ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷಕ್ಕೆ ಕಂಟಕ: ಛಲವಾದಿ ನಾರಾಯಣಸ್ವಾಮಿ
Team Udayavani, May 6, 2022, 10:30 PM IST
ಬೆಂಗಳೂರು: ಸಿದ್ದರಾಮಯ್ಯರವರು ಕಾಂಗ್ರೆಸ್ಗೆ ಕಂಟಕ. ಕಾಂಗ್ರೆಸ್ ಪಕ್ಷವನ್ನು ಇವರು ಮುಗಿಸಲಿದ್ದಾರೆ. ಇವರ ಕುರಿತು ಕಾಂಗ್ರೆಸ್ಗೆ ಸಿದ್ದರಾಮಯ್ಯ ಒಂದು ಶನಿ. ಅವರು ಇದನ್ನು ಮುಗಿಸಿ ಹೋಗಲಿದ್ದಾರೆ ಎಂದು ಕಾಂಗ್ರೆಸ್ನ ಹಿರಿಯ ಮುಖಂಡ ಜನಾರ್ದನ ಪೂಜಾರಿ ಬಿರುದು ಕೊಟ್ಟಿದ್ದರು ಎಂದು ಎಸ್.ಸಿ. ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಶುಕ್ರವಾರ ಪತ್ರಿಕಾಹೇಳಿಕೆ ನೀಡಿದ ಅವರು, ವಿರೋಧ ಪಕ್ಷದ ನಾಯಕರು ಮತ್ತು ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯರವರ ಬಗ್ಗೆ ರಾಜ್ಯದ ಜನರು ಈ ಹಿಂದೆ ಗೌರವದಿಂದ ಕಾಣುತ್ತಿದ್ದರು. ಇತ್ತೀಚೆಗೆ ಬಹುಶಃ ಅವರ ತಲೆ ಕೆಟ್ಟಂತೆ ಕಾಣುತ್ತಿದೆ. ಅವರಿಗೆ ಚಿಕಿತ್ಸೆ ಅಗತ್ಯವಿದ್ದಂತೆ ಕಾಣುತ್ತಿದೆ ಎಂದು ತಿಳಿಸಿದರು.
ಸಿದ್ದರಾಮಯ್ಯರವರ ಅಹಂಕಾರ ನೆತ್ತಿಗೇರಿದಂತೆ ಕಾಣುತ್ತಿದೆ. ಅವರೀಗ ಉಡಾಫೆ ರಾಮಯ್ಯ ಆಗಿದ್ದಾರೆ. ದಲಿತರು ಹೊಟ್ಟೆಪಾಡಿನವರು; ದಲಿತರು ಹೊಟ್ಟೆಪಾಡಿಗಾಗಿ ಬಿಜೆಪಿಗೆ ಹೋಗುತ್ತಿದ್ದಾರೆ’ ಎಂದು ಅವರು ಹೇಳಿದ್ದರು. ನಾವು ಆಪಾದನೆ ಮಾಡಿ ವಿಡಿಯೋ ಬಿಡುಗಡೆ ಮಾಡಿದ್ದೆವು. ಆಗ ಬಿಜೆಪಿಯವರು ವಿಡಿಯೋ ತಿರುಚಿದ್ದಾರೆ ಎಂದು ಸಿದ್ದರಾಮಯ್ಯ ಸುಳ್ಳು ಹೇಳಿದ್ದರು ಎಂದು ಟೀಕಿಸಿದರು.
ಸಿದ್ದರಾಮಯ್ಯನವರು ನಿನ್ನೆ ಬಿಜೆಪಿಯನ್ನು ನಿಂದಿಸುವ ಮಾತಿನ ಭರದಲ್ಲಿ ಹಜಾಮತಿ ಮಾಡುತ್ತಿದ್ದರಾ ಎಂದು ಕೇಳಿದ್ದಾರೆ. ನಾವು ಸವಿತಾ ಸಮಾಜವನ್ನು ಗೌರವದಿಂದ ಕಾಣುತ್ತೇವೆ. ಅವರ ಕೆಲಸವನ್ನೂ ಗೌರವದಿಂದಲೇ ನೋಡುತ್ತೇವೆ. ಹಜಾಮತಿ ಎಂದಿರುವುದು ಅಂಥ ಸಮಾಜವನ್ನು ಅಪಮಾನ ಮಾಡಿದಂತೆ. ಅವರು ದಲಿತ ವಿರೋಧಿ ಮಾತ್ರವಲ್ಲ ಹಿಂದುಳಿದವರ ವಿರೋಧಿಯೂ ಆಗಿದ್ದಾರೆ. ತಳ ಸಮುದಾಯವನ್ನೂ ಬಹಳ ಕೇವಲವಾಗಿ ನೋಡುತ್ತಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ರಾಜ್ಯದ ಜನತೆ ಇಂಥ ನಾಯಕರನ್ನು ತಿರಸ್ಕರಿಸಿ ಸರಿಯಾಗಿ ಬುದ್ಧಿ ಕಲಿಸಬೇಕು. ತಕ್ಷಣ ಸಿದ್ದರಾಮಯ್ಯನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಮುಖ್ಯಮಂತ್ರಿಯಾಗಿದ್ದ ವ್ಯಕ್ತಿಗೆ ಇಂಥ ಅಗೌರವದ ಮಾತು ಸರಿಹೊಂದುವುದಿಲ್ಲ ಎಂದು ತಿಳಿಸಿದರು.
ಸಿದ್ದರಾಮಯ್ಯ ಅವರ ಈ ಪ್ರವೃತ್ತಿಗೆ ರಾಜ್ಯದ ಜನರು ಛೀಮಾರಿ ಹಾಕುತ್ತಿದ್ದಾರೆ. ಸಿದ್ದರಾಮಯ್ಯನವರಿಗೆ ನಾಲಿಗೆ ಮೇಲೆ ಹಿಡಿತವಿಲ್ಲವೇ? ಇಷ್ಟ ಬಂದಂತೆ ಎಲ್ಲರನ್ನೂ ನೀವು ಮಾತನಾಡುತ್ತೀರಿ. ಏಕವಚನದಲ್ಲೇ ಎಲ್ಲರನ್ನೂ ಮಾತನಾಡುತ್ತೀರಿ. ಆರೋಗ್ಯ ಕಳಕೊಂಡ ಕಾರಣ ಹೀಗಾಗುತ್ತಿದೆ. ನಿಮಗೆ ಚಿಕಿತ್ಸೆ ಅವಶ್ಯಕತೆ ಇದೆ ಎಂದು ನನಗೆ ಅನಿಸುತ್ತಿದೆ ಎಂದು ನುಡಿದರು. ಯಾರೂ ಚಿಕಿತ್ಸೆ ಮಾಡದಿದ್ದರೆ ಹೇಳಿ, ನಾವೇ ಆಸ್ಪತ್ರೆಗೆ ಸೇರಿಸುತ್ತೇವೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ