CET, NEET: ಆಪ್ಷನ್ ಎಂಟ್ರಿ
Team Udayavani, Aug 5, 2023, 11:39 PM IST
ಬೆಂಗಳೂರು: ನಾನಾ ವೃತ್ತಿಪರ ಕೋರ್ಸ್ಗಳಿಗೆ ಸಿಇಟಿ ಮತ್ತು ನೀಟ್ ಸೀಟ್ ಮ್ಯಾಟ್ರಿಕ್ಸ್ ವಿವರವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆ.6ರ ಂದು ಬೆಳಗ್ಗೆ 7 ಗಂಟೆಗೆ ಪ್ರಕಟಿಸಲಿದೆ. ಅರ್ಹ ಅಭ್ಯರ್ಥಿಗಳು ತಮ್ಮ ಆದ್ಯತೆ ಅನುಸಾರ ಸಂಯೋಜಿತವಾಗಿ ಐಚ್ಛಿಕಗಳನ್ನು (ಆಪ್ಶನ್ಸ್) ದಾಖಲಿಸಲು ಆ.9ರ ಬೆಳಗ್ಗೆ 10 ಗಂಟೆಯ
ವರೆಗೆ ಅವಕಾಶವಿದೆ ಎಂದು ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ.
ಅಭ್ಯರ್ಥಿಗಳು ತಮ್ಮ ಐಚ್ಛಿಕಗಳನ್ನು ಬದಲಿಸಲು ಅಥವಾ ಪರಿಷ್ಕರಿಸಲು ಆ.11ರ ಬೆಳಗ್ಗೆ 8ರಿಂದ ಆ.14ರ ಬೆಳಗ್ಗೆ 11 ಗಂಟೆ ವರೆಗೆ ಅವಕಾಶ ಇರಲಿದೆ. ಇದಕ್ಕೂ ಮೊದಲು ಆ.11ರಂದು ಬೆಳಗ್ಗೆ 6 ಗಂಟೆಗೆ ಅಣಕು ಸೀಟು ಹಂಚಿಕೆ ಫಲಿತಾಂಶವನ್ನು ಪ್ರಕಟಿಸಲಾಗುವುದು. ಬಳಿಕ ಆ.16ರಂದು ಬೆಳಗ್ಗೆ 6 ಗಂಟೆಗೆ ಮೊದಲನೇ ಸುತ್ತಿನ ನೈಜ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗುವುದು. ಒಂದಕ್ಕಿಂತ ಹೆಚ್ಚು ಕೋರ್ಸುಗಳಿಗೆ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ತಮ್ಮ ಆದ್ಯತೆಗಳನ್ನು ಒಂದೇ ಪೋರ್ಟಲ್ನಲ್ಲಿ ದಾಖಲಿಸಬೇಕು. ಇದಕ್ಕೆ ಸಂಬಂಧಿಸಿದ ಮಾಹಿತಿ ಒಳಗೊಂಡ ವೀಡಿಯೋವನ್ನು ಪ್ರಾಧಿಕಾರದ ವೆಬ್ಸೈಟ್ http://kea.kar.nic.in ನಲ್ಲಿ ಪ್ರಕಟಿಸಲಾಗಿದೆ ಎಂದು ಅವರು ಹೇಳಿ¨ªಾರೆ.
ಆಯುರ್ವೇದ ಸೀಟ್ ಮ್ಯಾಟ್ರಿಕ್ಸ್ ಬಂದಿಲ್ಲ
ಆಯುರ್ವೇದ, ಯುನಾನಿ, ಹೋಮಿಯೋಪಥಿ, ಯೋಗ ಮತ್ತು ನ್ಯಾಚುರೋಪಥಿ ಹಾಗೂ ಬಿ.ಎಸ್ಸಿ. ಕೋರ್ಸುಗಳ ಸೀಟ್ ಮ್ಯಾಟ್ರಿಕ್ಸ್ ವಿವರವನ್ನು ಸರಕಾರ ನೀಡಿಲ್ಲ. ಈ ಕೋರ್ಸ್ಗಳ ಮಾಹಿತಿ ಬಂದ ಬಳಿಕ 2ನೇ ಸುತ್ತಿನ ಸೀಟು ಹಂಚಿಕೆಯಲ್ಲಿ ತಿಳಿಸುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
MUST WATCH
ಹೊಸ ಸೇರ್ಪಡೆ
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…