ಪತ್ನಿಯ ನಡತೆ ಮೇಲೆ ಅನುಮಾನಗೊಂಡ ಪತಿ : ಕುಡಿದ ಮತ್ತಿನಲ್ಲಿ ಪತ್ನಿಯ ಕೊಲೆ
Team Udayavani, Oct 24, 2020, 6:36 PM IST
ಹನೂರು (ಚಾಮರಾಜನಗರ): ಪತ್ನಿ ನಡತೆಯ ಮೇಲೆ ಅನುಮಾನಗೊಂಡು ಪತಿ ಕುಡಿದ ಮತ್ತಿನಲ್ಲಿ ಪತ್ನಿಯನ್ನು ಮಚ್ಚಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಮಲೆ ಮಹದೇಶ್ವರ ಬೆಟ್ಟ ಸಮೀಪದ ಆಣೆಹೊಲ ಗ್ರಾಮದಲ್ಲಿ ಜರುಗಿದೆ.
ಆಣೆಹೊಲ ಗ್ರಾಮದ ಸಿದ್ಧಿ ಎಂಬಾಕೆಯೇ ಮೃತ ದುರ್ದೈವಿಯಾಗಿದ್ದು, ಈಕೆಯ ಗಂಡ ಮಾದೇವ (40) ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಕೊಲೆ ಆರೋಪಿ ಮಾದೇವ ತನ್ನ ಪತ್ನಿ ಸಿದ್ದಿಯ ನಡತೆಯ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿದ್ದನು. ಈ ಸಂಬಂಧ ಕುಡಿದು ಬಂದು ಆಗಾಗ್ಗೆ ಜಗಳವನ್ನೂ ಆಡುತ್ತಿದ್ದನು. ಆದರೆ ಶುಕ್ರವಾರ ಸಂಜೆ ಜಗಳ ವಿಕೋಪಕ್ಕೆ ತಿರುಗಿದ್ದು ಮೃತ ದುರ್ದೈವಿ ಸಿದ್ಧಿಯನ್ನು ಮಚ್ಚಿನಿಂದ ಹೊಡೆದು ಹತ್ಯೆ ಮಾಡಿದ್ದಾನೆ.
4 ತಾಸಿಗೂ ಹೆಚ್ಚು ಶವದ ಜೊತೆ ಕಾಳ ಕಳೆದ: ಈ ಘಟನೆಯು ಶುಕ್ರವಾರ ಸಂಜೆ 6 ಗಂಟೆಯ ಸುಮಾರಿನಲ್ಲಿ ಜರುಗಿದೆ. ಆದರೆ ಕುಡಿದ ಮತ್ತಿನಲ್ಲಿದ್ದ ಮಾದೇವ ಇದ್ಯಾವುದರ ಅರಿವೇ ಇಲ್ಲದೆ ರಾತ್ರಿ 11 ಗಂಟೆಯವರೆಗೂ ಮೃತದೇಹದ ಜೊತೆಯಲ್ಲಿಯೇ ಕಾಳ ಕಳೆದಿದ್ದಾನೆ ಎನ್ನಲಾಗಿದೆ. ತಡರಾತ್ರಿ 11 ಗಂಟೆಯ ಸುಮಾರಿಗೆ ಮೃತ ಮಹಿಳೆಯ ಮಗ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದ್ದು ಕೂಡಲೇ ಮಹದೇಶ್ವರ ಬೆಟ್ಟ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಚಾಮರಾಜನಗರ : 28 ಮಂದಿಗೆ ಕೋವಿಡ್ ಸೋಂಕು ದೃಢ: 85 ಮಂದಿ ಗುಣಮುಖ
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಮ.ಬೆಟ್ಟ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ. ಸ್ಥಳಕ್ಕೆ ಡಿವೈಎಸ್ಪಿ ನಾಗರಾಜು ಮತ್ತು ಅಧಿಕಾರಿಗಳ ತಂಡ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ
Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?
21 ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ
AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!
Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್: ಮತ್ತೆ ನಕ್ಸಲರ ಸದ್ದು?