Mysore: ವಿಜೃಂಭಣೆಯ ಚಾಮುಂಡೇಶ್ವರೀ ದೇವಿ ರಥೋತ್ಸವ
Team Udayavani, Oct 26, 2023, 10:52 PM IST
ಮೈಸೂರು: ವಿಜಯದಶಮಿಯ ಬಳಿಕ ಚಾಮುಂಡಿಬೆಟ್ಟದಲ್ಲಿ ಗುರು ವಾರ ನಾಡದೇವತೆ ಶ್ರೀ ಚಾಮುಂಡೇಶ್ವರೀ ದೇವಿಯ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿತು.
ಗುರುವಾರ ಬೆಳಗ್ಗೆ ರಾಜವಂಶಸ್ಥರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಶ್ರೀ ಚಾಮುಂಡೇಶ್ವರೀ ದೇವಿಗೆ ಪೂಜೆ ಸಲ್ಲಿಸಿದರು. ಅನಂತರ ರಥವನ್ನು ಎಳೆಯುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು.
ಚಾಮುಂಡೇಶ್ವರೀ ದೇವಿಯ ಉತ್ಸವಮೂರ್ತಿಯುಳ್ಳ ರಥೋತ್ಸವ ಆರಂಭವಾಗುತ್ತಿದ್ದಂತೆ ಪೊಲೀಸರು ಸಂಪ್ರದಾಯದಂತೆ 21 ಕುಶಾಲತೋಪು ಸಿಡಿಸಿ ತಾಯಿ ಚಾಮುಂಡೇಶ್ವರೀ ದೇವಿಗೆ ಗೌರವ ಸಲ್ಲಿಸಿದರು. ತಾಯಿ ಚಾಮುಂಡೇಶ್ವರಿಯ ತೇರು ದೇವಸ್ಥಾನವನ್ನು ಒಂದು ಸುತ್ತು ಹಾಕಿತು. ಸಾವಿರಾರು ಭಕ್ತರು ಶ್ರೀ ಚಾಮುಂಡೇಶ್ವರೀ ದೇವಿಗೆ ಜೈಕಾರ ಹಾಕಿ, ರಥವನ್ನು ಎಳೆದು ಪುನೀತರಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ