ಮಾರುಕಟ್ಟೆ ಹಿರಿಯಣ್ಣನದು ತ್ರಿಶಂಕು ಸ್ವರ್ಗ !

ಹಳೆ ಕಟ್ಟಡ ಕೆಡವಲು ಅನುಮತಿ ಸಿಕ್ಕಿಲ್ಲ ; ಹೊಸ ಕಟ್ಟಡಕ್ಕೆ ಕಾಲ ಕೂಡಿ ಬಂದಿಲ್ಲ

Team Udayavani, Apr 11, 2021, 6:20 AM IST

ಮಾರುಕಟ್ಟೆ ಹಿರಿಯಣ್ಣನದು ತ್ರಿಶಂಕು ಸ್ವರ್ಗ !

ಗೊಂದಲ – ವಿವಾದದಿಂದ ನಗರದ ಅತ್ಯಂತ ದೊಡ್ಡ ಹಾಗೂ ಹಳೆಯ ಮಾರುಕಟ್ಟೆಯಾದ ಸೆಂಟ್ರಲ್‌ ಮಾರ್ಕೆಟ್‌ನ ಪೂರ್ಣ ಪ್ರಯೋಜನ ಜನತೆಗೆ ಸಿಗದಂತಾಗಿದೆ. ಇನ್ನಾದರೂ ಅವುಗಳನ್ನು ನಿವಾರಿಸುವ ಕೆಲಸ ತುರ್ತಾಗಿ ಆಗಬೇಕಿದೆ.

ಮಹಾನಗರ: ನಗರದ ಹೃದಯ ಭಾಗವಾದ ಹಂಪನಕಟ್ಟೆ ಬಳಿಯ ಕೇಂದ್ರ ಮಾರುಕಟ್ಟೆಗೆ 7 ದಶಕಗಳಿಗೂ ಅಧಿಕ ಇತಿಹಾಸವಿದೆ. ಈಗಿರುವ ಶಿಥಿಲವಾದ ಕಟ್ಟಡಕ್ಕೆ 50 ವರ್ಷಗಳ ಚರಿತ್ರೆ ಇದೆ. ಆದರೆ ನಗರದ ಅತ್ಯಂತ ದೊಡ್ಡ ಹಾಗೂ ಹಳೆಯ ಮಾರುಕಟ್ಟೆಯಾದ ಸೆಂಟ್ರಲ್‌ ಮಾರ್ಕೆಟ್‌ ಪರಿಸ್ಥಿತಿ 11 ತಿಂಗಳಿನಿಂದ ತ್ರಿಶಂಕು ಸ್ಥಿತಿಯಲ್ಲಿದೆ.

ಸ್ಮಾರ್ಟ್‌ ಸಿಟಿ ಯೋಜನೆಯಡಿ ಸ್ಮಾರ್ಟ್‌ ಮಾರ್ಕೆಟ್‌ ಆಗಿ ನಿರ್ಮಿಸಲು ಹಾಗೂ ಕೊರೊನಾ ಕಾರಣದಿಂದ ಸೆಂಟ್ರಲ್‌ ಮಾರ್ಕೆಟ್‌ ಅನ್ನು ಕಳೆದ ವರ್ಷ ಎಪ್ರಿಲ್‌ನಲ್ಲಿ ಮುಚ್ಚಲಾಗಿತ್ತು. ವ್ಯಾಪಾರಿಗಳು ಕೋರ್ಟ್‌ ಮೆಟ್ಟಲೇರಿದಾಗ, ನ್ಯಾಯಾಲಯವು ಅಧಿಕೃತ ವ್ಯಾಪಾರಸ್ಥರಿಗೆ ವಹಿವಾಟು ನಡೆಸಲು ಅವಕಾಶ ನೀಡುವಂತೆ ಸೂಚಿಸಿತು. ಆಗ ಪಾಲಿಕೆಯು 35 ಮಂದಿ ಅಧಿಕೃತ ವ್ಯಾಪಾರಿಗಳಿಗೆ ಅವಕಾಶ ಕಲ್ಪಿಸಿತು. ಕೆಲವರು ಅಕ್ಟೋಬರ್‌ನಿಂದ ವ್ಯವಹಾರ ಪುನರಾರಂಭಿಸಿದ್ದಾರೆ. ಈಗ ಮಾರ್ಕೆಟ್‌ ಕಟ್ಟಡದ ಹೊರ ಭಾಗ, ಒಳಗಡೆ ಬೆರಳೆಣಿಕೆಯ ವ್ಯಾಪಾರಿಗಳು ವ್ಯವಹಾರ ನಡೆಸು ತ್ತಿದ್ದಾರೆ. ಆದರೆ, ಗೊಂದಲ – ವಿವಾದದಿಂದ ಜನತೆಗೆ ಮಾರುಕಟ್ಟೆಯ ಪೂರ್ಣ ಪ್ರಯೋಜನ ಸಿಗದಂತಾಗಿದೆ.

ಸ್ಮಾರ್ಟ್‌ ಸಿಟಿ ಯೋಜನೆಯಡಿ ಸರಕಾರಿ ಮತ್ತು ಖಾಸಗಿ ಪಾಲುದಾರಿಕೆಯಲ್ಲಿ (ಪಿಪಿಪಿ ಮಾದರಿ) 115 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಸೆಂಟ್ರಲ್‌ ಮಾರ್ಕೆಟ್‌ ಕಟ್ಟಡ ನಿರ್ಮಿಸಲು 2019 ಡಿಸೆಂಬರ್‌ನ ಪಾಲಿಕೆ ಸಭೆಯಲ್ಲಿ ನಿರ್ಣಯಿಸಲಾಗಿತ್ತು. ಅದರಂತೆ ಅಲ್ಲಿನ ವ್ಯಾಪಾರಿಗಳನ್ನು ಸ್ಥಳಾಂತರಿಸಲು ನಿರ್ಧರಿಸಲಾಯಿತು. 2020 ಮಾರ್ಚ್‌ ನಲ್ಲಿ ಕೊರೊನಾ ಲಾಕ್‌ಡೌನ್‌ ಘೋಷಣೆ ಆದ ಸಂದರ್ಭ ಪಾಲಿಕೆಯು ಎ. 7ರಿಂದ ಸೆಂಟ್ರಲ್‌ ಮಾರ್ಕೆಟ್‌ನಲ್ಲಿ ವ್ಯಾಪಾರವನ್ನು ಸ್ಥಗಿತಗೊಳಿಸಿತು. ಈ ಸಂದರ್ಭ ಸಗಟು ವ್ಯಾಪಾರವನ್ನು ಬೈಕಂಪಾಡಿ ಎಪಿಎಂಸಿ ಮಾರ್ಕೆಟ್‌ಗೆ ಸ್ಥಳಾಂತರಿಸಿತು. ಅದರಂತೆ ಸಗಟು ವ್ಯಾಪಾರಿಗಳು ಬೈಕಂಪಾಡಿಯಲ್ಲಿ ವ್ಯವಹಾರ ಆರಂಭಿಸಿದರು. ಆದರೆ ರಿಟೇಲ್‌ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡಲಿಲ್ಲ. ಅನಂತರ ಪರ್ಯಾಯ ವ್ಯವಸ್ಥೆಗೆ ನೆಹರೂ ಮೈದಾನದ ಬಳಿ 2 ಎಕರೆ ಜಾಗದಲ್ಲಿ 5.5 ಕೋ. ರೂ. ವೆಚ್ಚದಲ್ಲಿ ತಾತ್ಕಾಲಿಕ ಸೆಂಟ್ರಲ್‌ ಮಾರ್ಕೆಟ್‌ ಕಟ್ಟಡ ನಿರ್ಮಿಸಲು ಶಿಲಾನ್ಯಾಸ ಮಾಡಿ ಕಾಮಗಾರಿ ಆರಂಭಿಸಲಾಗಿತ್ತು. ಈ 2 ಎಕರೆ ಜಾಗ ವನ್ನು 3 ವಿಭಾಗಗಳಾಗಿ ವಿಂಗಡಿಸಿ ಪುರಭವನ ಹಿಂಭಾಗ/ ಫುಟ್‌ಬಾಲ್‌ ಮೈದಾನ ಬಳಿ 28 ಮಾಂಸದಂಗಡಿಗಳು, ಇಂದಿರಾ ಕ್ಯಾಂಟೀನ್‌ ಬಳಿ 48 ಸುಸಜ್ಜಿತ ತರಕಾರಿ- ಹಣ್ಣುಗಳ ಮಳಿಗೆಗಳು, 205 ಸ್ಟಾಲ್‌ಗ‌ಳನ್ನು ನಿರ್ಮಿಸಲು, 96 ಇತರೆ ಅಂಗಡಿಗಳನ್ನು ಕ್ರಿಕೆಟ್‌ ಮೈದಾನದ ಬಲ ಬದಿ ನಿರ್ಮಿಸಲು ಯೋಜನೆ ರೂಪಿಸಲಾಗಿತ್ತು.

ಸೆಂಟ್ರಲ್‌ ಮಾರ್ಕೆಟ್‌ನ ಈಗಿರುವ ಕಟ್ಟಡವನ್ನು ಕೆಡವಿ 115 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಹೊಸ ಸೆಂಟ್ರಲ್‌ ಮಾರ್ಕೆಟ್‌ ಕಟ್ಟಡವನ್ನು ನಿರ್ಮಿಸುವ ಬಗ್ಗೆ 2018 ಅಕ್ಟೋಬರ್‌ನಲ್ಲಿಯೇ ಸ್ಮಾರ್ಟ್‌ ಸಿಟಿ ಸಭೆಯಲ್ಲಿ ಅನುಮೋದನೆ ನೀಡಲಾಗಿತ್ತು. ಆದರೆ, 3 ಬಾರಿ ಟೆಂಡರ್‌ಗಳನ್ನು ಆಹ್ವಾನಿಸಿದ್ದರೂ ಯಾವುದೇ ಬಿಡ್‌ದಾರರು ಆಸಕ್ತಿ ವಹಿಸಿರಲಿಲ್ಲ. ಬಳಿಕ ಷರತ್ತುಗಳಲ್ಲಿ ಕೆಲವು ಬದಲಾವಣೆ ಮಾಡಿ 4ನೇ ಬಾರಿಗೆ ಟೆಂಡರ್‌ ಆಹ್ವಾನಿಸಿದ್ದು, ಆಸಕ್ತಿ ತೋರಿದ ಬಿಡ್ಡರ್‌ಗೆ ಕಾಮಗಾರಿಯನ್ನು
ವಹಿಸಲಾಗಿದೆ. ಕಾಮಗಾರಿ ಆರಂಭವಾಗುವ ನಿರೀಕ್ಷೆಯಿದೆ.

-  ಹಿಲರಿ ಕ್ರಾಸ್ತಾ

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.