ಚಾಮರಾಜನಗರ ಹಸಿರು ವಲಯವಾಗಿಯೇ ಉಳಿದೀತೆ?


Team Udayavani, May 13, 2020, 9:42 AM IST

hasiru-vala

ಚಾಮರಾಜನಗರ: ಕೋವಿಡ್ 19 ಸೋಂಕಿನ ಒಂದೂ ಪ್ರಕರಣ ಇಲ್ಲದೇ ಹಸಿರು ವಲಯವೆಂಬ ಹೆಗ್ಗಳಿಕೆ ಪಡೆದಿರುವ ಜಿಲ್ಲೆ, ಇದನ್ನು ಮುಂದೆಯೂ ಕಾಪಾಡಿಕೊಂಡೀತೇ ಎಂಬ ಆತಂಕ ಜನರಲ್ಲಿ ಮೂಡಿದೆ. ಹೊರ ಜಿಲ್ಲೆ, ಹೊರ ರಾಜ್ಯಗಳಿಂದ ಕಾರ್ಮಿಕರು, ಜನರು ಬರಲಾರಂಭಿಸಿರುವುದು ಈ ಆತಂಕಕ್ಕೆ ಕಾರಣ.

 ಜಿಲ್ಲೆಯಲ್ಲಿ ಆತಂಕ: ಲಾಕ್‌ಡೌನ್‌ ಸಮಯ  ದಲ್ಲಿ ಶಿಸ್ತಿನಿಂದ ಕ್ರಮಗಳನ್ನು ಕೈಗೊಂಡ ಕಾರಣ, ಹೊರ ಜಿಲ್ಲೆಗಳಿಂದ, ರಾಜ್ಯಗಳಿಂದ ಸೋಂಕಿತರು ಜಿಲ್ಲೆಗೆ ಬರುವುದು ಸಾಧ್ಯ ವಾಗಿರಲಿಲ್ಲ. ಆದರೆ ಹಸಿರು ವಲಯ ವೆಂಬುದೇ ಈಗ ಆತಂಕಕ್ಕೆ ಕಾರಣವಾಗಿದೆ. ಹಸಿರು ವಲಯ ವೆಂಬ ಕಾರಣಕ್ಕೆ ಅನೇಕ ಸಡಿಲಿಕೆ ಸರ್ಕಾರ ಮಾಡುತ್ತಿರುವುದರಿಂದ ಇದುವರೆಗೂ ಹಸಿರಾಗಿದ್ದ ಜಿಲ್ಲೆ,

ಹಸಿರುತನ ಕಾಯ್ದುಕೊಳ್ಳಲು ಸಾಧ್ಯವೇ ಎಂಬ ಆತಂಕ ಎದುರಾಗಿದೆ. ಲಾಕ್‌ಡೌನ್‌  ಇರುವವರೆಗೂ ರಾಜ್ಯದ 10 ಜಿಲ್ಲೆಗಳು ಒಂದು ಸೋಂಕು ಇಲ್ಲದೇ ಹಸಿರು ವಲಯಗಳಾಗೇ ಉಳಿದಿದ್ದವು. ಲಾಕ್‌ಡೌನ್‌ ಸಡಿಲಿಕೆಯಾಗಿ ಹೊರ ರಾಜ್ಯ, ಹೊರ ರಾಜ್ಯಗಳಿಂದ ಜನರು ಮರಳಲಾರಂಭಿಸಿದ ಬಳಿಕ ಕೆಲ ಜಿಲ್ಲೆಗಳಲ್ಲಿ ಸೋಂಕು  ಪ್ರಕರಣಗಳು ವರದಿಯಾಗುತ್ತಲೇ ಇವೆ. ಹಸಿರು ಜಿಲ್ಲೆಗಳು ಕಿತ್ತಳೆ, ಕೆಂಪು ವಲಯಗಳಾಗುತ್ತಿವೆ.

ಅನುಮಾನದಿಂದ ಕಾಣದಿರಿ: ಜಿಲ್ಲೆಗೆ ಮರಳು  ತ್ತಿರುವ ಮಂದಿಯನ್ನು ಪೂರ್ಣ ತಪಾ ಸಣೆಗೆ ಒಳಪಡಿಸಿಯೇ ಒಳ ಬಿಡು ತ್ತಿದ್ದರೂ, ಜಿಲ್ಲೆಯ  ಜನರು ಬೇರೆ ಕಡೆಯಿಂದ ಬಂದವರನ್ನುಅನುಮಾನದಿಂದ ನೋಡು ವಂತಾಗಿದೆ. ವಾಹನಗಳಲ್ಲಿ ಪಾಸ್‌ಗಳನ್ನು ಹಾಕಿಕೊಂಡು  ಬೇರೆ ಬೇರೆ ಜಿಲ್ಲೆಗಳಿಂದ ಜನರು ನಗರಕ್ಕೆ ಬರುತ್ತಿದ್ದಾರೆ. ಈ ಜನರು ಸೋಂಕು ಹೊತ್ತು ತಂದರೆ ಎಂಬ ಆತಂಕ ಇದಕ್ಕೆ ಕಾರಣ.

ನಮ್ಮ ಜಿಲ್ಲೆಯಿಂದ ಬೇರೆ ಬೇರೆ ಜಿಲ್ಲೆಗಳಿಗೆ ಹೋಗಿರುವ  ಕಾರ್ಮಿಕರಲ್ಲಿ ಅಂದಾಜು 3 ಸಾವಿರ ಜನ ವಾಪಸ್‌ ಬರಬಹುದೆಂದು ಜಿಲ್ಲಾಡಳಿತ ನಿರೀಕ್ಷೆ ಹೊಂದಿದೆ. ಈಗಾಗಲೇ ಪರ ಜಿಲ್ಲೆ  ಗಳಿಂದ 1787 ಕಾರ್ಮಿಕರು ಜಿಲ್ಲೆಗೆ ಮರಳಿದ್ದಾರೆ. ಹನೂರು ತಾಲೂಕಿನ 826, ಕೊಳ್ಳೇಗಾಲತಾಲೂಕಿನ 185, ಯಳಂದೂರು ತಾಲೂಕಿನ 96, ಚಾಮರಾಜನಗರ ತಾಲೂಕಿನ 481 ಮತ್ತು ಗುಂಡ್ಲುಪೇಟೆ ತಾಲೂಕಿನ 199 ಮಂದಿ ಇದ್ದಾರೆ.

ಅಂತರ ಕಾಯ್ದುಕೊಳ್ಳದೆ ನಿರ್ಲಕ್ಷ್ಯ: ಲಾಕ್‌ ಡೌನ್‌ ಇಲ್ಲದಿದ್ದರೂ, ಸೋಂಕು ಹರಡದಂತೆ ತಡೆಯಲು  ಪರಿಣಾಮಕಾರಿ ಮಾರ್ಗವೆಂದರೆ ಭೌತಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಸೋಪಿನಲ್ಲಿ ಕೈತೊಳೆಯುವುದು. ಆದರೆ ಸಾರ್ವಜನಿಕರು ಸಾಮಾಜಿಕ ಅಂತರ ಕಾಪಾಡುವಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ. ಇದು ಸೋಂಕು ಹರಡುವ ಆತಂಕ ಮೂಡಿಸಿದೆ.

ಜಿಲ್ಲೆ ಕೋವಿಡ್‌ 19 ವಿಷಯದಲ್ಲಿ ಹಸಿರು ವಲಯದಲ್ಲಿದೆ. ಹೊರ ರಾಜ್ಯದ ಕೆಂಪು ಮತ್ತು ಕಿತ್ತಳೆ ವಲಯದಲ್ಲಿರುವ ವಲಸೆ ಕಾರ್ಮಿಕರು ಬರಲು ಅನುಮತಿ ನೀಡುತ್ತಿಲ್ಲ. ಹೊರ ಜಿಲ್ಲೆಯಿಂದ ಬರುವ ಕಾರ್ಮಿಕರನ್ನು ಹಾಸ್ಟೆಲ್‌ಗ‌ಳಲ್ಲಿರಿಸಿ ಟೆಸ್ಟ್‌ ಮಾಡಿದ ಬಳಿಕವೇ ಊರಿಗೆ ಕಳುಹಿಸಿ ಕೊಡಲಾಗುವುದು. ಹೊರ ರಾಜ್ಯದವರನ್ನು ಸ್ಕ್ರೀನಿಂಗ್‌ ಮಾಡಿ 14 ದಿನ ಕ್ವಾರಂಟೈನ್‌ ಮಾಡಲಾಗುತ್ತದೆ. 
-ಡಾ.ರವಿ, ಜಿಲ್ಲಾಧಿಕಾರಿ

ಚೆಕ್‌ ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಾಗಿ ಪ್ರತಿಯೊಂದು ಕಾರು ಬೈಕುಗಳನ್ನೂ ತಪಾಸಣೆ ನಡೆಸಲಾಗುತ್ತಿದೆ. ಹೊರ ಜಿಲ್ಲೆಯಿಂದ ಅಂತಾರಾಜ್ಯದಿಂದ ಬರುವ ಎಲ್ಲರನ್ನೂ ಕ್ವಾರಂಟೈನ್‌ ಮಾಡಲಾಗುತ್ತಿದೆ.
-ನಿಖೀತಾ, ಉಪ ವಿಭಾಗಾಧಿಕಾರಿ

* ಕೆ.ಎಸ್‌.ಬನಶಂಕರ ಆರಾಧ್ಯ

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.