TTD: ದೇಸಿ ಹಸುಗಳ ಅಭಿವೃದ್ಧಿಗೆ ಉತ್ಕೃಷ್ಟತಾ ಕೇಂದ್ರ: ಟಿಟಿಡಿಯಿಂದ ಸ್ಥಾಪನೆ
ಶೀಘ್ರದಲ್ಲೇ ಎನ್ಡಿಡಿಬಿ ಸಹಯೋಗದಲ್ಲಿ
Team Udayavani, Oct 19, 2023, 8:52 PM IST
ತಿರುಪತಿ: ತಿರುಪತಿಯ ಎಸ್.ವಿ. ಗೋ ಸಂರಕ್ಷಣಾ ಶಾಲಾದಲ್ಲಿ ದೇಸಿ ಹಸುಗಳ ತಳಿ ಅಭಿವೃದ್ಧಿಗಾಗಿ ಉತ್ಕೃಷ್ಟತಾ ಕೇಂದ್ರವನ್ನು ಸ್ಥಾಪಿಸಲು ತಿರುಪತಿ ತಿರುಮಲ ದೇವಸ್ಥಾನಮ್ಸ್(ಟಿಟಿಡಿ) ನಿರ್ಧರಿಸಿದೆ.
ರಾಷ್ಟ್ರೀಯ ಹೈನುಗಾರಿಕೆ ಅಭಿವೃದ್ಧಿ ಮಂಡಳಿ(ಎನ್ಡಿಡಿಬಿ) ಮತ್ತು ಟಿಟಿಡಿ ಜಂಟಿಯಾಗಿ ಈ ಕೇಂದ್ರ ಸ್ಥಾಪಿಸಲಿದ್ದು, ಇದಕ್ಕೆ ಅಗತ್ಯವಿರುವ ನಿಧಿಯನ್ನು ರಾಷ್ಟ್ರೀಯ ಗೋಕುಲ್ ಯೋಜನೆಯನ್ವಯ ಒದಗಿಸಲಾಗುತ್ತದೆ ಎಂದು ಟಿಟಿಡಿ ಕಾರ್ಯಕಾರಿ ಅಧಿಕಾರಿ ಎ.ವಿ.ಧರ್ಮ ರೆಡ್ಡಿ ತಿಳಿಸಿದ್ದಾರೆ.
ಎನ್ಡಿಡಿಬಿ ಮತ್ತು ಎಸ್.ವಿ.ಪಶುವೈದ್ಯಕೀಯ ಕಾಲೇಜಿನ ಪ್ರೊಫೆಸರ್ಗಳೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿದ ರೆಡ್ಡಿ ಅವರು, ಮೀನುಗಾರಿಕೆ ಮತ್ತು ಹೈನುಗಾರಿಕೆ ಸಚಿವಾಲಯವು ದೇಶೀಯ ಹಸುಗಳ ಸಂರಕ್ಷಣೆ ಮತ್ತು ಈ ತಳಿಗಳ ಅಭಿವೃದ್ಧಿಗಾಗಿ 5 ವರ್ಷಗಳ ಅವಧಿಗೆ 46 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿರುವುದಾಗಿ ತಿಳಿಸಿದ್ದಾರೆ.
ಕೃತಕ ಗರ್ಭಧಾರಣೆ, ಭ್ರೂಣ ವರ್ಗಾವಣೆ ತಂತ್ರಜ್ಞಾನ ಮುಂತಾದ ಸುಧಾರಿತ ಸಂತಾನೋತ್ಪತ್ತಿ ವಿಧಾನಗಳು, ಗೋವುಗಳ ವಂಶವಾಹಿ ಸುಧಾರಣೆ ಪ್ರಕ್ರಿಯೆಗೆ ವೇಗ ನೀಡುವತ್ತ ಪ್ರಸ್ತಾವಿತ ಕೇಂದ್ರವು ಗಮನ ಹರಿಸಲಿದೆ ಎಂದೂ ಧರ್ಮ ರೆಡ್ಡಿ ತಿಳಿಸಿದ್ದಾರೆ.
ಟಿಟಿಡಿ ಈಗಾಗಲೇ ದೇಶೀಯ ಹಸುಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ. ವಿವಿಧ ದೇವಸ್ಥಾನಗಳಿಗೆ ಸರಬರಾಜು ಮಾಡಲು 3 ಸಾವಿರ ಲೀಟರ್ನಷ್ಟು ಹಸುವಿನ ಹಾಲು, 60-100 ಕೆ.ಜಿ. ತುಪ್ಪ ಉತ್ಪತ್ತಿಗೆ ನಿರ್ಧರಿಸಿದೆ. ಹೀಗಾಗಿ, ಟಿಟಿಡಿಗೂ ಆರ್ಥಿಕ ನೆರವನ್ನು ಒದಗಿಸಲು ಎನ್ಡಿಡಿಬಿ ಮುಂದೆ ಬರಬೇಕು ಎಂದು ರೆಡ್ಡಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ