸ್‌ ಠಾಣೆ ವ್ಯಾಪ್ತಿಯ ಆರ್‌ಎಂಕೆ ಎಂಟರ್‌ಪ್ರೈಸಸ್‌ನಲ್ಲಿ ಅಂಬರ್‌ಗ್ರೀಸ್‌ ಗಟ್ಟಿ ಹಾಗೂ ಪ್ರಾಚೀನ ಕಾಲದ ವಸ್ತುಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದಾರೆ. ಜತೆಗೆ ಅಂಬರ್‌ಗ್ರೀಸ್‌ ಗಟ್ಟಿಯನ್ನು ಅಂತಾರಾಷ್ಟ್ರಿಯ ಮಟ್ಟದ ವ್ಯಕ್ತಿಗಳಿಗೆ ಮಾರಾಟಕ್ಕೆ ಸಿದ್ಧತೆ ನಡೆಸಿದ್ದಾರೆ ಎಂಬ ಮಾಹಿತಿ ಮೇರೆಗೆ ದಾಳಿ ನಡೆಸಿ ಬಂಧಿಸಲಾಗಿದೆ ಎಂದರು.

ಈ ಪ್ರಕರಣದ ಪ್ರಮುಖ ಆರೋಪಿ ಪರಾರಿಯಾಗಿದ್ದು, ಈತ ಸೆರೆ ಸಿಕ್ಕಿದರೆ ಈ ಅಂಬರ್‌ಗ್ರೀಸ್‌ ಗಟ್ಟಿಯನ್ನು ಎಲ್ಲಿಂದ ತರಲಾಗಿದೆ. ಎಲ್ಲಿಗೆ ಸಾಗಿಸಲಾಗುತ್ತದೆ ಎಂಬುದು ಪತ್ತೆಯಾಗಲಿದೆ ಎಂದು ಕಮಲ್‌ ಪಂತ್‌ ಹೇಳಿದರು.

ಇದನ್ನೂ ಓದಿ:ಅಂಬ್ರಿ ಇಂಕ್. ನೊಂದಿಗೆ 1,071 ಕೋಟಿ ರೂಪಾಯಿ ಹೂಡಿಕೆ ಮಾಡಲಿರುವ RNESL

ಜೂನ್‌.9ರಂದು ಕೆ.ಜಿ.ಹಳ್ಳಿ ಪೊಲೀಸರು ಆತನ ಸೂಚನೆ ಮೇರೆಗೆ ತಮ್ಮ ಠಾಣಾ ವ್ಯಾಪ್ತಿಯ ಎಂಆರ್‌ಕೆ ಟೆಂಟ್‌ ಹೌಸ್‌ ಬಳಿಯ ಲಕ್ಷ್ಮೀಪತಿ ಗಾರ್ಡನ್‌ ತೆಂಗಿನ ತೋಟದ ಬಳಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದರು. ಈ ವೇಳೆ ಅವರಿಂದ ಎಂಟು ಕೋಟಿ ರೂ. ಮೌಲ್ಯದ 8 ಕೆ.ಜಿ. 700 ಗ್ರಾಂ ತೂಕದ ಅಂಬರ್‌ಗ್ರೀಸ್‌ ವಶಕ್ಕೆ ಪಡೆಯಲಾಗಿತ್ತು.

ಅಂಬರ್‌ಗ್ರೀಸ್‌ ದಂಧೆ
ಇತ್ತೀಚಿನ ದಿನಗಳಲ್ಲಿ ಅಂಬರ್‌ಗ್ರೀಸ್‌ ದಂಧೆ ದಿನೇದಿನೆ ಹೆಚ್ಚಾಗುತ್ತಿದೆ.ಎರಡು ತಿಂಗಳ ಹಿಂದೆ ಕೆ.ಜಿ.ಹಳ್ಳಿ ವ್ಯಾಪ್ತಿಯಲ್ಲಿ ನಾಲ್ವರು ಬಂಧಿಸಿ ಎಂಟು ಕೆ.ಜಿ.ಅಂಬರ್‌ ಗ್ರೀಸ್‌ ವಶಕ್ಕೆ ಪಡೆಯಲಾಗಿತ್ತು.ಇದೀಗ 80 ಕೆ.ಜಿ. ವಶಕ್ಕೆ ಪಡೆಯಲಾಗಿದೆ.ಈ ಸಂಬಂಧ ಈ ದಂಧೆ ಕೋರರ ಬಗ್ಗೆ ಗಂಭೀರವಾಗಿ ಪರಿಗಣಿಸಿದ್ದು, ನಿರಂತರ ಕಾರ್ಯಾಚರಣೆ ನಡೆಯಲಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಪರಿಶೀಲನೆ
ಮತ್ತೊಂದೆಡೆ ಆರೋಪಿಗಳಿಂದ ಪತ್ತೆಯಾಗಿರುವ ಬ್ರಿಟಿಷ್‌ ಈಸ್ಟ್‌ ಇಂಡಿಯಾ ಕಂಪನಿ ಕಾಲದ ಪ್ರಾಚೀನ ವಸ್ತುಗಳು, ಸ್ಟಿಮ್‌ ಫ್ಯಾನ್‌ಗಳ ಬಗ್ಗೆ ಪರಿಶೀಲಿಸಲಾಗುತ್ತಿದೆ. ಇದೇ ಮಾದರಿಯ ವಸ್ತುಗಳು ಆನ್‌ಲೈನ್‌ನ ಈ- ಕಾಮರ್ಸ್‌ನಲ್ಲಿ ಲಭ್ಯವಿರುವುದರಿಂದ ಅವುಗಳ ಬಗ್ಗೆ ಇತಿಹಾಸಕಾರರ ಸಲಹೆ ಪಡೆಯಬೇಕಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ

ಅಂಬರ್‌ಗ್ರೀಸ್‌ನ ವಿಶೇಷತೆ ಏನು?
ಅಂಬರ್‌ಗ್ರೀಸ್‌ ಎಂಬುದು ತಿಮಿಂಗಿಲದಿಂದ ಪಡೆದವೀರ್ಯ ಅಥವಾ ವಾಂತಿಯಾಗಿದ್ದು, ಘನ ಮೇಣದ ವಾಸನೆಯಿಂದ ಕೂಡಿರುತ್ತದೆ. ಈ ವಸ್ತುವನ್ನು ಸುಗಂಧ ದ್ರವ್ಯ ಮತ್ತು ಔಷಧಿ ತಯಾರಿಕೆಯಲ್ಲಿ ಬಳಸಲಾಗುತ್ತಿದೆ. ಅದಕ್ಕೆ ಅರಬ್‌, ಚೀನಾ ಮತ್ತು ಪಾಶ್ಚಿಮಾತ್ಯ ದೇಶಗಳಲ್ಲಿ ಅಪಾರ ಬೇಡಿಕೆ ಇದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತಿ ಕೆ.ಜಿ.ಗೆ ಸುಮಾರು ಒಂದು ಕೋಟಿರೂ.ಗೂ ಅಧಿಕ ಮೌಲ್ಯಯುಳ್ಳದಾಗಿದೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.