Virat Kohli: ಸೆಂಚುರಿ ನಂ.50- ವಿರಾಟ್‌ ದಾಖಲೆ ಅವಿಸ್ಮರಣೀಯ


Team Udayavani, Nov 16, 2023, 12:22 AM IST

virat kohli century

ಮುಂಬಯಿಯ ವಾಂಖೇಡೆ ಕ್ರೀಡಾಂಗಣದಲ್ಲಿ ಭಾರತ ಮತ್ತು ನ್ಯೂಜಿಲೆಂಡ್‌ ವಿರುದ್ಧ ಸೆಮಿಫೈನಲ್‌ ಪಂದ್ಯ ನಡೆದಿದ್ದು, ಇದರಲ್ಲಿ ಭಾರತದ ಅಗ್ರ ಬ್ಯಾಟರ್‌ ವಿರಾಟ್‌ ಕೊಹ್ಲಿ 50 ಶತಕ ಬಾರಿಸಿದ ದಾಖಲೆ ಮಾಡಿದ್ದಾರೆ. ಕ್ರಿಕೆಟ್‌ ದೇವರು ಸಚಿನ್‌ ತೆಂಡೂಲ್ಕರ್‌ ಅವರ ಹೆಸರಲ್ಲಿ ಇದ್ದ ದಾಖಲೆಯನ್ನು ಮುರಿದಿರುವ ಕೊಹ್ಲಿ, ತಮ್ಮ ಬ್ಯಾಟಿಂಗ್‌ ವೈಭವದ ವಿರಾಟ ದರ್ಶನ ಮಾಡಿಸಿದ್ದಾರೆ.

ಸಚಿನ್‌ ತೆಂಡೂಲ್ಕರ್‌ ಅವರು 49 ಶತಕ ಬಾರಿಸಿದ್ದು, ಇದುವರೆಗಿನ ದಾಖಲೆಯಾಗಿತ್ತು. ಅಂದರೆ ಸಚಿನ್‌ ತೆಂಡೂಲ್ಕರ್‌ 463 ಪಂದ್ಯಗಳನ್ನು ಆಡಿ 49 ಶತಕ ಮತ್ತು 96 ಅರ್ಧಶತಕ ಬಾರಿಸಿದ್ದಾರೆ. ಒಟ್ಟು 18,426 ರನ್‌ ಬಾರಿಸಿದ್ದರೆ, ಶೇ.44.83 ಆವರೇಜ್‌ ಇದೆ. ಹಾಗೆಯೇ ವಿರಾಟ್‌ ಕೊಹ್ಲಿ ಅವರು 291 ಪಂದ್ಯಗಳಲ್ಲಿ 50 ಶತಕ ಮತ್ತು 71 ಅರ್ಧಶತಕ ಬಾರಿಸಿದ್ದಾರೆ. ಒಟ್ಟಾರೆಯಾಗಿ 13,794 ರನ್‌ ಮತ್ತು ಶೇ.58.44ರಷ್ಟು ಆವರೇಜ್‌ ಇದೆ.

ಭಾರತದ ಕ್ರಿಕೆಟ್‌ ಲೋಕದಲ್ಲಿ ಸಚಿನ್‌ ತೆಂಡೂಲ್ಕರ್‌ ಅವರದ್ದು ಅಗ್ರಸ್ಥಾನ. ಭಾರತದ ಕ್ರಿಕೆಟ್‌ ಎಂದ ಕೂಡಲೇ, ಮೊದಲಿಗೆ ನೆನಪಾಗುವುದು ಸಚಿನ್‌ ತೆಂಡೂಲ್ಕರ್‌ ಅವರೇ. ಕೇವಲ ಏಕದಿನ ಕ್ರಿಕೆಟ್‌ ಅಷ್ಟೇ ಅಲ್ಲ, ಟೆಸ್ಟ್‌ನಲ್ಲಿಯೂ ಸಚಿನ್‌ ಅಮೋಘ ದಾಖಲೆ ಮಾಡಿದ್ದಾರೆ. ಇಂಥ ಕ್ರಿಕೆಟಿಗನ ದಾಖಲೆ ಮುರಿಯುವುದು ಎಂದರೆ ಅದು ಅಸಾಮಾನ್ಯ ಗೌರವವೇ ಹೌದು. ಜತೆಗೆ ಟೆಸ್ಟ್‌ ಕ್ರಿಕೆಟ್‌ನಲ್ಲಿ ಸಚಿನ್‌ ದಾಖಲೆ ಮುರಿಯುವುದು ಅಸಾಧ್ಯ ಎಂಬ ಮಾತುಗಳೂ ಇವೆ. ಎಲ್ಲ ಮಾದರಿಯ ದಾಖಲೆಗಳನ್ನು ಲೆಕ್ಕಕ್ಕೆ ತೆಗೆದುಕೊಂಡರೆ, ಸಚಿನ್‌ 664 ಪಂದ್ಯಗಳಿಂದ 100 ಶತಕ, 164 ಅರ್ಧಶತಕ ಗಳಿಸಿದ್ದಾರೆ. ಇನ್ನು ವಿರಾಟ್‌ ಕೊಹ್ಲಿ 517 ಪಂದ್ಯಗಳಿಂದ 80 ಶತಕ, 137 ಅರ್ಧಶತಕ ಗಳಿಸಿದ್ದಾರೆ.

ಇನ್ನು ವಿರಾಟ್‌ ಕೊಹ್ಲಿಗೂ ಭಾರತ ಕ್ರಿಕೆಟ್‌ ಲೋಕದಲ್ಲಿ ಅವರದ್ದೇ ಆದ ಅತ್ಯಮೋಘ ಸ್ಥಾನವಿದೆ. ವಿರಾಟ್‌ ಕೊಹ್ಲಿ ನಾಯಕನಾಗಿಯೂ ಮತ್ತು ತಂಡದ ಸದಸ್ಯನಾಗಿಯೂ ಅಮೋಘ ಸಾಧನೆ ಮಾಡಿದ್ದಾರೆ. ಅತ್ಯಂತ ಕಡಿಮೆ ಪಂದ್ಯಗಳಲ್ಲಿ ಈ ಪ್ರಮಾಣದ ಸಾಧನೆ ಮಾಡುವುದು ಸಾಮಾನ್ಯವೇನಲ್ಲ. ಅದರಲ್ಲೂ ಬುಧವಾರ ಸಚಿನ್‌ ತೆಂಡೂಲ್ಕರ್‌ ಅವರ ಮುಂದೆಯೇ, ಈ ದಾಖಲೆ ಮಾಡಿರುವುದು ಹೆಮ್ಮೆಯೇ ಸರಿ. ಇದಕ್ಕೆ ಬದಲಾಗಿ ಸಚಿನ್‌ ಅವರೇ ಭಾರತೀಯರೊಬ್ಬರು ತಮ್ಮ ಸಾಧನೆ ಮುರಿದಿರುವುದು ಹೆಮ್ಮೆಯ ವಿಚಾರ ಎಂದು ಹೇಳಿದ್ದಾರೆ. ಕೊಹ್ಲಿ ಅವರಿಗೆ ಇದಕ್ಕಿಂತ ಹೆಚ್ಚಿನ ಶಹಬ್ಟಾಸ್‌ ಬೇರೆ ಏನಿಲ್ಲ ಎಂದೇ ಹೇಳಬಹುದು.

ಮುಂದೆಯೂ ದೇಶದಲ್ಲಿ ಸಚಿನ್‌ ತೆಂಡೂಲ್ಕರ್‌, ವಿರಾಟ್‌ ಕೊಹ್ಲಿಯವರಂಥ ಅಸಾಧಾರಣ ಪ್ರತಿಭೆಗಳು ಹೊರಬರಬೇಕು. ಮುಂದಿನವರು ಇಂಥ ದಾಖಲೆಗಳನ್ನು ಮುರಿದಾಗಲೇ, ಹಿಂದೆ ದಾಖಲೆ ಮಾಡಿದವರಿಗೆ ಗೌರವ ಸಲ್ಲಿಸಿದಂತಾಗುತ್ತದೆ. ಸದ್ಯ ಶುಭಮನ್‌ ಗಿಲ್‌, ಶ್ರೇಯಸ್‌ ಅಯ್ಯರ್‌ರಂಥವರು ಕೂಡ ಉತ್ತಮವಾಗಿ ಆಡುತ್ತಿದ್ದು, ಮುಂದಿನ ದಿನಗಳಲ್ಲಿ ಇವರಿಗೆ ಹೆಚ್ಚಿನ ಭವಿಷ್ಯವಿದೆ ಎಂದೇ ಹೇಳಲಾಗುತ್ತಿದೆ. ಇದರ ಜತೆಗೆ ಹೊಸ ಪೀಳಿಗೆಯ ಆಟಗಾರರೂ ಬಂದರೆ, ಭಾರತದ ಕ್ರಿಕೆಟ್‌ ಇನ್ನಷ್ಟು ಶ್ರೀಮಂತವಾಗುವುದರಲ್ಲಿ ಯಾವುದೇ ಸಂದೇಹವಿಲ್ಲ.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.