Chandrayaan-3 ಕಾರ್ಯಾಚರಣೆ ಬಹುತೇಕ ಸ್ಥಗಿತ-ಪೂರ್ಣ ನಿದ್ರೆಗೆ ಜಾರಿದ ವಿಕ್ರಮ್,ಪ್ರಜ್ಞಾನ್
Team Udayavani, Oct 5, 2023, 10:09 PM IST
ನವದೆಹಲಿ: “ಚಂದ್ರಯಾನ-3′ ಯೋಜನೆಯ ಕಾರ್ಯಾಚರಣೆ ಬಹುತೇಕ ಸ್ಥಗಿತಗೊಂಡಿದೆ. ಲ್ಯಾಂಡರ್ “ವಿಕ್ರಮ್’ ಮತ್ತು ರೋವರ್ “ಪ್ರಜ್ಞಾನ್’ ಸಂಪೂರ್ಣವಾಗಿ ನಿದ್ರೆಗೆ ಜಾರಿವೆ. ಆದರೂ ಕೊನೆಯ ದಿನದವರೆಗೂ ಕಾದು ನೋಡಲು ಇಸ್ರೋ ಅಧ್ಯಕ್ಷ ಸೋಮನಾಥ್ ಹೇಳಿದ್ದಾರೆ.
ಒಂದು ಚಂದ್ರನ ದಿನ(14 ಭೂಮಿಯ ದಿನಗಳು)ದ ಕಾರ್ಯಾಚರಣೆಗಾಗಿ ವಿಕ್ರಮ್ ಮತ್ತು ಪ್ರಾಗ್ಯಾನ್ ಅನ್ನು ವಿನ್ಯಾಸಗೊಳಿಸಲಾಗಿತ್ತು. ಆದರೂ ಇವು ಎರಡನೇ ಇನ್ನಿಂಗ್ಸ್ ಆರಂಭಿಸಬಹುದು ಎಂಬ ವಿಶ್ವಾಸ ಅನೇಕರಲ್ಲಿತ್ತು. ಒಂದು ಚಂದ್ರನ ದಿನದ ನಂತರ ಚಂದ್ರನ ದಕ್ಷಿಣ ಧ್ರುವದಲ್ಲಿ ಸೂರ್ಯನ ಬೆಳೆಕು ಬೀಳದೆ ಸಂಪೂರ್ಣ ಕತ್ತಲು ಆವರಿಸುತ್ತದೆ. ಈ ವೇಳೆ ಯಾವುದೇ ಅಧ್ಯಯನ ಸಾಧ್ಯವಿಲ್ಲ. ಹಾಗಾಗಿ 14 ದಿನಗಳ ಅಧ್ಯಯನಕ್ಕೆ ಲ್ಯಾಂಡರ್ ಮತ್ತು ರೋವರ್ ಅನ್ನು ಇಸ್ರೋ ಅಭಿವೃದ್ಧಿಪಡಿಸಿತ್ತು.
ಆ.23ರಂದು ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಮಾಡಿತ್ತು. ಒಂದು ಚಂದ್ರನ ದಿನದ ನಂತರ ವಿಕ್ರಮ್ ಮತ್ತು ಪ್ರಗ್ಯಾನ್ ಕಾರ್ಯಾಚರಣೆ ಸ್ಥಗಿತಗೊಳಿಸಿತು. ಇದಾದ ನಂತರ, ಪುನಃ ಸೆ.20, 21 ಮತ್ತು 22ರಂದು ಅವುಗಳಿಗೆ ಚಾಲನೆ ನೀಡಲು ಇಸ್ರೋ ವಿಜ್ಞಾನಿಗಳು ಪ್ರಯತ್ನಿಸಿದ್ದಾರೆ. ಆದರೆ ಅದು ನಿದ್ರೆಯಿಂದ ಎದ್ದಿಲ್ಲ.
“ಈ ಚಂದ್ರನ ದಿನ ಅಂದರೆ ಮುಂದಿನ 14 ಭೂಮಿಯ ದಿನಗಳವರೆಗೆ ನಾವು ವಿಕ್ರಮ್ ಮತ್ತು ಪ್ರಗ್ಯಾನ್ ಅನ್ನು ಕಾರ್ಯಚಲಿಸುವಂತೆ ಮಾಡಲು ಯತ್ನಿಸುತ್ತೇವೆ. ಕೊನೆ ಕ್ಷಣದವರೆಗೂ ನಾವು ಈ ಪ್ರಯತ್ನವನ್ನು ಮುಂದುವರಿಸಲಿದ್ದು, ಹೆಚ್ಚುವರಿಯಾಗಿ ಚಂದ್ರನ ಅಧ್ಯಯನಕ್ಕೆ ಸಿಗುವ ಯಾವುದೇ ಅವಕಾಶವನ್ನು ನಾವು ತಪ್ಪಿಸಿಕೊಳ್ಳುವುದಿಲ್ಲ’ ಎಂದು ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್ ಗೆ ಬಿಜೆಪಿ ತಿರುಗೇಟು
Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ
Lok Sabha Election: ಬೃಜ್ ಭೂಷಣ್ ಸಿಂಗ್ ಬದಲಿಗೆ ಪುತ್ರನಿಗೆ ಟಿಕೆಟ್ ನೀಡಿದ ಬಿಜೆಪಿ
ಕಾಂಗ್ರೆಸ್ನಿಂದ ಮತ ಬ್ಯಾಂಕ್ ರಾಜಕಾರಣ; ನೇಹಾ ಹತ್ಯೆ ಲವ್ ಜೆಹಾದ್:ಅಮಿತ್ ಶಾ ಆರೋಪ
ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!
MUST WATCH
ಹೊಸ ಸೇರ್ಪಡೆ
Karnataka Lok Sabha Poll: ಮೇ 7ಕ್ಕೆ 2ನೇ ಹಂತದ ಮತದಾನ: ಮತ್ತೆ ಬಸ್ ದರ ದುಪ್ಪಟ್ಟು
KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್ನಿಂದ ಅಲ್ಲ: ಪ್ರಭಾಕರ ಕೋರೆ
Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…
Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…
Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ